AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದ ಒತ್ತಡ, ಆತಂಕವನ್ನು ನಿವಾರಿಸಲು ಶಿಲ್ಪಾ ಶೆಟ್ಟಿ ಮಾಡುವ ಯೋಗ ಭಂಗಿ ಯಾವುದು ಗೊತ್ತಾ?

shilpa shetty: ಆರೋಗ್ಯದ ಸುರಕ್ಷತೆಗಾಗಿ ನಟಿ ಶಿಲ್ಪಾ ಶೆಟ್ಟಿ ಯೋಗಾಭ್ಯಾಸವನ್ನು ಮಾಡುತ್ತಾರೆ. ಇತರರಿಗೆ ಸ್ಪೂರ್ತಿ ನೀಡುವಂತಹ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕೆಲವು ಯೋಗ ಭಂಗಿಗಳನ್ನು ಮಾಡುವ ಮೂಲಕ ಇನಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ದೇಹದ ಒತ್ತಡ, ಆತಂಕವನ್ನು ನಿವಾರಿಸಲು ಶಿಲ್ಪಾ ಶೆಟ್ಟಿ ಮಾಡುವ ಯೋಗ ಭಂಗಿ ಯಾವುದು ಗೊತ್ತಾ?
ನಟಿ ಶಿಲ್ಪಾ ಶೆಟ್ಟಿ
Follow us
TV9 Web
| Updated By: shruti hegde

Updated on: Jun 21, 2021 | 10:40 AM

ಕೊವಿಡ್​ ಸಾಂಕ್ರಾಮಿಕ ರೋಗ ಎಲ್ಲರ ಮನಸ್ಥಿತಿಯನ್ನು ಕೆಡಿಸಿಬಿಟ್ಟಿತು. ಮಾನಸಿಕ ಹಾಗೂ ದೈಹಿಕ ಒತ್ತಡ ಜನರಲ್ಲಿ ಕಾಡತೊಡಗಿತು. ಹೀಗಿರುವಾಗ ಜನರು ಅನಗತ್ಯ ಚಿಂತೆಯನ್ನು ಬಿಟ್ಟು, ಧೈರ್ಯದಿಂದ ಸಮಸ್ಯೆಯನ್ನು ಎದುರಿಸಬೇಕು. ಜತೆಗೆ ಮಾನಸಿಕ ಒತ್ತಡದಿಂದ ಪರಿಹಾರ ಕಂಡುಕೊಳ್ಳಲೇ ಬೇಕು. ಯೋಗದ ಕೆಲವು ಆನಸಗಳು ನಿಮ್ಮ ಮಾನಸಿಕ ಒತ್ತಡವನ್ನು ಸುಧಾರಿಸುತ್ತದೆ. ಆರೋಗ್ಯದ ಸುರಕ್ಷತೆಗಾಗಿ ನಟಿ ಶಿಲ್ಪಾ ಶೆಟ್ಟಿ ಯೋಗಾಭ್ಯಾಸವನ್ನು ಮಾಡುತ್ತಾರೆ. ಇತರರಿಗೆ ಸ್ಪೂರ್ತಿ ನೀಡುವಂತಹ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಯೋಗ ಭಂಗಿಗಳನ್ನು ಮಾಡುವ ಮೂಲಕ ಇನಸ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಕೆಲವು ಯೋಗಗಳ ಆಸನಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ, ಇವುಗಳು ನಿಮ್ಮ ಮಾನಸಿಕ ಮತ್ತು ದೇಹದ ಒತ್ತಡವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ಮನಸ್ಸು ಶಾಂತಿಯಿಂದಿರಲು ಯೋಗಾಸನವು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದರ ಜತೆಗೆ ನಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಯೋಗಾಸನ ಸಹಾಯಕವಾಗಿದೆ. ದೈಹಿಕ ಒತ್ತಡ ಮತ್ತು ಮಾನಸಿಕ ಆತಂಕವನ್ನು ನಿವಾರಿಸಲು ಈ ಆಸನ ಸಹಾಯ ಮಾಡುತ್ತದೆ. ಈ ಯೋಗಾಸನದ ಹೆಸರು ಪಾರ್ಶ್ವ ಸುಖಾಸನ. ದೈಹಿಕವಾಗಿ ನಿಮ್ಮ ಕುತ್ತಿಗೆ, ಭುಜಗಳು, ಬೆನ್ನಿನ ಭಾಗವನ್ನು ಹಿಗ್ಗಿಸಲು ಇದು ಸಹಾಯ ಮಾಡುತ್ತದೆ ಎಂದು ತಿಳಿಸುವ ಮೂಲಕ ಪೋಸ್ಟ್​ ಹಂಚಿಕೊಂಡಿದ್ದಾರೆ.

ನಿಮಗೆ ಸಾಧ್ಯವಾದಾಗ ಸ್ವಲ್ಪ ವಿರಾಮ ತೆಗೆದುಕೊಳ್ಳಿ. ನಿಮ್ಮ ಮನಸ್ಸು ಶಾಂತವಾಗಿರಲಿ ಮತ್ತು ದೇಹವನ್ನು ಸಡಿಲವಾಗಿ ಬಿಡಿ. ಈ ಆಸನವನ್ನು ನಿಧಾನವಾಗಿ ಅಭ್ಯಾಸ ಮಾಡಿ.. ನಿಮ್ಮ ಮನಸ್ಸು ಮತ್ತು ದೇಹವು ಸಡಿಲವಾಗಿರಲಿ ಎಂದು ಹೇಳಿದ್ದಾರೆ.

ಪಾರ್ಶ್ವ ಸುಖಾಸನ ಮಾಡುವ ವಿಧಾನ

* ನೆಲದ ಮೇಲೆ ಚಾಪೆಯನ್ನು ಹಾಸಿಕೊಂಡು ಆರಾಮವಾಗಿ ಪದ್ಮಾಸನದಲ್ಲಿ ಕುಳಿತುಕೊಳ್ಳಿ *ನಿಮ್ಮ ಎಡ ಬದಿಯ ಕೈಯನ್ನು(ಮೊಣಕೈ ಬಾಗಿರಲಿ) ಎಡಭಾಗದ ಕಾಲಿನ ಪಕ್ಕಕ್ಕೆ ಬಾಗಿಸಿ ನೆಲಕ್ಕೆ ಊರಿ *ನಿಮ್ಮ ಬಲಭಾಗದ ಕೈಯನ್ನು ಮೇಲಕ್ಕೆ ಎತ್ತಿ ಎಡಭಾಗಕ್ಕೆ ಬಾಗಿ- 30 ಸೆಕೆಂಡುಗಳ ಕಾಲ ಹಾಗೆಯೇ ಇರಿ *ಇದೇ ರೀತಿ ಬಲಭಾಗದ ಕೈಗಳನ್ನು ನೆಲಕ್ಕೆ ಊರಿ, ಎಡಗೈಯನ್ನು ಮೇಲಕ್ಕೆತ್ತಿ ಬಲ ಭಾಗದ ಕಡೆಗೆ ಬಾಗಿರಿ *ಕನಿಷ್ಠ 5 ಬಾರಿಯಾದರೂ ಈ ಆಸನವನ್ನು ಮಾಡಿ *ಮೊದಲಿಗೆ ಪ್ರಯಯತ್ನಿಸುವಾಗ ಬಹಳ ಎಚ್ಚರಿಕೆಯಿಂದರಿ *ಯೋಗಸಾನ ಮಾಡುವಾಗ ಗಡಿಬಿಡಿ ಬೇಡ *ಪ್ರತಿಯೊಂದು ಯೋಗ ಭಂಗಿಗಳಿಗೂ ಅದರದೇ ಆದ ಶೈಲಿಯಿದೆ. ಹಾಗಿರುವಾಗ ಆ ಆಸನದ ಕುರಿತಾಗಿ ಸಂಪೂರ್ಣವಾಗಿ ತಿಳಿದುಕೊಂಡು ನಂತರ ಯೋಗಾಭ್ಯಾಸ ಮಾಡುವುದು ಅತ್ಯವಶ್ಯಕ

ಇದನ್ನೂ ಓದಿ:

International Yoga Day 2021: ಕೊರೊನಾ ಸೋಂಕಿತರೊಂದಿಗೆ ಕೊವಿಡ್​ ಕೇಂದ್ರದಲ್ಲೇ ಯೋಗ ದಿನಾಚರಣೆ ಆಚರಿಸಿದ ರೇಣುಕಾಚಾರ್ಯ

International Yoga Day 2021: 18ಸಾವಿರ ಅಡಿ ಎತ್ತರದ ಹಿಮಾಚ್ಛಾದಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡಿದ ಐಟಿಬಿಪಿ ಯೋಧರು

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ