AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ

ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ.

Relationship:  ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 29, 2023 | 6:01 PM

ಸಂಬಂಧಗಳಲ್ಲಿ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಪ್ರೀತಿ, ದಾಂಪತ್ಯ ಯಾವುದೇ ಸಂಬಂಧವಾಗಿರಲಿ ಅದು ಶಾಶ್ವತವಾಗಿ ಉಳಿಯಬೇಕೆಂದರೆ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯವಾಗಿರುತ್ತದೆ. ಸಂಗಾತಿಗಳಿಬ್ಬರ ಮಧ್ಯೆ ಯಾವುದೇ ರೀತಿಯ ಮುಚ್ಚು ಮರೆಗಳು ಇರಬಾರದು. ಈ ರೀತಿಯ ಮುಚ್ಚುಮರೆ ಅಥವಾ ಅನುಮಾನಗಳಿದ್ದರೆ ಸಂಬಂಧವು ಕೆಡುತ್ತದೆ. ಆದ್ದರಿಂದ ಆರೋಗ್ಯಕರ ಸಂಬಂಧವನ್ನು ಹೊಂದಲು ಪ್ರೀತಿ, ನಂಬಿಕೆ, ಪ್ರಾಮಾಣಿಕತೆ ಮುಖ್ಯವಾಗಿರುತ್ತದೆ. ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ. ಇದನ್ನು ಉದ್ದೇಶಿಸಿ ಸೈಕೋಥೆರಪಿಸ್ಟ್ ಎಮಿಲಿ ಹೆಚ್ ಸ್ಯಾಂಡರ್ಸ್ ನಾವು ನಿಜವೆಂದು ನಂಬುವ ಸಂಬಂಧಗಳ ಬಗ್ಗೆ ನಾಲ್ಕು ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನಾವು ಕಲಿಯಬೇಕಾದ ಸಂಬಂಧಗಳ ಸತ್ಯಗಳು:

ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ: ಪ್ರತಿ ಸಂಬಂಧದಲ್ಲೂ ಪ್ರಾಮಾಣಿಕತೆಯು ಮುಖ್ಯವಾಗಿದೆ. ನಾವು ನಮ್ಮ ಸಂಗಾತಿಯೊಂದಿಗೆ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಬೇಕು. ಯಾವುದೇ ವಿಷಯಗಳನ್ನು ಮುಚ್ಚಿಟ್ಟುಕೊಳ್ಳಬಾರದು. ನಾವು ಈ ಮೊದಲು ಹೇಳದೇ ಇರುವಂತಹ ವಿಷಯಗಳು ಅಥವಾ ಸತ್ಯಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವ ರೀತಿಯಲ್ಲಿ ಸಹಾನುಭೂತಿ ಇರಬೇಕು. ಸಂಗಾತಿಗೆ ನೋವಾಗದಂತೆ ಪ್ರಾಮಾಣಿಕವಾಗಿ ವಿಷಯಗಳನ್ನು ಹಂಚಿಕೊಳ್ಳಲು ಕಲಿಯಬೇಕು.

ಶೂನ್ಯ ಸಂಘರ್ಷ ಒಳ್ಳೆಯದು: ಸಂಬಂಧದಲ್ಲಿ ಕೊಂಚ ಜಗಳ ಮತ್ತು ಭಿನ್ನಾಭಿಪ್ರಾಯಗಳನ್ನು ಹೊಂದುವುದು ಉತ್ತಮ ಸಂಕೇತವಾಗಿದೆ. ಇದು ಸಂಗಾತಿಗಳಿಬ್ಬರ ಅಭಿಪ್ರಾಯ, ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಮೂಲಕ ಸಂಬಂಧದಲ್ಲಿ ಹೊಂದಾಣಿಕೆಯನ್ನು ಸಾಧಿಸಬಹುದು.

ಇದನ್ನೂ ಓದಿ: Relationship: ಸವಾಲುಗಳ ಮಧ್ಯೆ ಸಂಬಂಧಗಳನ್ನು ಉಳಿಸಿಕೊಳ್ಳುವುದು ಹೇಗೆ?

ಪ್ರೀತಿಯು ಭಾವೋದ್ರಿಕ್ತವಾಗಿರಬೇಕು: ಸಂಬಂಧದಲ್ಲಿ ಅನ್ಯೋನ್ಯತೆ ಎನ್ನುವುದು ತುಂಬಾ ಮುಖ್ಯವಾಗಿರುತ್ತದೆ. ಎಷ್ಟೇ ಭಿನ್ನಾಭಿಪ್ರಾಯಗಳು ಉಂಟಾದರೂ, ಅವೆಲ್ಲವನ್ನು ಸರಿದೂಗಿಸಿಕೊಂಡು ನಂಬಿಕೆಯಿಂದ ಜೀವನ ನಡೆಸಿಕೊಂಡು ಹೋಗಬೇಕು. ಯಾವತ್ತೂ ಯಾವುದೇ ಸಂಬಂಧದಲ್ಲಿ ವ್ಯಾಮೋಹ ಇರಬಾರದು ಬದಲಾಗಿ ನಿಶ್ಕಲ್ಮಷ ಪ್ರೀತಿ ಇರಬೇಕು. ಆಗ ಸಂಬಂಧವು ಶಾಶ್ವತವಾಗಿರುತ್ತದೆ.

ಕ್ಷಮೆಯಾಚಿಸುವುದು: ಕ್ಷಮೆ ಕೆಳುವಂತಹದ್ದು ನಮ್ಮನ್ನು ಸಣ್ಣವರನ್ನಾಗಿ ಮಾಡುವುದಿಲ್ಲ. ಸಣ್ಣಪುಟ್ಟ ಜಗಳವಾದಂತಹ ಸಂದರ್ಭದಲ್ಲಿ ಸಂಬಂಧವನ್ನು ಉಳಿಸಿಕೊಳ್ಳಲು ಒಂದು ಹೆಜ್ಜೆ ಮುಂದೆ ಬಂದು ಸಂಗಾತಿಯ ಬಳಿ ಕ್ಷಮೆ ಕೇಳಬಹುದು. ಇದರಿಂದ ಸಂಬಂಧ ಗಟ್ಟಿಯಾಗುತ್ತದೆಯೇ ವಿನಃ, ಮುರಿದು ಬೀಳುವುದಿಲ್ಲ.

Published On - 6:00 pm, Wed, 29 March 23

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ