AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ರನ್ನಿಂಗ್​ ಮಾಡುವ ಅಭ್ಯಾಸ ಇದೆಯೇ? ಈ ವಿಷಯಗಳನ್ನು ನೀವು ತಿಳಿಯಲೇಬೇಕು

ರನ್ನಿಂಗ್​ ಮಾಡುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಹಾಗಾಗಿ ಪ್ರತಿನಿತ್ಯ ಓಡುವ ಅಭ್ಯಾಸದಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿನಿತ್ಯ ರನ್ನಿಂಗ್​ ಮಾಡುವ ಅಭ್ಯಾಸ ಇದೆಯೇ? ಈ ವಿಷಯಗಳನ್ನು ನೀವು ತಿಳಿಯಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 20, 2021 | 1:19 PM

Share

ಎಲ್ಲರಿಗೂ ತಿಳಿದಿರುವಂತೆ ವ್ಯಾಯಾಮವು ಆರೋಗ್ಯಕರ ಜೀವನಕ್ಕೆ ಅಡಿಪಾಯವಾಗಿದೆ. ಪ್ರತಿನಿತ್ಯ ಓಡುವುದರಿಂದ ನಮ್ಮ ದೇಹ ಸದೃಢವಾಗಿರಲು ಸಹಾಯಕವಾಗಿದೆ. ಯಾವ ವಯಸ್ಸಿನಲ್ಲಿಯೂ ಸಹ ಹೆಚ್ಚು ಆ್ಯಕ್ಟೀವ್ ಆಗಿರಲು ಓಟವು ಅತ್ಯಂತ ಒಳ್ಳೆಯ ವ್ಯಾಯಾಮ. ಇದು ದೇಹದ ಒಟ್ಟಾರೆ ಯೋಗಕ್ಷೇಮಕ್ಕೆ ಪ್ರಯೋಜನವನ್ನು ನೀಡುತ್ತದೆ. ಹೃದಯನಾಳದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು, ಸದೃಢವಾದ ಸ್ನಾಯುವನ್ನು ಹೊಂದಲು ಸಹಾಯ ಮಾಡುತ್ತದೆ. ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯವೂ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಪ್ರತಿನಿತ್ಯ ರನ್ನಿಂಗ್​ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಪ್ರತಿನಿತ್ಯ ರನ್ನಿಂಗ್​ ಮಾಡುವುದರಿಂದ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.  ವ್ಯಾಯಾಮ ಮಾಡುವಾಗ ಸ್ನಾಯು ಬಲಗೊಲ್ಳುತ್ತದೆ. ನಿಮ್ಮ ಹೃದಯ ಕೂಡಾ ಒಂದು ಸ್ನಾಯು. ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸುತ್ತದೆ. ಹಾಗಾಗಿ ಓಟದಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಬೆಳಿಗ್ಗೆ ಎದ್ದ ತಕ್ಷಣ ರನ್ನಿಂಗ್​ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ರನ್ನಿಂಗ್​ ಮಾಡುವುದರಿಂದ ಮೂಳೆಗಳು ಬಲಗೊಳ್ಳುತ್ತದೆ. ಓಟವು ದೇಹದ ತೂಕಕ್ಕೆ ಹೆಚ್ಚು ಪರಿಣಾಮ ಬೀರುತ್ತದೆ. ದೇಹದ ತೂಕವನ್ನು ನಿಯಂತ್ರಿಸುವಲ್ಲಿ ಇದು ಸಹಾಯಕವಾಗಿದೆ. ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಮೂಳೆಗಳನ್ನು ಗಟ್ಟಿಗೊಳಿಸುತ್ತದೆ. ಹಾಗಾಗಿ ಪ್ರತಿನಿತ್ಯ ಓಡುವ ಅಭ್ಯಾಸದಿಂದ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿನಿತ್ಯ 20 ನಿಮಿಷಗಳ ಕಾಲ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಬಳಿಕ 5 ನಿಮಿಷ ವಿಶ್ರಾಂತಿ ಪಡೆಯಬೇಕು. ಹೃದಯ ಬಡಿತ ಮತ್ತು ಸ್ನಾಯುಗಳಿಗೆ ರಕ್ತದ ಹರಿವನ್ನು ನಿಯಂತ್ರಿಸಲು ವೇಗದ ನಡಿಗೆ, ಜಾಗಿಂಗ್ ಅಥವಾ ರನ್ನಿಂಗ್ ಅಭ್ಯಾಸ ಉತ್ತಮ ಮಾರ್ಗವಾಗಿದೆ.

ಗಮನಿಸಲೇಬೇಕಾದ ಅಂಶವೆಂದರೆ ಪ್ರತಿನಿತ್ಯ ಬೆಳಿಗ್ಗೆ ರನ್ನಿಂಗ್​ ಮಾಡುವುದು ಒಳ್ಳೆಯದು. ಜತೆಗೆ ಖಾಲಿ ಹೊಟ್ಟೆಯಲ್ಲಿ ಓಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಹೊಟ್ಟೆ ತುಂಬಿದ್ದಾಗ ರನ್ನಿಂಗ್​ ಮಾಡುವ ಅಭ್ಯಾಸದಿಂದ ಆರೋಗ್ಯಕ್ಕೆ ಅನಾಕೂಲಗಳಿವೆ. ಈ ಕುರಿತಂತೆ ಹೆಚ್ಚು ಗಮನವಿರಲಿ.

ಇದನ್ನೂ ಓದಿ:

Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?

Health Tips: ಅಧಿಕ ರಕ್ತದೊತ್ತಡ ಸಮಸ್ಯೆ ನಿಂಯತ್ರಿಸಲು ಈ ಕೆಲವು ವಿಷಯಗಳು ಗಮನದಲ್ಲಿರಲಿ

(Running health benefits check in Kannada)

Published On - 1:11 pm, Mon, 20 September 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್