AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಾ ತೆಂಡೂಲ್ಕರ್ ಕೇಶ ಸೌಂದರ್ಯದ ರಹಸ್ಯ ಏನು ಗೊತ್ತಾ? ಈ ರಸದಲ್ಲಿದೆ ಅದ್ಭುತ ಶಕ್ತಿ

ಈರುಳ್ಳಿ ರಸದ ಎಣ್ಣೆ ವಾಸನೆಯಾದರೂ, ನಮ್ಮ ಕೂದಲ ಬೆಳವಣಿಗೆ ಹಾಗೂ ನೆತ್ತಿಯ ಆರೋಗ್ಯಕ್ಕೆ ಒಳ್ಳೆಯದು. ಕ್ರಿಕೆಟರ್​​ ಸಚಿನ್​ ಅವರ ಮಗಳು ಸಾರಾ ಕೂಡ ಈ ಎಣ್ಣೆಯನ್ನೇ ಬಳಸುತ್ತಾರೆ. ಇದು ಅವರ ಅಮ್ಮ ಹೇಳಿರುವ ಮದ್ದು, ಹಾಗಾಗಿ ದೊಡ್ಡ ಮಟ್ಟದಲ್ಲಿ ಖರ್ಚು ಮಾಡುವ ಬದಕಲು ಇಂತಹ ಎಣ್ಣೆಯನ್ನು ಮನೆಯಲ್ಲೇ ತಯಾರಿಸಬಹುದು. ಈ ಈರುಳ್ಳಿ ಎಣ್ಣೆಯಿಂದ ಯಾವೆಲ್ಲ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸಾರಾ ತೆಂಡೂಲ್ಕರ್ ಕೇಶ ಸೌಂದರ್ಯದ ರಹಸ್ಯ ಏನು ಗೊತ್ತಾ? ಈ ರಸದಲ್ಲಿದೆ ಅದ್ಭುತ ಶಕ್ತಿ
ಸಾರಾ ತೆಂಡೂಲ್ಕರ್
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: May 20, 2025 | 5:38 PM

Share

ಪ್ರತಿಯೊಬ್ಬ ಮಹಿಳೆಯೂ ತನ್ನ ದೇಹದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಮಾಡುತ್ತಾರೆ, ಅದರಲ್ಲೂ ಕೇಶರಾಶಿಯ (haircare) ಬಗ್ಗೆ ಹೆಚ್ಚು ಮಹತ್ವ ನೀಡುತ್ತಾರೆ. ಇನ್ನು ಸೆಬ್ರಿಟಿಗಳಂತೂ ಹೇಳುವುದೇ ಬೇಡ, ಫಿಟ್​​ನೆಸ್​​​​, ಕೂದಲ ಕಾಳಜಿ ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುತ್ತಾರೆ. ಆದರೆ ಅವರಲ್ಲಿ ಹೆಚ್ಚಿನವರು ಮನೆಮದ್ದು ಅಥವಾ ಅಜ್ಜಿ ಹೇಳಿದ ಮದ್ದುಗಳನ್ನೇ ಉಪಯೋಗಿಸುತ್ತಾರೆ. ಹೌದು ಇದಕ್ಕೆ ಸಾಕ್ಷಿ ಸಾರಾ, ಕ್ರಿಕೆಟ್​​ ಲೋಕದ ದೇವರು ಎಂದು ಖ್ಯಾತಿ ಪಡೆದಿರುವ ಸಚಿನ್ ತೆಂಡ್ಕೂಲರ್ ಅವರ ಮಗಳು ಸಾರಾ ತೆಂಡ್ಕೂಲರ್ (Sara Tendulkar) ಕೂಡ ಮನೆಯಲ್ಲಿ ಅಮ್ಮ ಮಾಡಿದ ಎಣ್ಣೆಯನ್ನೇ ತಮ್ಮ ಕೂದಲಿಗೆ ಹಾಕುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಅದರ ವಾಸನೆ ಆಗದಿದ್ದರು, ನಾನು ನನ್ನ ಕೂದಲಿನ ಬೆಳವಣಿಗೆ ಹಾಗೂ ರಕ್ಷಣೆಗಾಗಿ ಅದನ್ನು ಉಪಯೋಗಿಸುತ್ತೇನೆ ಎಂದು ಹೇಳಿದ್ದಾರೆ.

ಈರುಳ್ಳಿ ರಸವನ್ನು ಮತ್ತು ರೋಸ್ಮರಿ ಎಣ್ಣೆಯೊಂದಿಗೆ ಬೆರೆಸಿದ ತೆಂಗಿನ ಎಣ್ಣೆಯನ್ನು ಹಾಕುವಂತೆ ಒತ್ತಾಯಿಸುತ್ತಾರೆ.ನನಗೆ ಅದರ ವಾಸನೆ ಇಷ್ಟವಿಲ್ಲ ಎಂದು ಹೇಳಿದ್ದಾರೆ, ಅಷ್ಟಕ್ಕೂ ಈ ಈರುಳ್ಳಿ ಎಣ್ಣೆಯಲ್ಲಿ ಕೂದಲನ್ನು ಬೆಳಸುವ ಶಕ್ತಿ ಏನಿದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಇನ್ನು ಈ ಬಗ್ಗೆ ಚರ್ಮರೋಗ ತಜ್ಞೆ ಮತ್ತು ಸೌಂದರ್ಯ ವೈದ್ಯೆ ಡಾ. ಪಲ್ಲವಿ ಸುಲೆ ಅವರು ಇಂಡಿಯಾನ್ ಎಕ್ಸ್​​ಪ್ರಸ್​​​ಗೆ ಹೇಳಿರುವ ಪ್ರಕಾರ, ಈರುಳ್ಳಿ ರಸವು ಉರಿಯೂತ ನಿವಾರಕ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಗಳನ್ನು ಹೊಂದಿರುವುದರಿಂದ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೂದಲು ಮತ್ತು ನೆತ್ತಿಗೆ ಈರುಳ್ಳಿ ರಸವನ್ನು ಹಚ್ಚುವುದರಿಂದ ಕೂದಲು ಕಿರುಚೀಲಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸಬಹುದು, ಕೂದಲಿನ ಬೆಳವಣಿಗೆಯನ್ನು ಸುಧಾರಿಸಬಹುದು. ಕೂದಲು ಅಕಾಲಿಕವಾಗಿ ಬೂದುಬಣ್ಣಕ್ಕೆ ತಿರುಗುವುದನ್ನು ತಡೆಯುತ್ತದೆ ಎಂದು ಹೇಳಿದ್ದಾರೆ.

ಈರುಳ್ಳಿ ರಸದ ಬಗ್ಗೆ ಇನ್ನೊಬ್ಬ ಚರ್ಮರೋಗ ತಜ್ಞೆ ಡಾ. ಮಾನಸಿ ಶಿರೋಲಿಕರ್ ಪ್ರಕಾರ, ಈರುಳ್ಳಿ ರಸದಲ್ಲಿ ಗಂಧಕವೂ ಸಮೃದ್ಧವಾಗಿದೆ. ಕೂದಲು ಮತ್ತು ನೆತ್ತಿಗೆ ಹಾಕಿದಾಗ, ಈರುಳ್ಳಿ ರಸವು ಬಲವಾದ ಮತ್ತು ದಪ್ಪ ಕೂದಲನ್ನು ನೀಡುತ್ತದೆ. ಇದರಿಂದ ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಕೂದಲು ಮತ್ತೆ ಬೆಳೆಯಲು ಈರುಳ್ಳಿ ರಸವೇ ಉತ್ತಮ ಎನ್ನುವ ಬಗ್ಗೆ ಎಲ್ಲೂ ಪುರಾವೆ ಇಲ್ಲ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಔಷಧಿಯ ಗುಣಗಳು ಇದೆ. ಕೆಲವೊಂದು ಅಧ್ಯಯನದ ಪ್ರಕಾರ ದಿನಕ್ಕೆ ಎರಡು ಬಾರಿ ನೆತ್ತಿಗೆ ಈರುಳ್ಳಿ ರಸವನ್ನು ಹಚ್ಚುವುದರಿಂದ ಕೆಲವು ಜನರಲ್ಲಿ ಕೂದಲು ಮತ್ತೆ ಬೆಳೆಯಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

ಇದನ್ನೂ ಓದಿ
Image
ಆನೆ ನೋಡೋಕೆ ಮಾತ್ರ ದೊಡ್ಡದು, ಇದ್ರ ಕಿವಿ ಎಷ್ಟು ಚಿಕ್ಕದಿದೆ ನೋಡಿ
Image
ಈ ಕಂಪನಿಯಲ್ಲಿ ಉಚಿತ ಶೌಚಾಲಯ, ಉಚಿತ ಲಿಫ್ಟ್, ನೈಟ್ ಸ್ನಾಕ್ಸ್
Image
ಖರ್ಚು ಮಾಡಿದ ದುಡ್ಡನ್ನೆಲ್ಲಾ ವಾಪಸ್ಸು ಕೊಡು ಎಂದ ಮಾಜಿ ಪ್ರಿಯಕರ
Image
ಪ್ಲೀಸ್ ನಾನು ನೀನು ಅಣ್ಣ ತಂಗಿಯಂತೆ ಇರೋಣ, ಮದುವೆ ಬೇಡ ಶಾಕ್ ಆದ ವರ

ಇದನ್ನೂ ಓದಿ: ಐಸ್ ಆಪಲ್ ಮಿಲ್ಕ್‌ಶೇಕ್ ಎಂದಾದರೂ ಟೇಸ್ಟ್​​​​ ಮಾಡಿದ್ದೀರಾ? ಮಾಡುವುದು ತುಂಬಾ ಸುಲಭ

ಸುಮಾರು 74% ಜನ ಈ ಪ್ರಯೋಗವನ್ನು ಮಾಡಿ, 4 ವಾರಗಳ ನಂತರ ಸ್ವಲ್ಪ ಕೂದಲು ಮತ್ತೆ ಬೆಳೆದಿದೆ ಎಂದು ಹೇಳಿದ್ದಾರೆ. ಇನ್ನು ಸುಮಾರು 87% ಜನರು 6 ವಾರಗಳಲ್ಲಿ ಕೂದಲು ಮತ್ತೆ ಬೆಳೆದಿದೆ ಎಂದು ಹೇಳಿದ್ದಾರೆ. ಸಾಮಾನ್ಯವಾಗಿ ಕಂಡುಬರುವ ಕೂದಲು ಉದುರುವಿಕೆ ಟೆಲೋಜೆನ್ ಎಫ್ಲುವಿಯಂ ಅಥವಾ ಆಂಡ್ರೊಜೆನೆಟಿಕ್ ಅಲೋಪೆಸಿಯಾದಿಂದ. ಈ ರೀತಿಯ ಕೂದಲು ಉದುರುವಿಕೆಗೆ ಈರುಳ್ಳಿ ರಸವನ್ನು ಹಾಕಬೇಕು ಎಂದು ಎಲ್ಲಿಯೂ ಹೇಳಿಲ್ಲ. ಡಾ. ಮಾನಸಿ ಅವರು ಹೇಳುವ ಪ್ರಕಾರ, ಈರುಳ್ಳಿ ಸಾರವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ, ಇದು ನೆತ್ತಿಯ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆರೋಗ್ಯಕರ ನೆತ್ತಿಯು ಬಲವಾದ ಕಿರುಚೀಲಗಳನ್ನು ಹೊಂದಿರುತ್ತದೆ ಮತ್ತು ಈರುಳ್ಳಿ ರಕ್ತ ಪರಿಚಲನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೂದಲು ಮತ್ತು ನೆತ್ತಿಗೆ ಈರುಳ್ಳಿ ರಸವನ್ನು ಹಚ್ಚುವುದರಿಂದ ಕೂದಲಿನ ಕಿರುಚೀಲಗಳಿಗೆ ರಕ್ತ ಪೂರೈಕೆ ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ