AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರೆಸ್ಟೋರೆಂಟ್​​ನಲ್ಲಿ ಮೋಮೋಸ್ ತಿನ್ನುವಾಗ​ ಗಂಟಲಲ್ಲಿ ಸಿಕ್ಕಿ ವ್ಯಕ್ತಿ ಸಾವು!

ಅವಸರದಲ್ಲಿ ತಿನ್ನಬಾರದು ಮತ್ತು ತಿನ್ನುವ ಮೊದಲು ಆಹಾರವನ್ನು ಸರಿಯಾಗಿ ಅಗಿಯಬೇಕು. ಹಣ್ಣು ಮತ್ತು ತರಕಾರಿಗಳಂತಹ ಗಟ್ಟಿಯಾದ ಆಹಾರ ಪದಾರ್ಥಗಳನ್ನು ಬೇಯಿಸಿದ ನಂತರ ತಿನ್ನಬೇಕು. ಆಹಾರವನ್ನು ಯಾವಾಗಲೂ ಕೂತು ತಿನ್ನಬೇಕು ಎಂದು ತಜ್ಞರು ಸೂಚಿಸಿದ್ದಾರೆ.

Shocking News: ರೆಸ್ಟೋರೆಂಟ್​​ನಲ್ಲಿ ಮೋಮೋಸ್ ತಿನ್ನುವಾಗ​ ಗಂಟಲಲ್ಲಿ ಸಿಕ್ಕಿ ವ್ಯಕ್ತಿ ಸಾವು!
ಮೋಮೋಸ್Image Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 15, 2022 | 11:44 AM

ನವದೆಹಲಿ: ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 50 ವರ್ಷದ ವ್ಯಕ್ತಿಯೊಬ್ಬರು ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿದ್ದಾಗ ಗಂಟಲಲ್ಲಿ ಮೋಮೋಸ್ (Momos) ಸಿಲುಕಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಶವಪರೀಕ್ಷೆ ನಡೆಸಿದ ವೈದ್ಯರು ಆ ವ್ಯಕ್ತಿ ತಿಂದಿದ್ದ ಮೋಮೋ ಗಂಟಲಿನ ನಾಳದಲ್ಲಿ ಸಿಕ್ಕಿಹಾಕಿಕೊಂಡಿರುವುದನ್ನು ಕಂಡುಹಿಡಿದಿದ್ದಾರೆ ಎಂದು ಏಮ್ಸ್ ವರದಿಯಲ್ಲಿ ತಿಳಿಸಿದೆ.

ಕಂಪ್ಯೂಟರ್ ಟೋಪೋಲಜಿ ಸ್ಕ್ಯಾನ್ ಮೂಲಕ ಆ ವ್ಯಕ್ತಿ ತಿಂದಿದ್ದ ಆಹಾರ ಗಂಟಲಿನ ನಾಳದ ಮೇಲ್ಭಾಗದಲ್ಲಿ ಸಿಕ್ಕಿಕೊಂಡಿರುವುದು ಶವಪರೀಕ್ಷೆ ವೇಳೆ ಪತ್ತೆಯಾಗಿದೆ. ಇದರಿಂದಲೇ ಸಾವು ಸಂಭವಿಸಿದ ಎನ್ನಲಾಗಿದೆ. 12 ಲಕ್ಷ ಜನರಲ್ಲಿ ಒಬ್ಬರು ಆಹಾರದಲ್ಲಿ ಉಸಿರುಗಟ್ಟಿ ಸಾಯುತ್ತಾರೆ. ಸಾಯುವ ಮೊದಲು ಆ ವ್ಯಕ್ತಿ ಕುಡಿದಿದ್ದರು ಎಂದು ಏಮ್ಸ್ ವರದಿ ಹೇಳಿದೆ. ಮೋಮೋಸ್ ತಿನ್ನುತ್ತಿದ್ದ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Shocking News: ಹೆಂಡತಿಗೆ ಸರ್ಕಾರಿ ಕೆಲಸ ಸಿಕ್ಕಿದ್ದಕ್ಕೆ ಆಕೆಯ ಕೈ ಕತ್ತರಿಸಿದ ಗಂಡ!; ಹೀಗೂ ಇರ್ತಾರಾ?

ಇದನ್ನೂ ಓದಿ
Image
ಅಮೆರಿಕಾದಲ್ಲಿರುವ ಭಾರತೀಯ ರೆಸ್ಟೋರೆಂಟ್ ಈಗ ಅಮೆರಿಕದ ಅತ್ಯುತ್ತಮ ರೆಸ್ಟೋರೆಂಟ್
Image
Relationship: ಸಂಗಾತಿ ಜತೆ ನಿಮ್ಮ ಬಂಧ ಗಟ್ಟಿಯಾಗಿರಬೇಕೆಂದರೆ ಮಾತಿನ ಶೈಲಿ ಬದಲಿಸಿಕೊಳ್ಳಿ
Image
Viral Video : ‘ಪಸೂರಿ’ ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!

ಆಹಾರ ತಿನ್ನುವಾಗ ಉಸಿರುಗಟ್ಟಿಸುವುದನ್ನು ತಪ್ಪಿಸಲು ಜನರು ಆಹಾರವನ್ನು ಸಣ್ಣ ಭಾಗಗಳಾಗಿ ಮಾಡಿಕೊಂಡು, ನಿಧಾನವಾಗಿ ತಿನ್ನಬೇಕು. ಅವಸರದಲ್ಲಿ ತಿನ್ನಬಾರದು ಮತ್ತು ತಿನ್ನುವ ಮೊದಲು ಆಹಾರವನ್ನು ಸರಿಯಾಗಿ ಅಗಿಯಬೇಕು. ಹಣ್ಣು ಮತ್ತು ತರಕಾರಿಗಳಂತಹ ಗಟ್ಟಿಯಾದ ಆಹಾರ ಪದಾರ್ಥಗಳನ್ನು ಬೇಯಿಸಿದ, ತುರಿದ ಅಥವಾ ಹಿಸುಕಿದ ನಂತರ ತಿನ್ನಬೇಕು. ಆಹಾರವನ್ನು ಯಾವಾಗಲೂ ಕೂತು ತಿನ್ನಬೇಕು ಎಂದು ತಜ್ಞರು ಸೂಚಿಸಿದ್ದಾರೆ.

ಮೋಮೋಸ್​ ಇತ್ತೀಚೆಗೆ ಹೆಚ್ಚು ಪ್ರಸಿದ್ಧಿ ಪಡೆಯುತ್ತಿರುವ ಖಾದ್ಯವಾಗಿದ್ದು, ಕುಕ್ಕರ್​​ನಲ್ಲಿ ನೀರು ಹಾಕಿ, ಹಬೆಯಲ್ಲಿಯೇ ಇದನ್ನು ಬೇಯಿಸಲಾಗುತ್ತದೆ. ಕಡುಬಿನ ರೀತಿಯಲ್ಲಿರುವ ಈ ಮೋಮೋಸ್​ ಒಳಗೆ ವೆಜ್ ಮಸಾಲೆ ಅಥವಾ ನಾನ್​ವೆಜ್ ಮಸಾಲೆಯನ್ನು ತುಂಬಿ ಬೇಯಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Wed, 15 June 22

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ