AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice for Breakfast: ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನಬಹುದೇ? ತಜ್ಞರು ಹೇಳುವುದೇನು?

ಬೆಳಗಿನ ತಿಂಡಿಗೆ ಅನ್ನ ತಿನ್ನಬಹುದೇ? ಅನ್ನ ತಿಂದರೆ ಏನಾಗುತ್ತದೆ? ಅನೇಕರಿಗೆ ಈ ಸಂದೇಹವಿದೆ. ಮನೆಯ ಹಿರಿಯರು ಈಗಲೂ ಕೂಡ ಬೆಳಗಿನ ಉಪಾಹಾರಕ್ಕೆ ಗಂಜಿ ಅನ್ನ, ಮಜ್ಜಿಗೆ ಅನ್ನ ತಿನ್ನುತ್ತಾರೆ. ಆದ್ದರಿಂದ ಬೆಳಗಿನ ಉಪಹಾರಕ್ಕೆ ಅನ್ನ ತಿನ್ನುವುದರಿಂದ ಸಿಗುವ ಲಾಭವೇನು? ಹಾಗೂ ಬೆಳಗ್ಗೆ ಅನ್ನ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Rice for Breakfast: ಬೆಳಗಿನ ಉಪಾಹಾರಕ್ಕೆ  ಅನ್ನ ತಿನ್ನಬಹುದೇ? ತಜ್ಞರು ಹೇಳುವುದೇನು?
Rice for Breakfast
Follow us
ಅಕ್ಷತಾ ವರ್ಕಾಡಿ
|

Updated on: Dec 12, 2023 | 2:47 PM

ಬೆಳಗಿನ ತಿಂಡಿಗೆ ಕೆಲವರು ದೋಸೆ,ಇಡ್ಲಿ ತಿನ್ನಲು ಬಯಸಿದರೆ, ಕೆಲವೊಂದಿಷ್ಟು ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ಮನೆಗಳಲ್ಲಿ ಈಗಲೂ ಕೂಡ ಮನೆಯ ಹಿರಿಯರು ಬೆಳಗಿನ ಉಪಾಹಾರಕ್ಕೆ ಗಂಜಿ ಅನ್ನ, ಮಜ್ಜಿಗೆ ಅನ್ನ ತಿನ್ನುತ್ತಾರೆ. ಬೆಳಗಿನ ತಿಂಡಿಗೆ ಅನ್ನ ತಿನ್ನಬಹುದೇ? ಅನ್ನ ತಿಂದರೆ ಏನಾಗುತ್ತದೆ? ಅನೇಕರಿಗೆ ಈ ಸಂದೇಹವಿದೆ. ಆದರೆ ಬೆಳಗಿನ ಉಪಾಹಾರಕ್ಕೆ ಅನ್ನ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಅನ್ನ ದೇಹಕ್ಕೆ ಶಕ್ತಿ ನೀಡುತ್ತದೆ ಹಾಗೂ ದಿನ ಪೂರ್ತಿ ಕ್ರಿಯಾಶೀಲವಾಗಿರಿಸುತ್ತದೆ. ಬೀನ್ಸ್, ಕ್ಯಾರೆಟ್, ಪಾಲಕ್ ಮತ್ತು ಬಟಾಣಿಗಳಂತಹ ತರಕಾರಿಗಳನ್ನು ಸೇರಿಸಿ ಅನ್ನ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ.

ಮಧುಮೇಹದ ಹೆಚ್ಚಿದ ಅಪಾಯ:

ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು. ಇದು ನೀವು ಆಯ್ಕೆ ಮಾಡುವ ಅಕ್ಕಿಯನ್ನು ಅವಲಂಬಿಸಿರುತ್ತದೆ. ಅಲ್ಲದೆ, ವಿನೆಗರ್ ಅಥವಾ ತೆಂಗಿನ ಎಣ್ಣೆಯಿಂದ ಮಾಡಿದ ಅನ್ನವನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಸಾಧ್ಯತೆಯಿದೆ. ಹಾಗಾಗಿ ಮುಂಜಾನೆ ಅನ್ನ ತಿನ್ನಬೇಕೆಂದಿದ್ದರೆ ಹಿತಮಿತವಾಗಿ ತಿನ್ನುವುದು ಒಳ್ಳೆಯದು.

ತೂಕ ಹೆಚ್ಚಾಗಬಹುದು:

ಹಾಗೆಯೇ ತೂಕ ಇಳಿಸಿಕೊಳ್ಳಲು ಬಯಸುವವರು ಬೆಳಗಿನ ಉಪಾಹಾರಕ್ಕೆ ಅನ್ನವನ್ನು ತೆಗೆದುಕೊಳ್ಳಬಾರದು. ಮಿತವಾಗಿ ತಿಂದರೆ ಕ್ಷೇಮ, ಹೆಚ್ಚು ತಿಂದರೆ ತೂಕ ಹೆಚ್ಚುತ್ತದೆ. ಏಕೆಂದರೆ ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್ ಅಧಿಕವಾಗಿರುತ್ತದೆ.  ಏಕೆಂದರೆ ಅಕ್ಕಿ ಕಡಿಮೆ ಕೊಬ್ಬು, ಸಕ್ಕರೆ ಮತ್ತು ಸೋಡಿಯಂ ಆಹಾರವಾಗಿದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಕಡಿಮೆ ಪ್ರಮಾಣದಲ್ಲಿ ಅನ್ನವನ್ನು ಸೇವಿಸಬಹುದು.

ಇದನ್ನೂ ಓದಿ: ಪ್ರತಿದಿನ ಬೆಳಿಗ್ಗೆ ಈ ಚಹಾ ಕುಡಿಯುವುದರಿಂದ ಮಧುಮೇಹವನ್ನು ತಡೆಯಬಹುದು

ಜೀರ್ಣಕ್ರಿಯೆಗೆ ಒಳ್ಳೆಯದು:

ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನುವುದು ಜೀರ್ಣಕ್ರಿಯೆಯ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ, ಇದು ಸುಲಭವಾಗಿ ಜೀರ್ಣವಾಗುತ್ತದೆ. ಇದು ಅತಿಸಾರದ ಸಮಸ್ಯೆಯನ್ನು ಸಹ ಕಡಿಮೆ ಮಾಡುತ್ತದೆ. ಇದು ಕರುಳಿನಲ್ಲಿ ಪ್ರಯೋಜನಕಾರಿ ಬ್ಯಾಕ್ಟೀರಿಯಾವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಮಿತವಾಗಿ ತೆಗೆದುಕೊಳ್ಳುವುದು ಉತ್ತಮ:

ಯಾವುದೇ ಅನುಮಾನವಿಲ್ಲದೆ ಅನ್ನವನ್ನು ಉಪಹಾರವಾಗಿ ತೆಗೆದುಕೊಳ್ಳಬಹುದು ಆದರೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಡಿ. ಅನ್ನ ಮಿತವಾಗಿ ತೆಗೆದುಕೊಂಡರೆ ತುಂಬಾ ಒಳ್ಳೆಯದು. ಆದರೆ ಬೆಳಗ್ಗೆ ಮತ್ತು ಮಧ್ಯಾಹ್ನ ಅನ್ನ ತಿನ್ನುವವರು ರಾತ್ರಿಯೂ ಅನ್ನ ತಿನ್ನುವುದನ್ನು ತಪ್ಪಿಸಬೇಕು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ