AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ

ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ.

Relationship:  ದಾಂಪತ್ಯ ಸಂಬಂಧದಲ್ಲಿ ನೀವು ಕಲಿಯಬೇಕಾದ ಸತ್ಯಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 29, 2023 | 6:01 PM

Share

ಸಂಬಂಧಗಳಲ್ಲಿ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಪ್ರೀತಿ, ದಾಂಪತ್ಯ ಯಾವುದೇ ಸಂಬಂಧವಾಗಿರಲಿ ಅದು ಶಾಶ್ವತವಾಗಿ ಉಳಿಯಬೇಕೆಂದರೆ ಪ್ರಾಮಾಣಿಕತೆ ಎನ್ನುವಂತಹದ್ದು ತುಂಬಾನೇ ಮುಖ್ಯವಾಗಿರುತ್ತದೆ. ಸಂಗಾತಿಗಳಿಬ್ಬರ ಮಧ್ಯೆ ಯಾವುದೇ ರೀತಿಯ ಮುಚ್ಚು ಮರೆಗಳು ಇರಬಾರದು. ಈ ರೀತಿಯ ಮುಚ್ಚುಮರೆ ಅಥವಾ ಅನುಮಾನಗಳಿದ್ದರೆ ಸಂಬಂಧವು ಕೆಡುತ್ತದೆ. ಆದ್ದರಿಂದ ಆರೋಗ್ಯಕರ ಸಂಬಂಧವನ್ನು ಹೊಂದಲು ಪ್ರೀತಿ, ನಂಬಿಕೆ, ಪ್ರಾಮಾಣಿಕತೆ ಮುಖ್ಯವಾಗಿರುತ್ತದೆ. ಸಂತೋಷದಾಯಕ ಮತ್ತು ಆರೋಗ್ಯಕರ ಸಂಬಂಧವನ್ನು ಹೊಂದಲು ಈ ಕೆಲವು ಸತ್ಯಗಳನ್ನು ತಿಳಿಯಬೇಕೆಂದು ತಜ್ಞರು ಸಲಹೆ ನೀಡುತ್ತಾರೆ. ಇದನ್ನು ಉದ್ದೇಶಿಸಿ ಸೈಕೋಥೆರಪಿಸ್ಟ್ ಎಮಿಲಿ ಹೆಚ್ ಸ್ಯಾಂಡರ್ಸ್ ನಾವು ನಿಜವೆಂದು ನಂಬುವ ಸಂಬಂಧಗಳ ಬಗ್ಗೆ ನಾಲ್ಕು ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನಾವು ಕಲಿಯಬೇಕಾದ ಸಂಬಂಧಗಳ ಸತ್ಯಗಳು:

ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಿ: ಪ್ರತಿ ಸಂಬಂಧದಲ್ಲೂ ಪ್ರಾಮಾಣಿಕತೆಯು ಮುಖ್ಯವಾಗಿದೆ. ನಾವು ನಮ್ಮ ಸಂಗಾತಿಯೊಂದಿಗೆ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳಬೇಕು. ಯಾವುದೇ ವಿಷಯಗಳನ್ನು ಮುಚ್ಚಿಟ್ಟುಕೊಳ್ಳಬಾರದು. ನಾವು ಈ ಮೊದಲು ಹೇಳದೇ ಇರುವಂತಹ ವಿಷಯಗಳು ಅಥವಾ ಸತ್ಯಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವ ರೀತಿಯಲ್ಲಿ ಸಹಾನುಭೂತಿ ಇರಬೇಕು. ಸಂಗಾತಿಗೆ ನೋವಾಗದಂತೆ ಪ್ರಾಮಾಣಿಕವಾಗಿ ವಿಷಯಗಳನ್ನು ಹಂಚಿಕೊಳ್ಳಲು ಕಲಿಯಬೇಕು.

ಶೂನ್ಯ ಸಂಘರ್ಷ ಒಳ್ಳೆಯದು: ಸಂಬಂಧದಲ್ಲಿ ಕೊಂಚ ಜಗಳ ಮತ್ತು ಭಿನ್ನಾಭಿಪ್ರಾಯಗಳನ್ನು ಹೊಂದುವುದು ಉತ್ತಮ ಸಂಕೇತವಾಗಿದೆ. ಇದು ಸಂಗಾತಿಗಳಿಬ್ಬರ ಅಭಿಪ್ರಾಯ, ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಮೂಲಕ ಸಂಬಂಧದಲ್ಲಿ ಹೊಂದಾಣಿಕೆಯನ್ನು ಸಾಧಿಸಬಹುದು.

ಇದನ್ನೂ ಓದಿ: Relationship: ಸವಾಲುಗಳ ಮಧ್ಯೆ ಸಂಬಂಧಗಳನ್ನು ಉಳಿಸಿಕೊಳ್ಳುವುದು ಹೇಗೆ?

ಪ್ರೀತಿಯು ಭಾವೋದ್ರಿಕ್ತವಾಗಿರಬೇಕು: ಸಂಬಂಧದಲ್ಲಿ ಅನ್ಯೋನ್ಯತೆ ಎನ್ನುವುದು ತುಂಬಾ ಮುಖ್ಯವಾಗಿರುತ್ತದೆ. ಎಷ್ಟೇ ಭಿನ್ನಾಭಿಪ್ರಾಯಗಳು ಉಂಟಾದರೂ, ಅವೆಲ್ಲವನ್ನು ಸರಿದೂಗಿಸಿಕೊಂಡು ನಂಬಿಕೆಯಿಂದ ಜೀವನ ನಡೆಸಿಕೊಂಡು ಹೋಗಬೇಕು. ಯಾವತ್ತೂ ಯಾವುದೇ ಸಂಬಂಧದಲ್ಲಿ ವ್ಯಾಮೋಹ ಇರಬಾರದು ಬದಲಾಗಿ ನಿಶ್ಕಲ್ಮಷ ಪ್ರೀತಿ ಇರಬೇಕು. ಆಗ ಸಂಬಂಧವು ಶಾಶ್ವತವಾಗಿರುತ್ತದೆ.

ಕ್ಷಮೆಯಾಚಿಸುವುದು: ಕ್ಷಮೆ ಕೆಳುವಂತಹದ್ದು ನಮ್ಮನ್ನು ಸಣ್ಣವರನ್ನಾಗಿ ಮಾಡುವುದಿಲ್ಲ. ಸಣ್ಣಪುಟ್ಟ ಜಗಳವಾದಂತಹ ಸಂದರ್ಭದಲ್ಲಿ ಸಂಬಂಧವನ್ನು ಉಳಿಸಿಕೊಳ್ಳಲು ಒಂದು ಹೆಜ್ಜೆ ಮುಂದೆ ಬಂದು ಸಂಗಾತಿಯ ಬಳಿ ಕ್ಷಮೆ ಕೇಳಬಹುದು. ಇದರಿಂದ ಸಂಬಂಧ ಗಟ್ಟಿಯಾಗುತ್ತದೆಯೇ ವಿನಃ, ಮುರಿದು ಬೀಳುವುದಿಲ್ಲ.

Published On - 6:00 pm, Wed, 29 March 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ