AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ

ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ.

Relationship:  ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 29, 2023 | 6:01 PM

Share

ಸಂಬಂಧಗಳಲ್ಲಿ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಪ್ರೀತಿ, ದಾಂಪತ್ಯ ಯಾವುದೇ ಸಂಬಂಧವಾಗಿರಲಿ ಅದು ಶಾಶ್ವತವಾಗಿ ಉಳಿಯಬೇಕೆಂದರೆ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯವಾಗಿರುತ್ತದೆ. ಸಂಗಾತಿಗಳಿಬ್ಬರ ಮಧ್ಯೆ ಯಾವುದೇ ರೀತಿಯ ಮುಚ್ಚು ಮರೆಗಳು ಇರಬಾರದು. ಈ ರೀತಿಯ ಮುಚ್ಚುಮರೆ ಅಥವಾ ಅನುಮಾನಗಳಿದ್ದರೆ ಸಂಬಂಧವು ಕೆಡುತ್ತದೆ. ಆದ್ದರಿಂದ ಆರೋಗ್ಯಕರ ಸಂಬಂಧವನ್ನು ಹೊಂದಲು ಪ್ರೀತಿ, ನಂಬಿಕೆ, ಪ್ರಾಮಾಣಿಕತೆ ಮುಖ್ಯವಾಗಿರುತ್ತದೆ. ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ. ಇದನ್ನು ಉದ್ದೇಶಿಸಿ ಸೈಕೋಥೆರಪಿಸ್ಟ್ ಎಮಿಲಿ ಹೆಚ್ ಸ್ಯಾಂಡರ್ಸ್ ನಾವು ನಿಜವೆಂದು ನಂಬುವ ಸಂಬಂಧಗಳ ಬಗ್ಗೆ ನಾಲ್ಕು ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನಾವು ಕಲಿಯಬೇಕಾದ ಸಂಬಂಧಗಳ ಸತ್ಯಗಳು:

ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ: ಪ್ರತಿ ಸಂಬಂಧದಲ್ಲೂ ಪ್ರಾಮಾಣಿಕತೆಯು ಮುಖ್ಯವಾಗಿದೆ. ನಾವು ನಮ್ಮ ಸಂಗಾತಿಯೊಂದಿಗೆ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಬೇಕು. ಯಾವುದೇ ವಿಷಯಗಳನ್ನು ಮುಚ್ಚಿಟ್ಟುಕೊಳ್ಳಬಾರದು. ನಾವು ಈ ಮೊದಲು ಹೇಳದೇ ಇರುವಂತಹ ವಿಷಯಗಳು ಅಥವಾ ಸತ್ಯಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವ ರೀತಿಯಲ್ಲಿ ಸಹಾನುಭೂತಿ ಇರಬೇಕು. ಸಂಗಾತಿಗೆ ನೋವಾಗದಂತೆ ಪ್ರಾಮಾಣಿಕವಾಗಿ ವಿಷಯಗಳನ್ನು ಹಂಚಿಕೊಳ್ಳಲು ಕಲಿಯಬೇಕು.

ಶೂನ್ಯ ಸಂಘರ್ಷ ಒಳ್ಳೆಯದು: ಸಂಬಂಧದಲ್ಲಿ ಕೊಂಚ ಜಗಳ ಮತ್ತು ಭಿನ್ನಾಭಿಪ್ರಾಯಗಳನ್ನು ಹೊಂದುವುದು ಉತ್ತಮ ಸಂಕೇತವಾಗಿದೆ. ಇದು ಸಂಗಾತಿಗಳಿಬ್ಬರ ಅಭಿಪ್ರಾಯ, ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಮೂಲಕ ಸಂಬಂಧದಲ್ಲಿ ಹೊಂದಾಣಿಕೆಯನ್ನು ಸಾಧಿಸಬಹುದು.

ಇದನ್ನೂ ಓದಿ: Relationship: ಸವಾಲುಗಳ ಮಧ್ಯೆ ಸಂಬಂಧಗಳನ್ನು ಉಳಿಸಿಕೊಳ್ಳುವುದು ಹೇಗೆ?

ಪ್ರೀತಿಯು ಭಾವೋದ್ರಿಕ್ತವಾಗಿರಬೇಕು: ಸಂಬಂಧದಲ್ಲಿ ಅನ್ಯೋನ್ಯತೆ ಎನ್ನುವುದು ತುಂಬಾ ಮುಖ್ಯವಾಗಿರುತ್ತದೆ. ಎಷ್ಟೇ ಭಿನ್ನಾಭಿಪ್ರಾಯಗಳು ಉಂಟಾದರೂ, ಅವೆಲ್ಲವನ್ನು ಸರಿದೂಗಿಸಿಕೊಂಡು ನಂಬಿಕೆಯಿಂದ ಜೀವನ ನಡೆಸಿಕೊಂಡು ಹೋಗಬೇಕು. ಯಾವತ್ತೂ ಯಾವುದೇ ಸಂಬಂಧದಲ್ಲಿ ವ್ಯಾಮೋಹ ಇರಬಾರದು ಬದಲಾಗಿ ನಿಶ್ಕಲ್ಮಷ ಪ್ರೀತಿ ಇರಬೇಕು. ಆಗ ಸಂಬಂಧವು ಶಾಶ್ವತವಾಗಿರುತ್ತದೆ.

ಕ್ಷಮೆಯಾಚಿಸುವುದು: ಕ್ಷಮೆ ಕೆಳುವಂತಹದ್ದು ನಮ್ಮನ್ನು ಸಣ್ಣವರನ್ನಾಗಿ ಮಾಡುವುದಿಲ್ಲ. ಸಣ್ಣಪುಟ್ಟ ಜಗಳವಾದಂತಹ ಸಂದರ್ಭದಲ್ಲಿ ಸಂಬಂಧವನ್ನು ಉಳಿಸಿಕೊಳ್ಳಲು ಒಂದು ಹೆಜ್ಜೆ ಮುಂದೆ ಬಂದು ಸಂಗಾತಿಯ ಬಳಿ ಕ್ಷಮೆ ಕೇಳಬಹುದು. ಇದರಿಂದ ಸಂಬಂಧ ಗಟ್ಟಿಯಾಗುತ್ತದೆಯೇ ವಿನಃ, ಮುರಿದು ಬೀಳುವುದಿಲ್ಲ.

Published On - 6:00 pm, Wed, 29 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ