AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Chilli Powder: ಕೆಂಪು ಮೆಣಸಿನ ಪುಡಿಯ ಆರೋಗ್ಯ ಪ್ರಯೋಜನಗಳು ಇಲ್ಲಿವೆ

ನಿಮ್ಮ ಪ್ರತಿದಿನದ ಆಹಾರದಲ್ಲಿ ಸರಿಯಾದ ಕ್ರಮದಲ್ಲಿ ಒಂದಿಷ್ಟು ಮೆಣಸಿನ ಪುಡಿಯನ್ನು ಸೇರಿಸಿ. ಮೆಣಸಿನ ಪುಡಿಯಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ. 

Red Chilli Powder: ಕೆಂಪು ಮೆಣಸಿನ ಪುಡಿಯ ಆರೋಗ್ಯ ಪ್ರಯೋಜನಗಳು ಇಲ್ಲಿವೆ
ಕೆಂಪು ಮೆಣಸಿನ ಪುಡಿImage Credit source: Refresh
ಅಕ್ಷತಾ ವರ್ಕಾಡಿ
|

Updated on:Feb 19, 2023 | 2:52 PM

Share

ಭಾರತೀಯ ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಮಸಾಲೆಯನ್ನು ಬಳಸಲಾಗುತ್ತದೆ. ಕೆಂಪು ಮೆಣಸಿನ ಪುಡಿಯನ್ನು ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು. ಆದರೆ ಅತಿಯಾದರೆ ಅಮೃತವು ವಿಷ ಎನ್ನುವ ಮಾತಿಗೆ. ಅತಿಯಾದ ಹೆಚ್ಚಿನ ಖಾರವನ್ನು ಇಷ್ಟ ಪಟ್ಟು ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಆದ್ದರಿಂದ ನಿಮ್ಮ ಪ್ರತಿದಿನದ ಆಹಾರದಲ್ಲಿ ಸರಿಯಾದ ಕ್ರಮದಲ್ಲಿ ಒಂದಿಷ್ಟು ಮೆಣಸಿನ ಪುಡಿಯನ್ನು ಸೇರಿಸಿ. ಮೆಣಸಿನ ಪುಡಿಯಿಂದಾಗುವ ಆರೋಗ್ಯ ಪ್ರಯೋಜನಗಳು ಇಲ್ಲಿವೆ.

ಕೆಂಪು ಮೆಣಸಿನ ಪುಡಿಯ ಆರೋಗ್ಯ ಪ್ರಯೋಜನಗಳು ಇಲ್ಲಿವೆ:

ರಕ್ತದೊತ್ತಡದಿಂದ ಕಾಪಾಡುತ್ತದೆ:

ಹೆಚ್ಚಿನ ಪೊಟ್ಯಾಸಿಯಮ್ ಅಂಶದಿಂದಾಗಿ, ಇದು ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ರಕ್ತದೊತ್ತಡದಿಂದ ನಿಮ್ಮನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮೆಣಸಿನ ಪುಡಿ ಸೇವನೆಯಿಂದ ಆಗುವ ಅನಾನುಕೂಲಗಳು

ತೂಕ ನಷ್ಟಕ್ಕೆ ಸಹಾಯಕ:

ಕೆಂಪು ಮೆಣಸಿನಕಾಯಿಯು ಕ್ಯಾಪ್ಸೈಸಿನ್ ಎಂಬ ಅಂಶವನ್ನು ಹೊಂದಿದ್ದು, ಅದು ದೇಹದ ಚಯಾಪಚಯವನ್ನು ವೇಗಗೊಳಿಸುತ್ತದೆ. ಇದು ನೇರವಾಗಿ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಕೆಂಪು ಮೆಣಸಿನಕಾಯಿಯು ವಿಟಮಿನ್ ಸಿ ಯ ಹೇರಳವಾಗಿದೆ. ಇದು ನಿಮ್ಮ ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳಿಂದ ನಿಮಗೆ ರಕ್ಷಣೆ ನೀಡುತ್ತದೆ.

ನೋವು ಉರಿಯೂತವನ್ನು ಕಡಿಮೆ ಮಾಡುತ್ತದೆ:

ನೀವು ಸ್ನಾಯು ಅಥವಾ ಕೀಲು ನೋವನ್ನು ಹೊಂದಿದ್ದರೆ, ಕೆಂಪು ಮೆಣಸಿನ ಪುಡಿಯನ್ನು ಆಹಾರದಲ್ಲಿ ಸೇರಿಸಿ. ಇದು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.

ಕೂದಲು ಮತ್ತು ಚರ್ಮದ ಆರೋಗ್ಯ ಕಾಪಾಡುತ್ತದೆ:

ಕೆಂಪು ಮೆಣಸು ಅಥವಾ ಪುಡಿಯಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಇದು ನಿಮ್ಮ ಕೂದಲು ಮತ್ತು ತ್ವಚೆಯನ್ನು ಸುಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಸಹಾಯಕ:

ಕೆಂಪು ಮೆಣಸಿನ ಪುಡಿ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ವೇಗಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮಲಬದ್ಧತೆಯಿಂದ ನಿಮ್ಮನ್ನು ಕಾಪಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:51 pm, Sun, 19 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ