Mug Cake Recipe: ಕೇವಲ 2 ನಿಮಿಷಗಳಲ್ಲಿ ಚಾಕೊಲೇಟ್ ಮಗ್ ಕೇಕ್ ತಯಾರಿಸಿ

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ತಮ್ಮ ಫೇವರೇಟ್​​ ಚಾಕೊಲೇಟ್ ಮಗ್ ಕೇಕ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೀವು ಕೇವಲ ಎರಡೇ ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ನೀವು ನಿಮ್ಮ ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ.

Mug Cake Recipe: ಕೇವಲ 2 ನಿಮಿಷಗಳಲ್ಲಿ ಚಾಕೊಲೇಟ್ ಮಗ್ ಕೇಕ್ ತಯಾರಿಸಿ
ಚಾಕೊಲೇಟ್ ಮಗ್ ಕೇಕ್ Image Credit source: NDTV
Follow us
|

Updated on:Feb 11, 2023 | 6:19 PM

ಸೆಲೆಬ್ರೆಟಿಗಳು ತಮ್ಮ ಸೌಂದರ್ಯ ಹಾಗೂ ಫಿಟ್ನೆಸ್​​​ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ. ಜೊತೆಗೆ ಯಾವ ರೀತಿಯ ಆಹಾರಗಳನ್ನು ರೂಢಿಸಿಕೊಂಡಿದ್ದಾರೆ ಹಾಗೂ ದೈನಂದಿನ ಜೀವನಕ್ರಮಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹಾಗೆಯೇ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ತಮ್ಮ ಫೇವರೇಟ್​​ ಚಾಕೊಲೇಟ್ ಮಗ್ ಕೇಕ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೀವು ಕೇವಲ ಎರಡೇ ನಿಮಿಷಗಳಲ್ಲಿ ತಯಾರಿಸಬಹುದಾಗಿದೆ. ನೀವು ನಿಮ್ಮ ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ.

ಚಾಕೊಲೇಟ್ ಮಗ್ ಕೇಕ್ ರೆಸಿಪಿ:

ಬೇಕಾಗುವ ಸಾಮಾಗ್ರಿಗಳು:

ಹಾಲು, ಬೆಣ್ಣೆ, ಮೈದಾ, ಕೋಕೋ ಪೌಡರ್, ಉಪ್ಪು, ಸಕ್ಕರೆ ಪುಡಿ. ನೀವು ಮೈದಾದ ಬದಲಾಗಿ ಗೋಧಿ ಹಿಟ್ಟನ್ನು ಬಳಸಬಹುದು. ಹಾಗೆಯೇ ಹಾಲಿನ ಬದಲಾಗಿ ಬಾದಾಮಿ ಹಾಲನ್ನು ಬಳಸಬಹುದಾಗಿದೆ.

ಇದನ್ನೂ ಓದಿ: ಮನೆಯಲ್ಲಿಯೇ ಗರಿ ಗರಿಯಾಗಿ ಅಕ್ಕಿ ಪಕೋಡ ತಯಾರಿಸಿ

ಚಾಕೊಲೇಟ್ ಮಗ್ ಕೇಕ್ ಮಾಡುವ ವಿಧಾನ:

ಮೊದಲಿಗೆ ಮೇಲೆ ನೀಡಿರುವ ಎಲ್ಲಾ ಪದಾರ್ಥಗಳನ್ನು ಒಂದು ಬಟ್ಟಲಿಗೆ ಹಾಕಿ. ನಂತರ ಇದನ್ನು ಚೆನ್ನಾಗಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ಒಂದು ಕಪ್​​ನಲ್ಲಿ ಹಾಕಿ , ಪೂರ್ತಿಯಾಗಿ ತುಂಬಿಸಬೇಡಿ. ಅರ್ಧ ತುಂಬಿಸಿದರೆ ಸಾಕು. ಮೈಕ್ರೊವೇವ್ ಓವನ್ ಪೂರ್ವಭಾವಿಯಾಗಿ ಕಾಯಿಸಿ ಮತ್ತು ಈಗ ಕಪ್​​​​ ಇಟ್ಟು 2.5 ನಿಮಿಷಗಳ ಕಾಲ ಬೇಯಿಸಿ. ಈಗ ಚಾಕೊಲೇಟ್ ಮಗ್ ಕೇಕ್ ತಯಾರಾಗಿದೆ. ಇದರ ಮೇಲೆ ಸ್ವಲ್ಪ ಚಾಕೊಲೇಟ್ ಸಾಸ್ ಹಾಕಿ ಅಲಂಕರಿಸಬಹುದಾಗಿದೆ. ಉತ್ತಮ ರುಚಿಯೂ ಕೂಡ ಇರುವುದರಿಂದ ಮಕ್ಕಳು ಖಂಡಿತಾ ಇಷ್ಟ ಪಟ್ಟು ತಿನ್ನುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 6:19 pm, Sat, 11 February 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ