AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ

ಮಳೆಗಾಲ ಬಂತೆಂದರೆ ಸಾಕು ವೈರಲ್ ಜ್ವರವೂ ನಮ್ಮನ್ನು ಬೆನ್ನಟ್ಟಿ ಬರುತ್ತದೆ. ಸಾಮಾನ್ಯವಾಗಿ ಜ್ವರ ಬಂದ ಸಂದರ್ಭದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಮನೆಯ ಹಿರಿಯರು ಹೇಳುವ ಮಾತನ್ನು ಬಹುಃಶ ನಾವೆಲ್ಲರೂ ಕೇಳಿರಬಹುದು. ಜ್ವರ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಸ್ನಾನ ಮಾಡಬಾರದು ಎಂದು ಮನೆಯ ಹಿರಿಯರು ಈ ಮಾತನ್ನು ಹೇಳುತ್ತಿದ್ದರು. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಇಲ್ಲಿದೆ ಮಾಹಿತಿ.

ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Aug 22, 2023 | 4:44 PM

Share

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯ ಕುಗ್ಗುವಿಕೆಯ ಕಾರಣದಿಂದ ಜ್ವರ, ಶೀತ, ಕೆಮ್ಮು ಇನ್ನಿತರ ಕಾಯಿಲೆಗಳು ನಮ್ಮನ್ನು ಬಾಧಿಸುತ್ತವೆ. ಅಲ್ಲದೇ ಈ ಋತುವಿನಲ್ಲಿ ವೈರಲ್ ಜ್ವರ ಕೂಡಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಜ್ವರದಿಂದಾಗಿ ಸುಸ್ತು, ಮೈ ಕೈ ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣದಿಂದಾಗಿ ಹೆಚ್ಚಿನವರು ಈ ಸಮಯದಲ್ಲಿ ಸ್ನಾನ ಮಾಡಲು ಇಷ್ಟಪಡುವುದಿಲ್ಲ. ಇದರ ಹೊರತಾಗಿ ಮನೆಯ ಹಿರಿಯರೂ ಕೂಡಾ ಜ್ವರದ ಸಮಯದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಹೇಳುತ್ತಾರೆ. ಏಕೆಂದರೆ ಇಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡಿದರೆ ಜ್ವರವು ಇನ್ನಷ್ಟು ಉಲ್ಬಣಗೊಳ್ಳಬಹುದು ಎಂಬ ಕಾರಣಕ್ಕೆ ಈ ಮಾತನ್ನು ಹೇಳುತ್ತಾರೆ. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ.

ಜ್ವರದ ಸಮಯದಲ್ಲಿ ಸ್ನಾನ ಮಾಡಬೇಕೇ ಅಥವಾ ಬೇಡವೇ?

ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯುಂಟಾಗುವುದಿಲ್ಲ. ಅವರ ಪ್ರಕಾರ ನೀವು ಜ್ವರ ಇರುವಂತಹ ಸಮಯದಲ್ಲಿ ಸ್ನಾನ ಮಾಡಬಹುದು ಆದರೆ ಅದಕ್ಕೂ ಮೊದಲು ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜ್ವರ ಬಂದಾಗ ಅಧಿಕ ಬಿಸಿ ಅಥವಾ ತನ್ನೀರಿನಿಂದ ಸ್ನಾನ ಮಾಡಬಾರದು. ಬದಲಿಗೆ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿದರೆ ಉತ್ತಮ. ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಜ್ವರದ ಪರಿಣಾಮವನ್ನು ಸಹ ಕಡಿಮೆ ಮಾಡಬಹುದು.

ಇದನ್ನೂ ಓದಿ:ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ಅಷ್ಟೇ ಅಲ್ಲ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಸ್ನಾಯುಗಳು ಸಹ ವಿಶ್ರಾಂತಿಯನ್ನು ಪಡೆಯುತ್ತವೆ. ಜೊತೆಗೆ ದೇಹದ ನೋವು ನಿವಾರಣೆಯಾಗುತ್ತದೆ. ಇದರ ಹೊರತಾಗಿ ಯಾರಿಗಾದರೂ ಜ್ವರ 102 ಡಿಗ್ರಿ ಅಥವಾ ಅದಕ್ಕಿಂಂತ ಹೆಚ್ಚಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡುವ ತಪ್ಪನ್ನು ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ