AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ

ಹಿಂದೂ ಧರ್ಮದಲ್ಲಿ ರಾಮ ನವಮಿ ಆಚರಣೆಯೂ ಬಹಳ ವಿಶೇಷವಾದದ್ದು. ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ರಾಮನವಮಿ ಆಚರಿಸಲಾಗುತ್ತದೆ. ಇದು ಆದರ್ಶ ಪುರುಷ ಶ್ರೀರಾಮಚಂದ್ರನ ಜನ್ಮದಿನವಾಗಿದೆ. ಈ ಬಾರಿ ಏಪ್ರಿಲ್ 17 ರಂದು ಆಚರಿಸಲಾಗುವ ರಾಮನವಮಿಯಂದು ನಿಮ್ಮ ಪ್ರೀತಿಪಾತ್ರರಿಗೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಈ ರೀತಿಯಾಗಿ ತಿಳಿಸಿದರೆ ನಿಮ್ಮವರು ಖುಷಿಪಡುತ್ತಾರೆ.

Ram Navami Wishes : ರಾಮನವಮಿಯಂದು ನಿಮ್ಮ ಪ್ರೀತಿ ಪಾತ್ರರಿಗೆ ಹೀಗೆ ಶುಭಕೋರಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Apr 16, 2024 | 10:51 AM

Share

ಪ್ರತಿ ವರ್ಷ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮನವಮಿಯನ್ನು (Ram Navami )ಆಚರಿಸಲಾಗುತ್ತದೆ. ಈ ದಿನ ಭಗವಾನ್ ಶ್ರೀ ರಾಮಚ೦ದ್ರನ ಜನ್ಮದಿನವನ್ನು ಆಚರಿಸುವುದಲ್ಲದೇ, ರಾಮ ಹಾಗೂ ಸೀತೆಯರ ವಿವಾಹದ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಈ ಬಾರಿ ದೇಶದಾದಂತ್ಯ ರಾಮ ನವಮಿ ಹಬ್ಬವನ್ನು ಏಪ್ರಿಲ್ 17 ರಂದು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಹಾಗಾದ್ರೆ ಈ ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಶುಭಾಶಯವನ್ನು ತಿಳಿಸುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಳ್ಳಬಹುದು.

ರಾಮನವಮಿಗೆ ಶುಭಾಶಯಗಳನ್ನು ಹೀಗೆ ತಿಳಿಸಿ:

  • ಭಗವಾನ್ ರಾಮನು ನಿಮ್ಮ ಜೀವನಕ್ಕೆ ಸಂತೋಷ, ಸಮೃದ್ಧಿ, ಉತ್ತಮ ಆರೋಗ್ಯ ಮತ್ತು ಶಾಂತಿಯನ್ನು ನೀಡಲಿ, ರಾಮ ನವಮಿಯ ಶುಭಾಶಯಗಳು.
  • ಆದರ್ಶ ಪುರುಷ ಶ್ರೀರಾಮ ನಿಮ್ಮ ಜೀವನದಲ್ಲಿ ಐಶ್ವರ್ಯ, ಆರೋಗ್ಯ, ನೆಮ್ಮದಿ ಕರುಣಿಸಲು, ಜೈ ಶ್ರೀ ರಾಮ್ ರಾಮ ನವಮಿ ಹಬ್ಬದ ಶುಭಾಶಯಗಳು.
  • ಜೀವನದಲ್ಲಿ ಕಷ್ಟಗಳು ಎದುರಾದಾಗ ನಾವು ಹೇಗೆ ನಡೆದುಕೊಳ್ಳಬೇಕು ಎಂಬುವುದಕ್ಕೆ ರಾಮನೇ ಆದರ್ಶ ವ್ಯಕ್ತಿಯಾಗಿ ನಿಲ್ಲುತ್ತಾನೆ. ಈ ರಾಮನ ವ್ಯಕ್ತಿತ್ವ ನೋಡಿ ಕಲಿತರೆ ಎಂತಹ ಕಷ್ಟಗಳಿಂದಲೂ ಪಾರಾಗಬಹುದು. ಶ್ರೀ ರಾಮ ನವಮಿಯ ಶುಭಾಶಯಗಳು.
  • ಭಗವಂತ ರಾಮನ ದೈವಿಕ ಅನುಗ್ರಹವು ನಿಮ್ಮೊಂದಿಗೆ ಸದಾ ಇರಲಿ. ಜೀವನದಲ್ಲಿ ಸದಾ ಸಂತೋಷ, ಸಮೃದ್ಧಿ ಸಿಗಲಿ. ರಾಮ ನವಮಿಯ ಶುಭಾಶಯಗಳು.
  • ರಾಮನವಮಿಯ ಪವಿತ್ರ ಸಂದರ್ಭವು ನಿಮ್ಮ ಜೀವನಕ್ಕೆ ಭರವಸೆ, ಶಾಂತಿಯನ್ನು ನೀಡಲಿ.. ರಾಮ ನವಮಿಯ ಶುಭಾಶಯಗಳು.
  • ಈ ವರ್ಷದ ರಾಮನವಮಿಯ ವಿಶೇಷವಾಗಿ ಶ್ರೀ ರಾಮನ ಆಶೀರ್ವಾದ ನಿಮ್ಮ ಮೇಲಿರಲಿ. ನಿಮ್ಮ ಕುಟುಂಬದ ಶಾಂತಿ ಹೆಚ್ಚಿಸಲಿ. ನಿಮಗೂ ನಿಮ್ಮ ಕುಟುಂಬಕ್ಕೂ ರಾಮ ನವಮಿಯ ಶುಭಾಶಯಗಳು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:50 pm, Mon, 15 April 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ