AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ಸಂಗಾತಿಗೆ ಸಂದೇಶವನ್ನು ಕಳುಹಿಸುವಾಗ ಈ ತಪ್ಪುಗಳನ್ನು ಮಾಡಬೇಡಿ, ಕಳ್ಸಿದ್ರೆ ಬ್ರೇಕ್​ಅಪ್ ಸುದ್ದಿ ಕೇಳಲು ಸಿದ್ಧರಾಗಿ

ನಿಮ್ಮ ಪ್ರೀತಿ ಉಳಿಸಿಕೊಳ್ಳಲು ನೀವು ಸಂಗಾತಿ ಜತೆಗೆ ಹೆಚ್ಚು ಸಮಯವನ್ನು ಕಳೆಯುವುದು ಬಹಳ ಮುಖ್ಯವಾಗಿರುತ್ತದೆ. ಆದರೆ ಇಂದಿನ ಬಿಡುವಿಲ್ಲದ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ, ದಂಪತಿ ದೀರ್ಘಕಾಲ ಒಟ್ಟಿಗೆ ಇರಲು ಸಾಧ್ಯವಾಗುವುದಿಲ್ಲ.

Relationship Tips: ಸಂಗಾತಿಗೆ ಸಂದೇಶವನ್ನು ಕಳುಹಿಸುವಾಗ ಈ ತಪ್ಪುಗಳನ್ನು ಮಾಡಬೇಡಿ, ಕಳ್ಸಿದ್ರೆ ಬ್ರೇಕ್​ಅಪ್ ಸುದ್ದಿ ಕೇಳಲು ಸಿದ್ಧರಾಗಿ
Mobile
TV9 Web
| Edited By: |

Updated on: Sep 12, 2022 | 2:16 PM

Share

ನಿಮ್ಮ ಪ್ರೀತಿ ಉಳಿಸಿಕೊಳ್ಳಲು ನೀವು ಸಂಗಾತಿ ಜತೆಗೆ ಹೆಚ್ಚು ಸಮಯವನ್ನು ಕಳೆಯುವುದು ಬಹಳ ಮುಖ್ಯವಾಗಿರುತ್ತದೆ. ಆದರೆ ಇಂದಿನ ಬಿಡುವಿಲ್ಲದ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದಾಗಿ, ದಂಪತಿ ದೀರ್ಘಕಾಲ ಒಟ್ಟಿಗೆ ಇರಲು ಸಾಧ್ಯವಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಇಬ್ಬರೂ ಹತ್ತಿರವಿಲ್ಲದಿದ್ದಾಗ, ಮೊಬೈಲ್​ನಲ್ಲಿ ಸಂದೇಶಗಳನ್ನು ಕಳುಹಿಸುವ ಮೂಲಕ ಮಾತನಾಡಲು ಸಾಧ್ಯವಿದೆ, ಏಕೆಂದರೆ ಕಚೇರಿ ಸಮಯದಲ್ಲಿ ಕಾಲ್ ಮಾಡಲು ಸಾಧ್ಯವಿರುವುದಿಲ್ಲ.

ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ಒಬ್ಬರಿಗೊಬ್ಬರು ಸಂದೇಶ ಕಳುಹಿಸುವಲ್ಲಿ ಸ್ವಲ್ಪ ಕಾಳಜಿ ವಹಿಸಬೇಕಿದೆ. ನೀವು ಮತ್ತೆ ಮತ್ತೆ ಕೆಲವು ತಪ್ಪುಗಳನ್ನು ಮಾಡುತ್ತಿದ್ದೀರಿ ಮತ್ತು ನಿಮ್ಮ ಸಂಗಾತಿಗೆ ಈ ವಿಷಯ ಇಷ್ಟವಾಗುವುದಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಸಂಬಂಧವು ಮುರಿದುಹೋಗಬಹುದು. ಸಂದೇಶ ಕಳುಹಿಸುವಾಗ ತಪ್ಪಿಸಬೇಕಾದ ತಪ್ಪುಗಳು ಯಾವುವು? ಇಲ್ಲಿದೆ ಮಾಹಿತಿ.

ನಿಮ್ಮ ಸಂಗಾತಿಗೆ ಸಂದೇಶ ಕಳುಹಿಸುವಾಗ ಈ ತಪ್ಪುಗಳನ್ನು ಮಾಡಬೇಡಿ ನಿರಂತರವಾಗಿ ಮೆಸೇಜ್ ಮಾಡಬೇಡಿ ಕೆಲವು ಜನರು ತಮ್ಮ ಪ್ರೀತಿ ಅಥವಾ ಕಾಳಜಿಯನ್ನು ತೋರಿಸಲು ತಮ್ಮ ಪ್ರೀತಿಯ ಸಂಗಾತಿಗೆ ನಿರಂತರವಾಗಿ ಸಂದೇಶಗಳನ್ನು ಕಳುಹಿಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಅನೇಕ ಬಾರಿ ಅವರು ಯಾವುದೋ ಕೆಲಸದಲ್ಲಿ ನಿರತಳಾಗಿರುತ್ತಾರೆ ಮತ್ತು ನಿಮ್ಮ ಸಂದೇಶದಿಂದ ಮತ್ತೆ ಮತ್ತೆ ತೊಂದರೆಗೊಳಗಾಗುತ್ತಾರೆ. ಸಂದೇಶ ಕಳುಹಿಸುವ ಮೊದಲು, ಆ ವ್ಯಕ್ತಿಯು ಫ್ರೀ ಇದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮೂಡುವ ಕೋಪವು ನಿಮ್ಮ ಸಂಬಂಧದಲ್ಲಿ ಬಿರುಕು ಮೂಡಿಸಬಹುದು.

ಸಂದೇಶದಲ್ಲಿ ವಿವರವಾದ ಚಾಟ್ ಮಾಡಬೇಡಿ ನಿಮ್ಮ ಸಂಗಾತಿಯ ಮೂಲ ಸ್ವಭಾವವನ್ನು ನೀವು ಅರ್ಥಮಾಡಿಕೊಳ್ಳಬೇಕು, ಅನೇಕ ಬಾರಿ ಕೆಲವು ಜನರು ಸಂದೇಶದಲ್ಲಿ ಬರೆಯುವ ಮೂಲಕ ವಿವರವಾದ ಚಾಟ್ ಮಾಡಲು ಇಷ್ಟಪಡುವುದಿಲ್ಲ. ನೀವು ದೀರ್ಘಕಾಲ ಮಾತನಾಡಲು ಬಯಸಿದರೆ, ಸರಿಯಾದ ಸಮಯಕ್ಕಾಗಿ ಕಾಯುವುದು ಮತ್ತು ದೀರ್ಘಕಾಲ ಮಾತನಾಡುವುದು ಉತ್ತಮ. ಹೀಗೆ ಮಾಡುವುದರಿಂದ ಸಂಗಾತಿಗೆ ಸುಲಭವಾಗುತ್ತದೆ.

ಒಂದೇ ಪ್ರಶ್ನೆಯನ್ನು ಪದೇ ಪದೇ ಕೇಳಬೇಡಿ ಕೆಲವೊಮ್ಮೆ ಸಂಗಾತಿಯ ಬಳಿ ಕೇಳಿದ್ದೇ ಪ್ರಶ್ನೆಯನ್ನು ಪದೇ ಪದೇ ಕೇಳುತ್ತೀವೆ ಇದರಿಂದ ಅವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ ಇರುತ್ತದೆ. ಈ ಪ್ರಶ್ನೆಗಳು ಅವರಿಗೆ ಅಹಿತಕರವೆನಿಸಬಹುದು, ಒಂದೊಮ್ಮೆ ನಿಮ್ಮ ಪ್ರಶ್ನೆಗೆ ಆ ಕಡೆಯಿಂದ ಉತ್ತರ ಬರುವಲ್ಲಿ ತಡವಾಯಿತು ಎನ್ನುವಾಗ ನೀವು ಮತ್ತೇನೋ ಪ್ರಶ್ನೆಗಳನ್ನು ಕೇಳಿ ವಿನಾಕಾರಣ ಅವರ ಕೋಪಕ್ಕೆ ಕಾರಣರಾಗಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ