AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ದೂರವಾದ ಸಂಬಂಧವನ್ನು ಸುಧಾರಿಸುವುದು ಹೇಗೆ? ಇಲ್ಲಿದೆ ತಜ್ಞರ ಸಲಹೆ

ಕೆಲವೊಮ್ಮೆ ವಿಭಿನ್ನ ಮನಸ್ಥಿತಿಗಳ ಕಾರಣದಿಂದಾಗಿ ಸಂಗಾತಿಗಳ ನಡುವೆ ಮನಸ್ಥಾಪಗಳು ಎದುರಾಗಿ ದೂರವಾಗುತ್ತಾರೆ. ಅಂತಹ ದೂರವಾದ ಪ್ರೇಮ ಸಂಬಂಧವನ್ನು ಮರಳಿ ಪಡೆಯುವ ಕ್ರಮಗಳ ಕುರಿತ ಮಾಹಿತಿ ಇಲ್ಲಿವೆ.

Relationship: ದೂರವಾದ ಸಂಬಂಧವನ್ನು ಸುಧಾರಿಸುವುದು ಹೇಗೆ? ಇಲ್ಲಿದೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 29, 2023 | 6:35 PM

ಕೆಲವೊಮ್ಮೆ ಸಂಗಾತಿಯ ಜೊತೆಗಿನ ಮನಸ್ತಾಪ, ಸಣ್ಣಪುಟ್ಟ ಜಗಳಗಳ ಕಾರಣದಿಂದಾಗಿ ಫೋನ್ ಕಾಲ್, ಮೆಸೇಜ್ ಮಾಡದೇ, ಮುಖಾಮುಖಿ ಭೇಟಿಯಾಗಿ ಮಾತನಾಡದೇ ದೂರವಿರುತ್ತೇವೆ. ಅದು ನಾವು ನಮ್ಮ ಸಂಗಾತಿಯಿಂದ ದೂರವಾಗಿದ್ದೇವೆಯೋ ಅಥವಾ ಸಂಬಂಧ ಮುರಿದು ಬೀಳುತ್ತದೆಯೋ ಎಂಬ ಭಾನವೆಯನ್ನು ಉಂಟುಮಾಡಬಹುದು. ಅಂತಹ ಸಂದರ್ಭಗಳಲ್ಲಿ ಕೋಪವನ್ನು ಪಕ್ಕಕ್ಕಿಟ್ಟು, ಸಂಬಂಧದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿ ಅನ್ಯೋನ್ಯತೆಯಿಂದ ಬಾಳ್ವೆ ನಡೆಸುವುದು ಮುಖ್ಯವಾಗಿರುತ್ತದೆ. ದೂರವಾದ ಸಂಬಂಧಗಳನ್ನು ಸುಧಾರಿಸುವ ಕ್ರಮಗಳು ಇಲ್ಲಿವೆ.

ಪ್ರತ್ಯೇಕತೆಯ ಕಾರಣವನ್ನು ಪ್ರತಿಬಿಂಬಿಸಿ: ಸಂಬಂಧದಲ್ಲಿ ಜಗಳ ಅಥವಾ ಮನಸ್ತಾಪದ ಕಾರಣಗಳಿಂದ ಪ್ರತ್ಯೇಕವಾಗಿರುತ್ತೀರಾ. ಅಂತಹ ಸಂದರ್ಭದಲ್ಲಿ ಆ ಮನಸ್ತಾಪಕ್ಕೆ ಕಾರಣ ಏನೆಂಬುವುದನ್ನು ಗುರುತಿಸಿ, ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಬರೀ ನಿಮ್ಮ ದೃಷ್ಟಿಕೋನದಲ್ಲಿ ಮಾತ್ರ ಯೋಚಿಸದೆ, ನಿಮ್ಮ ಸಂಗಾತಿಯ ದೃಷ್ಟಿಕೋನದಿಂದಲೂ ಯೋಚಿಸುತ್ತಾ, ನೀವು ಜಗಳವಾಡಿ ದೂರವಾದ ತಪ್ಪಿಗೆ ಕ್ಷಮೆಯನ್ನು ಕೇಳಿ. ಆಗ ಅನ್ಯೋನ್ಯತೆಯಿಂದ ಇರಬಹುದು.

ಸಂಪರ್ಕಿಸಿ: ಏನೋ ಒಂದು ಕಾರಣದಿಂದ ದೂರವಾಗಿ ಸಂಗಾತಿಯ ಜೊತೆಗೆ ಮಾತುಕತೆ ಮತ್ತು ಸಂಪರ್ಕವನ್ನು ಕಡಿತಗೊಳಿಸಿರುತ್ತೀರಾ. ಹಾಗೂ ಒಮ್ಮೆ ನೀವು ಪರಿಸ್ಥಿತಿಯನ್ನು ಜಾನ್ಮೆಯಿಂದ ಚೆನ್ನಾಗಿ ಅರ್ಥಮಾಡಿಕೊಂಡರೆ, ಸಂಗಾತಿಯನ್ನು ಸಂಪರ್ಕಿಸಲು ಪ್ರಯತ್ನಿಸಿ. ಫೋನ್ ಕರೆ ಅಥವಾ ಮುಖಾಮುಖಿ ಭೇಟಿಯಾಗಿ ಮಾತನಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿ, ಸಂಬಂಧವನ್ನು ಉಳಿಸಿಕೊಳ್ಳಬಹುದು. ಹಾಗೂ ಮಾಡಿರುವ ತಪ್ಪಿಗೆ ಒಬ್ಬರಿಗೊಬ್ಬರು ಕ್ಷಮೆಯಾಚಿಸಬಹುದು.

ಸಕ್ರಿಯವಾಗಿ ಆಲಿಸಿ: ನೀವು ಒಮ್ಮೆ ಸಂಗಾತಿಯನ್ನು ಮುಖಾಮುಖಿ ಭೇಟಿಯಾದ ನಂತರ ಅವರು ಏನು ಹೇಳುತ್ತಾರೆ ಎಂಬ ಅವರ ಮಾತುಗಳನ್ನು ಸಕ್ರಿಯವಾಗಿ ಕೇಳಿ. ನೀವು ಅವರ ಮೇಲೆ ಕೂಗಾಡದೆ, ಅಥವಾ ಮಾತನಾಡಲು ಅವಕಾಶ ನೀಡುವ ಮೂಲಕ ಅವರಿಗೂ ಅವರ ಭಾವನೆ ಹಾಗೂ ಕಾಳಜಿಯನ್ನು ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ. ಮತ್ತು ಅವರ ಮೇಲೆ ಕೋಪ ಮಾಡದೆ ಪ್ರೀತಿ ತೋರುವ ಮೂಲಕ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.

ಇದನ್ನೂ ಓದಿ: Relationship: ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ

ಜೊತೆಯಾಗಿ ಪರಿಹಾರಗಳನ್ನು ಕಂಡುಕೊಳ್ಳಿ: ಇಬ್ಬರ ದೃಷ್ಟಿಕೋನವನ್ನು ಹಂಚಿಕೊಳ್ಳುವ ಮೂಲಕ, ಸಮಸ್ಯೆಯ ಮೂಲ ಕಾರಣ ಏನೆಂಬುವುದನ್ನು ಅರಿತು, ಸಂಬಂಧವನ್ನು ಸುಧಾರಿಸಲು ಸಹಾಯ ಮಾಡುವ ಪರಿಹಾರಗಳನ್ನು ಹುಡುಹಲು ಜೊತೆಯಾಗಿ ಕೆಲಸ ಮಾಡಿ. ಈ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಇನ್ನೂ ಹೆಚ್ಚಾಗಿ ಅರ್ಥ ಮಾಡಿಕೊಳ್ಳಬಹುದು.

ತಾಳ್ಮೆಯಿಂದಿರಿ: ಸಂಬಂಧವನ್ನು ಪುನರ್‌ನಿರ್ಮಿಸಲು ಸಮಯ ಮತ್ತು ಶ್ರಮ ಬೇಕಾಗುತ್ತದೆ. ಇದಕ್ಕಾಗಿ ತಾಳ್ಮೆಯಿಂದ ಇರುವುದು ತುಂಬಾ ಮುಖ್ಯವಾಗಿರುತ್ತದೆ. ಮತ್ತು ಸಕ್ರಿಯವಾಗಿ ಸಂಗಾತಿಯ ಜೊತೆ ಸಂವಹನ ನಡೆಸುವ ಮೂಲಕ ಸಂಬಮದವನ್ನು ಸುಧಾರಿಸಿಕೊಳ್ಳಬಹುದು. ಪರಸ್ಪರ ಅರ್ಥಮಾಡಿಕೊಂಡು ಮುನ್ನಡೆಯುವ ಮೂಲಕ ಧನಾತ್ಮಕ ಮತ್ತು ಆರೋಗ್ಯಕರ ಸಂಬಂಧವನ್ನು ಬೆಳೆಸಬಹುದು.

Published On - 6:35 pm, Wed, 29 March 23

ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ