AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guava Leaves For Toothache: ಪೇರಳೆ ಹಣ್ಣಿನ ಎಲೆಯಿಂದ ಹಲ್ಲುನೋವು ಮಾಯ

ಪೇರಳೆ ಎಲೆಗಳ ವಿಟಮಿನ್ ಸಿ, ಬಿ ಮತ್ತು ಮ್ನೇಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಕಬ್ಬಿಣ, ಲೈಕೋಪೀನ್ ಇತ್ಯಾದಿ ಪೋಷಕಾಂಶಗಳು ಹಲ್ಲುನೋವನ್ನು ತಡೆಯಲು ಸಹಕಾರಿಯಾಗಿದೆ.

Guava Leaves For Toothache: ಪೇರಳೆ ಹಣ್ಣಿನ ಎಲೆಯಿಂದ ಹಲ್ಲುನೋವು ಮಾಯ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: May 09, 2023 | 4:10 PM

Share

ಹ ಲ್ಲುನೋವುನಮ್ಮಲ್ಲಿ ಹೆಚ್ಚಿನವರು ಅನುಭವಿಸುವ ಸಾಮಾನ್ಯ ನೋವಿನ ಸ್ಥಿತಿಯಾಗಿದೆ. ಅತಿಯಾಗಿ ತಣ್ಣಗಿರುವ, ಬಿಸಿಯಾದ ಅಥವಾ ಹುಳಿಯಾದ ಯಾವುದನ್ನಾದರೂ ತಿಂದಾಗ ಅಥವಾ ಕುಡಿದಾಗ ಹಲ್ಲು ನೋವು ಇನ್ನಷ್ಟು ಉಲ್ಬಣಗೊಳ್ಳುತ್ತದೆ. ಹಲ್ಲುನೋವು ನಿವಾರಿಸಲು ಪ್ರತ್ಯಕ್ಷವಾದ ಔಷಧಿಗಳು ಲಭ್ಯವಿದ್ದರೂ, ನೈಸರ್ಗಿಕ ಪರಿಹಾರಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ಮತ್ತು ಇವುಗಳು ಸುಲಭವಾಗಿ ಲಭ್ಯವಿರುವ ಮನೆಮದ್ದುಗಳಾಗಿವೆ. ಹಲ್ಲುನೋವಿಗೆ ಅಂತಹ ಜನಪ್ರಿಯ ಮದ್ದುಗಳಲ್ಲಿ ಪೇರಳೆ ಎಲೆಗಳು ಕೂಡಾ ಒಂದು. ಈ ಎಲೆಗಳು ಹಲ್ಲಿನ ಕೊಳೆತವನ್ನು ಕಡಿಮೆ ಮಾಡುವ, ಉರಿಯೂತವನ್ನು ತೆಗೆದುಹಾಕುವ ಮತ್ತು ಹಲ್ಲುಗಳನ್ನು ಆರೋಗ್ಯಕರವಾಗಿಡುವ ಗುಣವನ್ನು ಹೊಂದಿದೆ. ಈ ಎಲೆಗಳು ಆಂಟಿ ಬ್ಯಾಕ್ಟೀರಿಯಲ್ ಮತ್ತು ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಇದು ಹಲ್ಲಿನಲ್ಲಿರುವ ಬ್ಯಾಕ್ಟೀರಿಯಾವನ್ನು ಕೊಲ್ಲಲು ಮತ್ತು ಉರಿಯೂತವನ್ನು ತೆಗೆದುಹಾಕಲು ಸಹಾಯ ಮಾಡುತ್ತವೆ.

ಹಲ್ಲು ನೋವಿಗೆ ಪೇರಳೆ ಎಲೆಗಳನ್ನು ಹೇಗೆ ಬಳಸುವುದು?

ಪೇರಳೆ ಎಲೆಗಳು, ಸ್ವಲ್ಪ ಹಿಪ್ಪಲಿ ಮತ್ತು ಲವಂಗವನ್ನು ತೆಗೆದುಕೊಳ್ಳಿ, ಇದಕ್ಕೆ ಸ್ವಲ್ಪ ಉಪ್ಪನ್ನು ಕೂಡಾ ಸೇರಿಸಿ ಇವೆಲ್ಲವನ್ನು ಚೆನ್ನಾಗಿ ರುಬ್ಬಿಕೊಂಡು ಪೇಸ್ಟ್ ರೂಪದಲ್ಲಿ ತಯಾರಿಸಿಕೊಂಡು ನಿಮ್ಮ ಹಲ್ಲುಗಳಿಗೆ ಅನ್ವಯಿಸಿ. ಇದಲ್ಲದೆ ತಾಜಾ ಪೇರಳೆ ಎಲೆಗಳ ಚಿಗುರುಗಳನ್ನು ಬಾಯಿಯಲ್ಲಿ ಅಗಿಯಿರಿ. ಇದರಿಂದ ಅದರ ರಸವು ಹಲ್ಲಿನ ಪೀಡಿತ ಪ್ರದೇಶವನ್ನು ತಲುಪುತ್ತದೆ.

ಹಲ್ಲುನೋವಿಗೆ ಪೇರಳೆ ಎಲೆಗಳ ಪ್ರಯೋಜನಗಳು:

ಆಂಟಿಬ್ಯಾಕ್ಟೀರಿಯಲ್: ನೀವು ಹಲ್ಲುನೋವನ್ನು ತೊಡೆದುಹಾಕಲು ಈ ಆಂಟಿಬ್ಯಾಕ್ಟೀರಿಯಲ್ ಪೇಸ್ಟ್ ನ್ನು ಬಳಸಬಹುದು. ಇದು ಹಲ್ಲಿನ ಒಳಗಿರುವ ಬ್ಯಾಕ್ಟೀರಿಯಾವನ್ನು ಕೊಲ್ಲುವುದರ ಜೊತೆಗೆ ಹಲ್ಲಿನಲ್ಲಿರುವ ಹುಳಗಳನ್ನು ತಟಸ್ಥಗೊಳಿಸುತ್ತದೆ. ಈ ರೀತಿಯಾಗಿ ಇದು ಹಲ್ಲುನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿದೆ: ಪೇರಳೆ ಎಲೆಗಳಲ್ಲಿ ಉರಿಯೂತ ನಿವಾರಕ ಗುಣಗಳು ಸಮೃದ್ಧವಾಗಿದೆ. ಇವು ಹಲ್ಲಿನ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ನೋವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಇದು ಹಲ್ಲಿನ ಸುತ್ತಮುತ್ತಲಿನ ಸೋಂಕನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Toothache: ಹಲ್ಲು ನೋವಿನ ತ್ವರಿತ ಪರಿಹಾರಕ್ಕೆ ಮನೆ ಮದ್ದುಗಳು

ಖನಿಜಗಳ ಪೂರೈಕೆ: ಪೇರಳೆ ಎಲೆಗಳು ಹಲ್ಲುಗಳಿಗೆ ಅಗತ್ಯವಾದ ಖನಿಜಗಳನ್ನು ಪೂರೈಸುತ್ತದೆ. ಈ ಖನಿಜಗಳ ಕೊರತೆಯು ಹಲ್ಲುನೋವಿಗೆ ಕಾರಣವಾಗಬಹುದು. ಮೆಗ್ನೇಸಿಯಮ್, ಕಬ್ಬಿಣ, ಕ್ಯಾಲ್ಸಿಯಂ ಮುಂತಾದ ಖನಿಜಗಳ ಅನುಪಸ್ಥಿತಿಯು ದಂತಕವಚವನ್ನು ದುರ್ಬಲಗೊಳಿಸುತ್ತದೆ. ಮತ್ತು ನಮ್ಮ ಹಲ್ಲುಗಳಿಗೆ ನೋವುಂಟುಮಾಡುವ ಸೋಂಕುಗಳ ಬೆಳವಣಿಗೆಗೆ ಅವಕಾಶ ಮಾಡಿಕೊಡುತ್ತದೆ. ಪೇರಳೆ ಎಲೆಗಳು ಈ ಹಲ್ಲುಗಳಿಗೆ ಬೇಕಾದ ಅಗತ್ಯ ಖನಿಜಗಳನ್ನು ಒದಗಿಸುತ್ತದೆ ಮತ್ತು ಹಲ್ಲುಗಳನ್ನು ಬಲವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ