AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sawan Shivratri 2023: ಶ್ರಾವಣ ಶಿವರಾತ್ರಿ ದಿನಾಂಕ, ಮಹತ್ವ ಹಾಗೂ ಆಚರಣೆಗಳನ್ನು ತಿಳಿಯಿರಿ

ಈ ವರ್ಷ ಶ್ರಾವಣ ಶಿವರಾತ್ರಿಯನ್ನು ಜುಲೈ 15 ರಂದು ಆಚರಿಸಲಾಗುತ್ತದೆ. ಪವಿತ್ರ ಹಿಂದೂ ಹಬ್ಬಗಳಲ್ಲಿ ಒಂದಾದ ಈ ದಿನದಂದು ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ಎಲ್ಲವನ್ನೂ ಇಲ್ಲಿ ತಿಳಿದುಕೊಳ್ಳಿ.

Sawan Shivratri 2023:  ಶ್ರಾವಣ ಶಿವರಾತ್ರಿ ದಿನಾಂಕ, ಮಹತ್ವ ಹಾಗೂ ಆಚರಣೆಗಳನ್ನು ತಿಳಿಯಿರಿ
Sawan Shivratri 2023Image Credit source: Aaj Tak
Follow us
ಅಕ್ಷತಾ ವರ್ಕಾಡಿ
|

Updated on: Jul 14, 2023 | 4:47 PM

ಪವಿತ್ರ ಹಿಂದೂ ಹಬ್ಬಗಳಲ್ಲಿ ಒಂದಾದ ಶ್ರಾವಣ ಶಿವರಾತ್ರಿಯಂದು ಶಿವನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಇದು ಶ್ರಾವಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಲ್ಲಿ ಬರುತ್ತದೆ. ಒಂದು ವರ್ಷದಲ್ಲಿ 12 ಶಿವರಾತ್ರಿಗಳಿದ್ದು, ಅಮಾವಾಸ್ಯೆಯ ಒಂದು ದಿನ ಮೊದಲು ಬರುತ್ತವೆ ಮತ್ತು ಶ್ರಾವಣ ಮಾಸದಲ್ಲಿ ಬರುವ ಶಿವರಾತ್ರಿಯನ್ನು ಶ್ರಾವಣ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಭಗವಂತ ಶಿವನು ತನ್ನ ದೀರ್ಘಾಯುಷ್ಯ ಮತ್ತು ಯೋಗಕ್ಷೇಮಕ್ಕಾಗಿ ಕಠಿಣ ತಪಸ್ಸಿನ ನಂತರ ಈ ದಿನದಂದು ಪಾರ್ವತಿ ದೇವಿಯನ್ನು ವಿವಾಹವಾದನೆಂದು ಹೇಳಲಾಗುತ್ತದೆ. ಈ ವರ್ಷ, ಶ್ರಾವಣ ತಿಂಗಳು ಜುಲೈ 4 ರಂದು ಪ್ರಾರಂಭವಾಗಿ ಆಗಸ್ಟ್ 31 ರವರೆಗೆ ಮುಂದುವರಿಯುತ್ತದೆ.

ಶ್ರಾವಣ ಶಿವರಾತ್ರಿ ಯಾವಾಗ?

ದೃಕ್ ಪಂಚಾಂಗದ ಪ್ರಕಾರ, ಜುಲೈ 15, ಶನಿವಾರ ಮಧ್ಯಾಹ್ನ 12:07 ಕ್ಕೆ ಪ್ರಾರಂಭವಾಗಿ ಜುಲೈ 16 ರಂದು 12:48 ಕ್ಕೆ ಕೊನೆಗೊಳ್ಳುತ್ತದೆ. ಶ್ರಾವಣ ಶಿವರಾತ್ರಿ ಪಾರಣ ಸಮಯವು ಬೆಳಿಗ್ಗೆ 5:33 ರಿಂದ 3 ರವರೆಗೆ ಇರುತ್ತದೆ. ಹೆಚ್ಚುವರಿಯಾಗಿ, ಚತುರ್ದಶಿ ದಿನಾಂಕವು ಜುಲೈ 15 ರಂದು ರಾತ್ರಿ 8:32 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಜುಲೈ 16 ರಂದು ರಾತ್ರಿ 10:08 ಕ್ಕೆ ಕೊನೆಗೊಳ್ಳುತ್ತದೆ.

ಶ್ರಾವಣ ಶಿವರಾತ್ರಿಯ ಇತಿಹಾಸ ಮತ್ತು ಮಹತ್ವ:

ಶಿವನ ಭಕ್ತರು ಈ ಶಿವರಾತ್ರಿಯನ್ನು ವೈಭವದಿಂದ ಆಚರಿಸುತ್ತಾರೆ. ಶ್ರಾವಣ ಮಾಸದಲ್ಲಿ, ಜನರು ಶಿವನ ಆಶೀರ್ವಾದವನ್ನು ಪಡೆಯಲು ಪ್ರತಿ ಸೋಮವಾರ ಉಪವಾಸವನ್ನು ಆಚರಿಸುತ್ತಾರೆ. ವಿವಾಹಿತ ಮಹಿಳೆಯರು ಸಂತೋಷದ ದಾಂಪತ್ಯ ಜೀವನಕ್ಕಾಗಿ ಹಾರೈಸಿದರೆ, ಅವಿವಾಹಿತ ಮಹಿಳೆಯರು ಸೂಕ್ತವಾದ ಜೀವನ ಸಂಗಾತಿಗಾಗಿ ಪ್ರಾರ್ಥಿಸುತ್ತಾರೆ. ಏತನ್ಮಧ್ಯೆ, ಕನ್ವಾರಿಯಾಗಳು ವಿವಿಧ ಪವಿತ್ರ ಸ್ಥಳಗಳಿಂದ ತಂದ ಗಂಗಾಜಲವನ್ನು ಶಿವನಿಗೆ ಅರ್ಪಿಸುತ್ತಾರೆ ಮತ್ತು ಸಂತೋಷ ಮತ್ತು ಸಮೃದ್ಧ ಜೀವನಕ್ಕಾಗಿ ಆಶೀರ್ವಾದವನ್ನು ಕೋರುತ್ತಾರೆ.

ಇದನ್ನೂ ಓದಿ: ಮಾನವನ ನಿಜವಾದ ಶತ್ರು ಯಾರು? ಈ ಕುರಿತಾಗಿ ಕೌಸಲ್ಯೆ ಹೇಳಿದ್ದೇನು?

ಶ್ರಾವಣ ಶಿವರಾತ್ರಿಯ ಆಚರಣೆಗಳು:

ಉತ್ತರ ಭಾರತದ ರಾಜ್ಯಗಳಾದ ಉತ್ತರಾಖಂಡ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ಬಿಹಾರಗಳಲ್ಲಿ ಈ ಶಿವರಾತ್ರಿಯನ್ನು ಜನಪ್ರಿಯವಾಗಿ ಆಚರಿಸಲಾಗುತ್ತದೆ. ಶಿವರಾತ್ರಿ ಉಪವಾಸದ ಒಂದು ದಿನ ಮೊದಲು, ಭಕ್ತರು ಒಮ್ಮೆ ಮಾತ್ರ ಊಟ ಮಾಡುತ್ತಾರೆ ಮತ್ತು ಮರುದಿನ ಪೂರ್ಣ ದಿನದ ಉಪವಾಸವನ್ನು ಆಚರಿಸಲು ಸಂಕಲ್ಪವನ್ನು ತೆಗೆದುಕೊಳ್ಳುತ್ತಾರೆ. ಅವರು ಶಿವಪೂಜೆಯನ್ನು ಮಾಡುತ್ತಾರೆ ಮತ್ತು ಮರುದಿನ ಸೂರ್ಯೋದಯದ ನಂತರ ಮತ್ತು ಚತುರ್ದಶಿ ತಿಥಿ ಮುಗಿಯುವ ಮೊದಲು ಉಪವಾಸ ಕೊನೆಗೊಳ್ಳುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ