AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice for Breakfast: ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನಬಹುದೇ? ತಜ್ಞರು ಹೇಳುವುದೇನು?

ಬೆಳಗಿನ ತಿಂಡಿಗೆ ಅನ್ನ ತಿನ್ನಬಹುದೇ? ಅನ್ನ ತಿಂದರೆ ಏನಾಗುತ್ತದೆ? ಅನೇಕರಿಗೆ ಈ ಸಂದೇಹವಿದೆ. ಮನೆಯ ಹಿರಿಯರು ಈಗಲೂ ಕೂಡ ಬೆಳಗಿನ ಉಪಾಹಾರಕ್ಕೆ ಗಂಜಿ ಅನ್ನ, ಮಜ್ಜಿಗೆ ಅನ್ನ ತಿನ್ನುತ್ತಾರೆ. ಆದ್ದರಿಂದ ಬೆಳಗಿನ ಉಪಹಾರಕ್ಕೆ ಅನ್ನ ತಿನ್ನುವುದರಿಂದ ಸಿಗುವ ಲಾಭವೇನು? ಹಾಗೂ ಬೆಳಗ್ಗೆ ಅನ್ನ ತಿನ್ನುವುದರಿಂದಾಗುವ ಅಡ್ಡ ಪರಿಣಾಮಗಳಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Rice for Breakfast: ಬೆಳಗಿನ ಉಪಾಹಾರಕ್ಕೆ  ಅನ್ನ ತಿನ್ನಬಹುದೇ? ತಜ್ಞರು ಹೇಳುವುದೇನು?
Rice for Breakfast
ಅಕ್ಷತಾ ವರ್ಕಾಡಿ
|

Updated on: Dec 12, 2023 | 2:47 PM

Share

ಬೆಳಗಿನ ತಿಂಡಿಗೆ ಕೆಲವರು ದೋಸೆ,ಇಡ್ಲಿ ತಿನ್ನಲು ಬಯಸಿದರೆ, ಕೆಲವೊಂದಿಷ್ಟು ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ಮನೆಗಳಲ್ಲಿ ಈಗಲೂ ಕೂಡ ಮನೆಯ ಹಿರಿಯರು ಬೆಳಗಿನ ಉಪಾಹಾರಕ್ಕೆ ಗಂಜಿ ಅನ್ನ, ಮಜ್ಜಿಗೆ ಅನ್ನ ತಿನ್ನುತ್ತಾರೆ. ಬೆಳಗಿನ ತಿಂಡಿಗೆ ಅನ್ನ ತಿನ್ನಬಹುದೇ? ಅನ್ನ ತಿಂದರೆ ಏನಾಗುತ್ತದೆ? ಅನೇಕರಿಗೆ ಈ ಸಂದೇಹವಿದೆ. ಆದರೆ ಬೆಳಗಿನ ಉಪಾಹಾರಕ್ಕೆ ಅನ್ನ ಒಳ್ಳೆಯದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಅನ್ನ ದೇಹಕ್ಕೆ ಶಕ್ತಿ ನೀಡುತ್ತದೆ ಹಾಗೂ ದಿನ ಪೂರ್ತಿ ಕ್ರಿಯಾಶೀಲವಾಗಿರಿಸುತ್ತದೆ. ಬೀನ್ಸ್, ಕ್ಯಾರೆಟ್, ಪಾಲಕ್ ಮತ್ತು ಬಟಾಣಿಗಳಂತಹ ತರಕಾರಿಗಳನ್ನು ಸೇರಿಸಿ ಅನ್ನ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ.

ಮಧುಮೇಹದ ಹೆಚ್ಚಿದ ಅಪಾಯ:

ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಬಹುದು. ಇದು ನೀವು ಆಯ್ಕೆ ಮಾಡುವ ಅಕ್ಕಿಯನ್ನು ಅವಲಂಬಿಸಿರುತ್ತದೆ. ಅಲ್ಲದೆ, ವಿನೆಗರ್ ಅಥವಾ ತೆಂಗಿನ ಎಣ್ಣೆಯಿಂದ ಮಾಡಿದ ಅನ್ನವನ್ನು ತಿನ್ನುವುದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಸಾಧ್ಯತೆಯಿದೆ. ಹಾಗಾಗಿ ಮುಂಜಾನೆ ಅನ್ನ ತಿನ್ನಬೇಕೆಂದಿದ್ದರೆ ಹಿತಮಿತವಾಗಿ ತಿನ್ನುವುದು ಒಳ್ಳೆಯದು.

ತೂಕ ಹೆಚ್ಚಾಗಬಹುದು:

ಹಾಗೆಯೇ ತೂಕ ಇಳಿಸಿಕೊಳ್ಳಲು ಬಯಸುವವರು ಬೆಳಗಿನ ಉಪಾಹಾರಕ್ಕೆ ಅನ್ನವನ್ನು ತೆಗೆದುಕೊಳ್ಳಬಾರದು. ಮಿತವಾಗಿ ತಿಂದರೆ ಕ್ಷೇಮ, ಹೆಚ್ಚು ತಿಂದರೆ ತೂಕ ಹೆಚ್ಚುತ್ತದೆ. ಏಕೆಂದರೆ ಅಕ್ಕಿಯಲ್ಲಿ ಕಾರ್ಬೋಹೈಡ್ರೇಟ್ ಅಧಿಕವಾಗಿರುತ್ತದೆ.  ಏಕೆಂದರೆ ಅಕ್ಕಿ ಕಡಿಮೆ ಕೊಬ್ಬು, ಸಕ್ಕರೆ ಮತ್ತು ಸೋಡಿಯಂ ಆಹಾರವಾಗಿದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಕಡಿಮೆ ಪ್ರಮಾಣದಲ್ಲಿ ಅನ್ನವನ್ನು ಸೇವಿಸಬಹುದು.

ಇದನ್ನೂ ಓದಿ: ಪ್ರತಿದಿನ ಬೆಳಿಗ್ಗೆ ಈ ಚಹಾ ಕುಡಿಯುವುದರಿಂದ ಮಧುಮೇಹವನ್ನು ತಡೆಯಬಹುದು

ಜೀರ್ಣಕ್ರಿಯೆಗೆ ಒಳ್ಳೆಯದು:

ಬೆಳಗಿನ ಉಪಾಹಾರಕ್ಕೆ ಅನ್ನ ತಿನ್ನುವುದು ಜೀರ್ಣಕ್ರಿಯೆಯ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ, ಇದು ಸುಲಭವಾಗಿ ಜೀರ್ಣವಾಗುತ್ತದೆ. ಇದು ಅತಿಸಾರದ ಸಮಸ್ಯೆಯನ್ನು ಸಹ ಕಡಿಮೆ ಮಾಡುತ್ತದೆ. ಇದು ಕರುಳಿನಲ್ಲಿ ಪ್ರಯೋಜನಕಾರಿ ಬ್ಯಾಕ್ಟೀರಿಯಾವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಮಿತವಾಗಿ ತೆಗೆದುಕೊಳ್ಳುವುದು ಉತ್ತಮ:

ಯಾವುದೇ ಅನುಮಾನವಿಲ್ಲದೆ ಅನ್ನವನ್ನು ಉಪಹಾರವಾಗಿ ತೆಗೆದುಕೊಳ್ಳಬಹುದು ಆದರೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬೇಡಿ. ಅನ್ನ ಮಿತವಾಗಿ ತೆಗೆದುಕೊಂಡರೆ ತುಂಬಾ ಒಳ್ಳೆಯದು. ಆದರೆ ಬೆಳಗ್ಗೆ ಮತ್ತು ಮಧ್ಯಾಹ್ನ ಅನ್ನ ತಿನ್ನುವವರು ರಾತ್ರಿಯೂ ಅನ್ನ ತಿನ್ನುವುದನ್ನು ತಪ್ಪಿಸಬೇಕು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್