AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು

ನೀವು ಗಳಿಕೆಯ ಜೊತೆಗೆ ನಿಮ್ಮ ಖರ್ಚುಗಳನ್ನು ನಿರ್ವಹಿಸಲು ಕಲಿತರೆ, ಅನಗತ್ಯ ಖರ್ಚುಗಳು ನಿಲ್ಲುತ್ತವೆ ಮತ್ತು ನೀವು ಗಳಿಸಿದ ಹಣವನ್ನು ಉಳಿಸಲು ಸಾಧ್ಯವಾಗುತ್ತದೆ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಗಳಿಕೆ ಮಾಡಿದ ಹಣವನ್ನು ಉಳಿಸುವುದು ಹೇಗೆ ಎಂಬುದು ಅನೇಕರಿಗೆ ತಿಳಿದಿಲ್ಲ. ಇದೇ ಕಾರಣದಿಂದ ಅನೇಕರಿಗೆ ಆಗಾಗ್ಗೆ ಆರ್ಥಿಕ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಹೀಗಿರುವಾಗ ಈ ಕೆಲವು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಉಳಿತಾಯ ಮಾಡಬಹುದು.

Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು
ಸಾಂದರ್ಭಿಕ ಚಿತ್ರImage Credit source: Getty Images
ಮಾಲಾಶ್ರೀ ಅಂಚನ್​
|

Updated on:Jun 03, 2026 | 7:03 PM

Share

ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಉಳಿತಾಯ (Saving) ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಆದಾಯಕ್ಕಿಂತ  ಖರ್ಚೆ ಹೆಚ್ಚು. ಇದು ನಾವು ಆರ್ಥಿಕವಾಗಿ ಬಲಶಾಲಿಯಾಗುವುದನ್ನು ತಡೆಯುತ್ತದೆ. ಆರ್ಥಿಕವಾಗಿ ಬಲಶಾಲಿಯಾಗಲು ಬಯಸಿದರೆ, ಆದಾಯ ಮತ್ತು ಖರ್ಚುಗಳ ಜೊತೆಗೆ ಉಳಿತಾಯಕ್ಕೂ ಆದ್ಯತೆ ನೀಡಬೇಕು. ಇದು ಭವಿಷ್ಯದ ಆರ್ಥಿಕ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಉಳಿತಾಯದ ಜೊತೆಗೆ ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಿದರೆ ನೀವು ಶ್ರೀಮಂತಿಕೆಯನ್ನು ಗಳಿಸಲು ಸಹ ಸಾಧ್ಯವಾಗುತ್ತದೆ. ಹಾಗಿದ್ರೆ ಉಳಿತಾಯದ ಜೊತೆಗೆ ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ ಎಂಬುದನ್ನು ನೋಡೋಣ ಬನ್ನಿ.

ಗಳಿಸಿದ ಹಣವನ್ನು ಉಳಿಸುವುದು ಹೇಗೆ?

ಉಳಿತಾಯ ಮತ್ತು ಹೂಡಿಕೆಗಳತ್ತ ಗಮನ ಹರಿಸಿ: ಮೊದಲು ನೀವು ಉಳಿತಾಯದ ಅಭ್ಯಾಸವನ್ನು  ಬೆಳೆಸಿಕೊಳ್ಳಬೇಕು. ಉಳಿತಾಯದಂತಹ ಉತ್ತಮ ಅಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದ ಬಹಳ ಕಡಿಮೆ ಸಮಯದಲ್ಲಿ ಗಣನೀಯ ಪ್ರಮಾಣದ ಹಣ ನಿಮ್ಮದಾಗುತ್ತದೆ. ಈ ಉಳಿತಾಯವನ್ನು ಸರಿಯಾದ ಸ್ಥಳದಲ್ಲಿ ಅಥವಾ ಉತ್ತಮ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಗಣನೀಯ ಲಾಭವನ್ನು ಸಹ ನೀವು  ಪಡೆಯಬಹುದು. ಈ ಮೂಲಕ ನೀವು ಶ್ರೀಮಂತಿಕೆಯನ್ನು ಗಳಿಸಲು ಸಾಧ್ಯವಾಗುತ್ತದೆ.

ಅನಗತ್ಯ ಖರ್ಚು ತಪ್ಪಿಸಿ: ನೀವು ಹಣ ಉಳಿಸಲು ಬಯಸಿದರೆ, ನೀವು ವ್ಯರ್ಥ ಖರ್ಚುಗಳನ್ನು ಆದಷ್ಟು ತಪ್ಪಿಸಬೇಕು. ಇದನ್ನು ಮಾಡಲು, ನಿಮ್ಮ ಖರ್ಚುಗಳಿಗೆ ಮಾಸಿಕ ಬಜೆಟ್ ಅನ್ನು ರಚಿಸುವುದು ಅತ್ಯಗತ್ಯ. ನಂತರ, ಈ ಬಜೆಟ್ ಅನ್ನು ಆಧರಿಸಿ ನಿಮ್ಮ ಆದಾಯವನ್ನು ಖರ್ಚು ಮಾಡಿ. ಈ ಸ್ಮಾರ್ಟ್‌ ನಡೆ ಅನಗತ್ಯ ಖರ್ಚುಗಳನ್ನು ತಡೆಯುತ್ತದೆ. ಈ ರೀತಿಯಲ್ಲಿ ನಿಮ್ಮ ಖರ್ಚುಗಳನ್ನು ನಿರ್ವಹಿಸುವ ಮೂಲಕ, ನೀವು ಸುಲಭವಾಗಿ ಹಣವನ್ನು ಉಳಿಸಬಹುದು.

ಹೊರಗೆ ತಿನ್ನುವುದನ್ನು ನಿಯಂತ್ರಿಸಿ: ಹೋಟೆಲ್, ಆನ್‌ಲೈನ್ ಆಹಾರ ಆರ್ಡರ್‌ಗಳು ಮತ್ತು ಕೆಫೆ ವೆಚ್ಚಗಳು ತಿಂಗಳಿಗೆ ಸಾವಿರಾರು ರೂಪಾಯಿ ವ್ಯಯವಾಗಲು ಕಾರಣವಾಗಬಹುದು. ಹಾಗಾಗಿ ಮನೆ ಊಟಕ್ಕೆ ಹೆಚ್ಚಿನ ಆದ್ಯತೆ ನೀಡಿ ಇದು ಖರ್ಚನ್ನು ಕಮ್ಮಿ ಮಾಡುವುದಲ್ಲದೆ ಆರೋಗ್ಯಕ್ಕೂ ಒಳ್ಳೆಯದು.

ಇದನ್ನೂ ಓದಿ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ

ಸ್ಮಾರ್ಟ್ ಶಾಪಿಂಗ್ ಮಾಡಿ: ನೀವು ಏನೇ ಶಾಪಿಂಗ್‌ ಮಾಡುತ್ತಿದ್ದರೂ, ಯಾವುದೇ ವಸ್ತುಗಳನ್ನು  ಆತುರದಿಂದ ಅಥವಾ ಯೋಚಿಸದೆ ಏನನ್ನೂ ಖರೀದಿಸಬೇಡಿ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ವಸ್ತುಗಳನ್ನು ಖರೀದಿಸಿ. ಶಾಪಿಂಗ್‌ ಮಾಡುವ ಮೊದಲು ಏನೆಲ್ಲಾ ಬೇಕು ಎಂಬುದನ್ನು ಪಟ್ಟಿ ಮಾಡಿ ಮತ್ತು ಈ ಪಟ್ಟಿಯಲ್ಲಿ ಇರುವಂತಹ ವಸ್ತುಗಳನ್ನು ಮಾತ್ರ ಖರೀದಿಸಿ. ನೀವು ಈ ವಸ್ತುಗಳ ಬೆಲೆಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬೇಕು. ಆನ್‌ಲೈನ್‌ನಲ್ಲಿ ಆ ವಸ್ತುಗಳು ಅಗ್ಗವಾಗಿದ್ದರೆ ಅಲ್ಲಿಂದಲೇ ಖರೀದಿಸಿ. ಈ ಸ್ಮಾರ್ಟ್ ಶಾಪಿಂಗ್ ಮಾಡುವ ಮೂಲಕ ಹಣವನ್ನು ಉಳಿಸಬಹುದು.

ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ, ನೀವು ಯಾವುದೇ ಒತ್ತಡವಿಲ್ಲದೆ ಹಣವನ್ನು ಉಳಿಸಬಹುದು. ಇಂದು ನೀವು ಉಳಿಸುವ ಸಣ್ಣ ಮೊತ್ತವೂ ಸಹ ಭವಿಷ್ಯದಲ್ಲಿ ಅದು ನಿಮ್ಮನ್ನು ಆರ್ಥಿಕವಾಗಿ ಸದೃಢಗೊಳಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Wed, 3 June 26

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ