AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು

ಗಂಡ ಹೆಂಡತಿಯ ಸಂಬಂಧ ಎನ್ನುವಂತಹದ್ದು, ತುಂಬಾನೇ ಅಮೂಲ್ಯವಾದದ್ದು. ಈ ಸಂಬಂಧ ಗಟ್ಟಿಯಾಗಿ ನಿಲ್ಲುವುದೇ ಪ್ರೀತಿ, ನಂಬಿಕೆಯ ಆಧಾರದ ಮೇಲೆ. ಗಂಡ ಹೆಂಡತಿಯ ಈ ಬಾಂಧವ್ಯ ಶಾಶ್ವತವಾಗಿರಬೇಕಾದರೆ ಇವರಿಬ್ಬರ ಮಧ್ಯೆ ಯಾವುದೇ ರೀತಿಯ ಮುಚ್ಚುಮರೆ ಇರಬಾರದು. ಅದರಲ್ಲೂ ಹೆಂಡತಿಯಾದವಳು ಈ ಒಂದಷ್ಟು ವಿಷಯಗಳನ್ನು ಗಂಡನಿಂದ ಮುಚ್ಚಿಡಲೇಬಾರದಂತೆ. ಆ ವಿಷಯಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹೆಂಡತಿಯಾದವಳು ತನ್ನ ಗಂಡನಿಂದ ಈ ವಿಷಯಗಳನ್ನು ಎಂದಿಗೂ ಮರೆ ಮಾಡಬಾರದು
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: Oct 04, 2025 | 9:15 AM

Share

ಗಂಡ-ಹೆಂಡತಿಯ (Husband and Wife) ಸಂಬಂಧ ನಿಂತಿರುವುದೇ ನಂಬಿಕೆಯ ಆಧಾರದ ಮೇಲೆ. ಇವರಿಬ್ಬರ ನಡುವೆ ಯಾವುದೇ ಮುಚ್ಚುಮರೆ ಇರಬಾರದು. ಪತಿ ಪತ್ನಿ ಯಾವುದೇ ಮುಚ್ಚುಮರೆ ಇಲ್ಲದೆ ಪ್ರತಿಯೊಂದು ವಿಷಯಗಳನ್ನು ಹಂಚಿಕೊಂಡಾಗ ಮಾತ್ರ ಸಂಸಾರ ಸುಸೂತ್ರವಾಗಿ ಸಾಗುತ್ತದೆ. ಹೀಗಿದ್ದರೂ ಕೂಡ ಹೆಂಡತಿ ಗಂಡನಿಂದ, ಗಂಡನಾದವನು ಹೆಂಡತಿಯಿಂದ ಕೆಲವೊಂದಿಷ್ಟು ವಿಚಾರಗಳನ್ನು ಮರೆ ಮಾಡುವಂತಹದ್ದು ನಡೆಯುತ್ತಿರುತ್ತದೆ. ಈ ಅಭ್ಯಾಸ ಖಂಡಿತ ಒಳ್ಳೆಯದಲ್ಲ. ಅದರಲ್ಲೂ ಹೆಂಡತಿಯಾದವಳು ಯಾವುದೇ ಕಾರಣಕ್ಕೂ ತನ್ನ ಗಂಡನಿಂದ ಈ ವಿಷಯಗಳನ್ನು ಮರೆ ಮಾಡಬಾರದಂತೆ. ಅನೇಕ ಮಹಿಳೆಯರು  ಗಂಡನಿಗೆ ತಿಳಿಯದಂತೆ ಅನೇಕ ವಿಷಯಗಳನ್ನು ಮರೆಮಾಡುತ್ತಾರೆ. ಇದು ಇಬ್ಬರ ಸಂಬಂಧವನ್ನು ದುರ್ಬಲಗೊಳಿಸುವ ಸಾಧ್ಯತೆ ಇರುತ್ತದೆ. ಆ ವಿಚಾರಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹೆಂಡತಿಯಾದವಳು ಈ ವಿಚಾರಗಳನ್ನು ಗಂಡನಿಂದ ಮುಚ್ಚಿಡಬಾರದು:

ಹಣದ ವಿಚಾರ: ಹೆಂಡತಿ ತನ್ನ ಸಂಬಳ ಮತ್ತು ಆದಾಯದ ವಿವರಗಳನ್ನು ತನ್ನ ಗಂಡನಿಂದ ಎಂದಿಗೂ ಮರೆಮಾಡಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಯಾರಿಗಾದರೂ ಸಾಲ ನೀಡಿದರೆ ಅಥವಾ ಯಾರಿಂದಾದರೂ ಸಾಲ ಪಡೆದಿದ್ದರೆ ತಕ್ಷಣ ಆ ವಿಷಯವನ್ನು ಹಂಚಿಕೊಳ್ಳಬೇಕು. ಹಣದ ಬಗ್ಗೆ ಯಾವುದೇ ರಹಸ್ಯವಿಲ್ಲದಿದ್ದರೆ ಮಾತ್ರ ಸಂಬಂಧವು ಉತ್ತಮವಾಗಿರುತ್ತದೆ.

ಚಿಂತೆಗಳು ಮತ್ತು ಭಯದ ವಿಚಾರಗಳು:  ಹೆಂಡತಿ ತನ್ನ ಚಿಂತೆಗಳನ್ನು ಗಂಡನಿಂದ ಮರೆಮಾಡಬಾರದು, ತನಗಿರುವ ಭಯದ ಬಗ್ಗೆಯೂ ಗಂಡನಿಂದ ಮರೆ ಮಾಡಬಾರದು. ಇಂತಹ ವಿಚಾರಗಳನ್ನು ಹಂಚಿಕೊಂಡಾಗಲೇ ಭಯ, ಆತಂಕ ಕಡಿಮೆಯಾಗುತ್ತದೆ ಮತ್ತು ಸಂಬಂಧ ಬಲಗೊಳ್ಳುತ್ತದೆ. ಹೀಗೆ ಈ ವಿಚಾರಗಳನ್ನು ಹಂಚಿಕೊಂಡಾಗ ಗಂಡನಿಂದ ನಿಮಗೆ ಬೆಂಬಲವೂ ಸಿಗುತ್ತದೆ.

ಇದನ್ನೂ ಓದಿ
Image
ಈ ವಿಚಾರಗಳನ್ನು ಅಪ್ಪಿತಪ್ಪಿಯೂ ಯಾರೊಂದಿಗೂ ಹಂಚಿಕೊಳ್ಳಬೇಡಿ
Image
ವಿವಾಹಿತ ಪುರುಷರು ಈ ಕೆಲಸಗಳನ್ನು ಎಂದಿಗೂ ಮಾಡಬಾರದು
Image
ಹೆಣ್ಮಕ್ಳು ಸಾಧ್ಯವಾದಷ್ಟು ಇಂತಹ ಜನರಿಂದ ದೂರವಿರಬೇಕು
Image
ಯಾವ ಹುಡ್ಗಿಗೂ ಹುಡುಗರ ಈ ಗುಣಗಳು ಇಷ್ಟವಾಗುವುದಿಲ್ಲವಂತೆ

ಇದನ್ನೂ ಓದಿ: ನಿಮ್ಮ ವಿಚಾರಗಳನ್ನು ಅಪ್ಪಿತಪ್ಪಿಯೂ ಯಾರೊಂದಿಗೂ ಹಂಚಿಕೊಳ್ಳಬಾರದು ಎನ್ನುತ್ತಾರೆ ಚಾಣಕ್ಯ

ಭಾವನೆಗಳನ್ನು ಮರೆಮಾಡಬಾರದು: ಹೆಚ್ಚಿನ ಹೆಣ್ಣುಮಕ್ಕಳು ತಮ್ಮ ಭಾವನೆಗಳನ್ನು ಗಂಡನಿಂದ ಮರೆ ಮಾಡುತ್ತಾರೆ. ಅವರು ಅವುಗಳನ್ನು ಹಂಚಿಕೊಳ್ಳುವುದಿಲ್ಲ. ಹೀಗೆ ಭಾವನೆಗಳನ್ನು ಮರೆ ಮಾಡುವುದರಿಂದ ಸಂಬಂಧ ದುರ್ಬಲಗೊಳ್ಳುತ್ತದೆ. ಇದರ ಬದಲು ನಿಮ್ಮೆಲ್ಲಾ ಭಾವನೆಗಳನ್ನು ಗಂಡನೊಂದಿಗೆ ಶೇರ್‌ ಮಾಡಿ, ಇದು ಅವರೂ ನಿಮ್ಮನ್ನು ಅರ್ಥ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಸಂಬಂಧವನ್ನೂ ಬಲಪಡಿಸುತ್ತದೆ.

ಇಷ್ಟಗಳನ್ನು ಮರೆಮಾಡಬಾರದು: ಹೆಚ್ಚಿನ ಮಹಿಳೆಯರು ತಮ್ಮ ಇಷ್ಟಕಷ್ಟಗಳನ್ನು ಗಂಡನೊಂದಿಗೆ ಹಂಚಿಕೊಳ್ಳದೆ ತಮ್ಮೊಳಗೆ ಮರೆ ಮಾಡಿ ಇಟ್ಟುಕೊಳ್ಳುತ್ತಾರೆ. ಹೀಗೆ ನಿಮಗೆ ಯಾವುದು ಇಷ್ಟ ಮತ್ತು ಯಾವುದು ಕಷ್ಟ ಎಂದು ಅವರಿಗೆ ಹೇಳದಿದ್ದರೆ, ನಿಮ್ಮ ಗಂಡನಿಗೆ ನಿಮ್ಮ ಇಷ್ಟಕಷ್ಟಗಳ ಬಗ್ಗೆ ಗೊತ್ತಾಗುವುದಿಲ್ಲ. ಈ ಎಲ್ಲಾ ವಿಚಾರಗಳನ್ನು ಮರೆ ಮಾಡುವ ಬದಲು ಈ ಬಗ್ಗೆ ಗಂಡನೊಂದಿಗೆ ಮುಕ್ತವಾಗಿ ಮಾತನಾಡಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ