AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಹಿಂದೂ ಧರ್ಮದಲ್ಲಿ ರಾಮ ನವಮಿ ಆಚರಣೆಯೂ ಬಹಳ ವಿಶೇಷವಾದದ್ದು. ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ರಾಮನವಮಿ ಆಚರಿಸಲಾಗುತ್ತದೆ. ಇದು ಆದರ್ಶ ಪುರುಷ ಶ್ರೀರಾಮಚಂದ್ರನ ಜನ್ಮದಿನವಾಗಿದೆ. ಈ ಬಾರಿ ಏಪ್ರಿಲ್ 17 ರಂದು ಆಚರಿಸಲಾಗುವ ರಾಮನವಮಿಯಂದು ನಿಮ್ಮ ಪ್ರೀತಿಪಾತ್ರರಿಗೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಈ ರೀತಿಯಾಗಿ ತಿಳಿಸಿದರೆ ನಿಮ್ಮವರು ಖುಷಿಪಡುತ್ತಾರೆ.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 16, 2024 | 10:51 AM

ಪ್ರತಿ ವರ್ಷ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮನವಮಿಯನ್ನು (Ram Navami )ಆಚರಿಸಲಾಗುತ್ತದೆ. ಈ ದಿನ ಭಗವಾನ್ ಶ್ರೀ ರಾಮಚ೦ದ್ರನ ಜನ್ಮದಿನವನ್ನು ಆಚರಿಸುವುದಲ್ಲದೇ, ರಾಮ ಹಾಗೂ ಸೀತೆಯರ ವಿವಾಹದ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಈ ಬಾರಿ ದೇಶದಾದಂತ್ಯ ರಾಮ ನವಮಿ ಹಬ್ಬವನ್ನು ಏಪ್ರಿಲ್ 17 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಾಗಾದ್ರೆ ಈ ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಶುಭಾಶಯವನ್ನು ತಿಳಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಬಹುದು.

ರಾಮನವಮಿಗೆ ಶುಭಾಶಯಗಳನ್ನು ಹೀಗೆ ತಿಳಿಸಿ:

  • ಭಗವಾನ್ ರಾಮನು ನಿಮ್ಮ ಜೀವನಕ್ಕೆ ಸಂತೋಷ, ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ಶಾಂತಿಯನ್ನು ನೀಡಲಿ, ರಾಮ ನವಮಿಯ ಶುಭಾಶಯಗಳು.
  • ಆದರ್ಶ ಪುರುಷ ಶ್ರೀರಾಮ ನಿಮ್ಮ ಜೀವನದಲ್ಲಿ ಐಶ್ವರ್ಯ, ಆರೋಗ್ಯ, ನೆಮ್ಮದಿ ಕರುಣಿಸಲು, ಜೈ ಶ್ರೀ ರಾಮ್ ರಾಮ ನವಮಿ ಹಬ್ಬದ ಶುಭಾಶಯಗಳು.
  • ಜೀವನದಲ್ಲಿ ಕಷ್ಟಗಳು ಎದುರಾದಾಗ ನಾವು ಹೇಗೆ ನಡೆದುಕೊಳ್ಳಬೇಕು ಎಂಬುವುದಕ್ಕೆ ರಾಮನೇ ಆದರ್ಶ ವ್ಯಕ್ತಿಯಾಗಿ ನಿಲ್ಲುತ್ತಾನೆ. ಈ ರಾಮನ ವ್ಯಕ್ತಿತ್ವ ನೋಡಿ ಕಲಿತರೆ ಎಂತಹ ಕಷ್ಟಗಳಿಂದಲೂ ಪಾರಾಗಬಹುದು. ಶ್ರೀ ರಾಮ ನವಮಿಯ ಶುಭಾಶಯಗಳು.
  • ಭಗವಂತ ರಾಮನ ದೈವಿಕ ಅನುಗ್ರಹವು ನಿಮ್ಮೊಂದಿಗೆ ಸದಾ ಇರಲಿ. ಜೀವನದಲ್ಲಿ ಸದಾ ಸಂತೋಷ, ಸಮೃದ್ಧಿ ಸಿಗಲಿ. ರಾಮ ನವಮಿಯ ಶುಭಾಶಯಗಳು.
  • ರಾಮನವಮಿಯ ಪವಿತ್ರ ಸಂದರ್ಭವು ನಿಮ್ಮ ಜೀವನಕ್ಕೆ ಭರವಸೆ, ಶಾಂತಿಯನ್ನು ನೀಡಲಿ.. ರಾಮ ನವಮಿಯ ಶುಭಾಶಯಗಳು.
  • ಈ ವರ್ಷದ ರಾಮನವಮಿಯ ವಿಶೇಷವಾಗಿ ಶ್ರೀ ರಾಮನ ಆಶೀರ್ವಾದ ನಿಮ್ಮ ಮೇಲಿರಲಿ. ನಿಮ್ಮ ಕುಟುಂಬದ ಶಾಂತಿ ಹೆಚ್ಚಿಸಲಿ. ನಿಮಗೂ ನಿಮ್ಮ ಕುಟುಂಬಕ್ಕೂ ರಾಮ ನವಮಿಯ ಶುಭಾಶಯಗಳು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:50 pm, Mon, 15 April 24

73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್