AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice Pakoda Recipe: ಮನೆಯಲ್ಲಿಯೇ ಗರಿ ಗರಿಯಾಗಿ ಅಕ್ಕಿ ಪಕೋಡ ತಯಾರಿಸಿ

ರಾತ್ರಿ ಉಳಿದಿರುವ ಅನ್ನವನ್ನು ಮರುದಿನ ಬಿಸಾಡುವ ಬದಲು ಅದರಿಂದ ಒಂದು ರುಚಿಯಾದ ರೆಸಿಪಿಯನ್ನು ತಯಾರಿಸಬಹುದು. ಆದ್ದರಿಂದ ನೀವು ಸಂಜೆಯ ಟೀ ಗೆ ಸುಲಭವಾಗಿ ಹಾಗೂ ಬೇಗ ತಯಾರಿಸಬಹುದಾದ ಅಕ್ಕಿಯ ಪಕೋಡದ ಪಾಕ ವಿಧಾನ ಇಲ್ಲಿದೆ.

Rice Pakoda Recipe: ಮನೆಯಲ್ಲಿಯೇ ಗರಿ ಗರಿಯಾಗಿ ಅಕ್ಕಿ ಪಕೋಡ ತಯಾರಿಸಿ
ಅಕ್ಕಿ ಪಕೋಡ ರೆಸಿಪಿ Image Credit source: NDTV
ಅಕ್ಷತಾ ವರ್ಕಾಡಿ
|

Updated on:Feb 11, 2023 | 5:21 PM

Share

ಸಂಜೆಯ ಚಹಾದ ಸಮಯದಲ್ಲಿ ಗರಿ ಗರಿಯಾಗಿ ಕರಿದ ತಿಂಡಿಯನ್ನು ತಿನ್ನಬೇಕೆನಿಸುವುದು ಸಹಜ. ಆದ್ದರಿಂದ ನೀವು ವಿಭಿನ್ನ ರುಚಿಯನ್ನು ನೀಡುವ ಅಕ್ಕಿಯ ಪಕೋಡವನ್ನು ತಯಾರಿಸಿ. ನೀವಿದನ್ನು ಕೇವಲ 5ರಿಂದ 10 ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ರಾತ್ರಿ ಉಳಿದಿರುವ ಅನ್ನವನ್ನು ಮರುದಿನ ಬಿಸಾಡುವ ಬದಲು ಅದರಿಂದ ಒಂದು ರುಚಿಯಾದ ರೆಸಿಪಿಯನ್ನು ತಯಾರಿಸಬಹುದು. ಆದ್ದರಿಂದ ನೀವು ಸಂಜೆಯ ಟೀ ಗೆ ಸುಲಭವಾಗಿ ಹಾಗೂ ಬೇಗ ತಯಾರಿಸಬಹುದಾದ ಅಕ್ಕಿಯ ಪಕೋಡದ ಪಾಕ ವಿಧಾನ ಇಲ್ಲಿದೆ.

ಅಕ್ಕಿ ಪಕೋಡ ರೆಸಿಪಿ

ಬೇಕಾಗುವ ಸಾಮಾಗ್ರಿಗಳು:

1 ಕಪ್​​ ಅನ್ನ ಸ್ವಲ್ಪ ಅಕ್ಕಿ ಹಿಟ್ಟು ಚಿಕ್ಕದಾಗಿ ಕತ್ತರಿಸಿದ 2 ಈರುಳ್ಳಿ ಚಿಕ್ಕ ತುಂಡು ಶುಂಠಿ ಕೊತ್ತಂಬರಿ ಸೊಪ್ಪು 1ಚಮಚ ಕೊತ್ತಂಬರಿ ಮತ್ತು ಜೀರಿಗೆ ಪುಡಿ ಚಿಕ್ಕದಾಗಿ ಕತ್ತರಿಸಿದ ಹಸಿ ಮೆಣಸಿನ ಕಾಯಿ 1/2 ಚಮಚ ಕೆಂಪು ಮೆಣಸಿನ ಪುಡಿ 1/2 ಚಮಚ ಅರಶಿನ ಪುಡಿ ರುಚಿಗೆ ತಕ್ಕಷ್ಟು ಉಪ್ಪು

ಇದನ್ನೂ ಓದಿ: ಮಲೆನಾಡಿನ ಪಾರಂಪರಿಕ ಗರಿ ಗರಿಯಾದ ತೊಡೆದೇವು ಸಿಹಿ ಖಾದ್ಯ ಮಾಡುವ ವಿಧಾನ ಇಲ್ಲಿದೆ

ಅಕ್ಕಿ ಪಕೋಡ ಮಾಡುವ ವಿಧಾನ:

ಹಂತ :1

ಅನ್ನವನ್ನು ಮೊದಲು ಚೆನ್ನಾಗಿ ಹಿಸುಕಿ. ನಂತರ ಅದಕ್ಕೆ ಎಣ್ಣೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಪದಾರ್ಥವನ್ನು ಹಾಕಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ನೀರು ಸೇರಿಸಿ, ಹಿಟ್ಟು ದಪ್ಪವಾಗಿರಲಿ.

ಹಂತ: 2

ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಎಣ್ಣೆ ಬಿಸಿಯಾಗುತ್ತಿದ್ದಂತೆ ಅದಕ್ಕೆ ಹಿಟ್ಟನ್ನು ಚಿಕ್ಕ ಉಂಡೆಯನ್ನಾಗಿ ಮಾಡಿ, ಎಣ್ಣೆಯಲ್ಲಿ ಫ್ರೈ ಮಾಡಿ. ಗೋಲ್ಡನ್ ಬಣ್ಣಕ್ಕೆ ಬರುವವರೆಗೆ ಚೆನ್ನಾಗಿ ಕರಿಯಿರಿ. ಈಗ ಗರಿ ಗರಿಯಾದ ಅಕ್ಕಿ ಪಕೋಡ ಸಿದ್ಧವಾಗಿದೆ. ನೀವಿದನ್ನು ಸಂಜೆಯ ಚಹಾದ ಸಮಯದಲ್ಲಿ ಸವಿಯಬಹುದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:21 pm, Sat, 11 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ