AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದ ಒತ್ತಡ, ಆತಂಕವನ್ನು ನಿವಾರಿಸಲು ಶಿಲ್ಪಾ ಶೆಟ್ಟಿ ಮಾಡುವ ಯೋಗ ಭಂಗಿ ಯಾವುದು ಗೊತ್ತಾ?

shilpa shetty: ಆರೋಗ್ಯದ ಸುರಕ್ಷತೆಗಾಗಿ ನಟಿ ಶಿಲ್ಪಾ ಶೆಟ್ಟಿ ಯೋಗಾಭ್ಯಾಸವನ್ನು ಮಾಡುತ್ತಾರೆ. ಇತರರಿಗೆ ಸ್ಪೂರ್ತಿ ನೀಡುವಂತಹ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕೆಲವು ಯೋಗ ಭಂಗಿಗಳನ್ನು ಮಾಡುವ ಮೂಲಕ ಇನಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ದೇಹದ ಒತ್ತಡ, ಆತಂಕವನ್ನು ನಿವಾರಿಸಲು ಶಿಲ್ಪಾ ಶೆಟ್ಟಿ ಮಾಡುವ ಯೋಗ ಭಂಗಿ ಯಾವುದು ಗೊತ್ತಾ?
ನಟಿ ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jun 21, 2021 | 10:40 AM

Share

ಕೊವಿಡ್​ ಸಾಂಕ್ರಾಮಿಕ ರೋಗ ಎಲ್ಲರ ಮನಸ್ಥಿತಿಯನ್ನು ಕೆಡಿಸಿಬಿಟ್ಟಿತು. ಮಾನಸಿಕ ಹಾಗೂ ದೈಹಿಕ ಒತ್ತಡ ಜನರಲ್ಲಿ ಕಾಡತೊಡಗಿತು. ಹೀಗಿರುವಾಗ ಜನರು ಅನಗತ್ಯ ಚಿಂತೆಯನ್ನು ಬಿಟ್ಟು, ಧೈರ್ಯದಿಂದ ಸಮಸ್ಯೆಯನ್ನು ಎದುರಿಸಬೇಕು. ಜತೆಗೆ ಮಾನಸಿಕ ಒತ್ತಡದಿಂದ ಪರಿಹಾರ ಕಂಡುಕೊಳ್ಳಲೇ ಬೇಕು. ಯೋಗದ ಕೆಲವು ಆನಸಗಳು ನಿಮ್ಮ ಮಾನಸಿಕ ಒತ್ತಡವನ್ನು ಸುಧಾರಿಸುತ್ತದೆ. ಆರೋಗ್ಯದ ಸುರಕ್ಷತೆಗಾಗಿ ನಟಿ ಶಿಲ್ಪಾ ಶೆಟ್ಟಿ ಯೋಗಾಭ್ಯಾಸವನ್ನು ಮಾಡುತ್ತಾರೆ. ಇತರರಿಗೆ ಸ್ಪೂರ್ತಿ ನೀಡುವಂತಹ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಯೋಗ ಭಂಗಿಗಳನ್ನು ಮಾಡುವ ಮೂಲಕ ಇನಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಕೆಲವು ಯೋಗಗಳ ಆಸನಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ, ಇವುಗಳು ನಿಮ್ಮ ಮಾನಸಿಕ ಮತ್ತು ದೇಹದ ಒತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ಮನಸ್ಸು ಶಾಂತಿಯಿಂದಿರಲು ಯೋಗಾಸನವು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದರ ಜತೆಗೆ ನಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಯೋಗಾಸನ ಸಹಾಯಕವಾಗಿದೆ. ದೈಹಿಕ ಒತ್ತಡ ಮತ್ತು ಮಾನಸಿಕ ಆತಂಕವನ್ನು ನಿವಾರಿಸಲು ಈ ಆಸನ ಸಹಾಯ ಮಾಡುತ್ತದೆ. ಈ ಯೋಗಾಸನದ ಹೆಸರು ಪಾರ್ಶ್ವ ಸುಖಾಸನ. ದೈಹಿಕವಾಗಿ ನಿಮ್ಮ ಕುತ್ತಿಗೆ, ಭುಜಗಳು, ಬೆನ್ನಿನ ಭಾಗವನ್ನು ಹಿಗ್ಗಿಸಲು ಇದು ಸಹಾಯ ಮಾಡುತ್ತದೆ ಎಂದು ತಿಳಿಸುವ ಮೂಲಕ ಪೋಸ್ಟ್​ ಹಂಚಿಕೊಂಡಿದ್ದಾರೆ.

ನಿಮಗೆ ಸಾಧ್ಯವಾದಾಗ ಸ್ವಲ್ಪ ವಿರಾಮ ತೆಗೆದುಕೊಳ್ಳಿ. ನಿಮ್ಮ ಮನಸ್ಸು ಶಾಂತವಾಗಿರಲಿ ಮತ್ತು ದೇಹವನ್ನು ಸಡಿಲವಾಗಿ ಬಿಡಿ. ಈ ಆಸನವನ್ನು ನಿಧಾನವಾಗಿ ಅಭ್ಯಾಸ ಮಾಡಿ.. ನಿಮ್ಮ ಮನಸ್ಸು ಮತ್ತು ದೇಹವು ಸಡಿಲವಾಗಿರಲಿ ಎಂದು ಹೇಳಿದ್ದಾರೆ.

ಪಾರ್ಶ್ವ ಸುಖಾಸನ ಮಾಡುವ ವಿಧಾನ

* ನೆಲದ ಮೇಲೆ ಚಾಪೆಯನ್ನು ಹಾಸಿಕೊಂಡು ಆರಾಮವಾಗಿ ಪದ್ಮಾಸನದಲ್ಲಿ ಕುಳಿತುಕೊಳ್ಳಿ *ನಿಮ್ಮ ಎಡ ಬದಿಯ ಕೈಯನ್ನು(ಮೊಣಕೈ ಬಾಗಿರಲಿ) ಎಡಭಾಗದ ಕಾಲಿನ ಪಕ್ಕಕ್ಕೆ ಬಾಗಿಸಿ ನೆಲಕ್ಕೆ ಊರಿ *ನಿಮ್ಮ ಬಲಭಾಗದ ಕೈಯನ್ನು ಮೇಲಕ್ಕೆ ಎತ್ತಿ ಎಡಭಾಗಕ್ಕೆ ಬಾಗಿ- 30 ಸೆಕೆಂಡುಗಳ ಕಾಲ ಹಾಗೆಯೇ ಇರಿ *ಇದೇ ರೀತಿ ಬಲಭಾಗದ ಕೈಗಳನ್ನು ನೆಲಕ್ಕೆ ಊರಿ, ಎಡಗೈಯನ್ನು ಮೇಲಕ್ಕೆತ್ತಿ ಬಲ ಭಾಗದ ಕಡೆಗೆ ಬಾಗಿರಿ *ಕನಿಷ್ಠ 5 ಬಾರಿಯಾದರೂ ಈ ಆಸನವನ್ನು ಮಾಡಿ *ಮೊದಲಿಗೆ ಪ್ರಯಯತ್ನಿಸುವಾಗ ಬಹಳ ಎಚ್ಚರಿಕೆಯಿಂದರಿ *ಯೋಗಸಾನ ಮಾಡುವಾಗ ಗಡಿಬಿಡಿ ಬೇಡ *ಪ್ರತಿಯೊಂದು ಯೋಗ ಭಂಗಿಗಳಿಗೂ ಅದರದೇ ಆದ ಶೈಲಿಯಿದೆ. ಹಾಗಿರುವಾಗ ಆ ಆಸನದ ಕುರಿತಾಗಿ ಸಂಪೂರ್ಣವಾಗಿ ತಿಳಿದುಕೊಂಡು ನಂತರ ಯೋಗಾಭ್ಯಾಸ ಮಾಡುವುದು ಅತ್ಯವಶ್ಯಕ

ಇದನ್ನೂ ಓದಿ:

International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?