Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ

ಮಳೆಗಾಲ ಬಂತೆಂದರೆ ಸಾಕು ವೈರಲ್ ಜ್ವರವೂ ನಮ್ಮನ್ನು ಬೆನ್ನಟ್ಟಿ ಬರುತ್ತದೆ. ಸಾಮಾನ್ಯವಾಗಿ ಜ್ವರ ಬಂದ ಸಂದರ್ಭದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಮನೆಯ ಹಿರಿಯರು ಹೇಳುವ ಮಾತನ್ನು ಬಹುಃಶ ನಾವೆಲ್ಲರೂ ಕೇಳಿರಬಹುದು. ಜ್ವರ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಸ್ನಾನ ಮಾಡಬಾರದು ಎಂದು ಮನೆಯ ಹಿರಿಯರು ಈ ಮಾತನ್ನು ಹೇಳುತ್ತಿದ್ದರು. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಇಲ್ಲಿದೆ ಮಾಹಿತಿ.

ಜ್ವರ ಬಂದಾಗ ಸ್ನಾನ ಮಾಡಬಾರದೇ? ಇಲ್ಲಿದೆ ತಜ್ಞರ ಸಲಹೆ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2023 | 4:44 PM

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯ ಕುಗ್ಗುವಿಕೆಯ ಕಾರಣದಿಂದ ಜ್ವರ, ಶೀತ, ಕೆಮ್ಮು ಇನ್ನಿತರ ಕಾಯಿಲೆಗಳು ನಮ್ಮನ್ನು ಬಾಧಿಸುತ್ತವೆ. ಅಲ್ಲದೇ ಈ ಋತುವಿನಲ್ಲಿ ವೈರಲ್ ಜ್ವರ ಕೂಡಾ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಜ್ವರದಿಂದಾಗಿ ಸುಸ್ತು, ಮೈ ಕೈ ನೋವು ಕಾಣಿಸಿಕೊಳ್ಳುತ್ತದೆ. ಈ ಕಾರಣದಿಂದಾಗಿ ಹೆಚ್ಚಿನವರು ಈ ಸಮಯದಲ್ಲಿ ಸ್ನಾನ ಮಾಡಲು ಇಷ್ಟಪಡುವುದಿಲ್ಲ. ಇದರ ಹೊರತಾಗಿ ಮನೆಯ ಹಿರಿಯರೂ ಕೂಡಾ ಜ್ವರದ ಸಮಯದಲ್ಲಿ ಸ್ನಾನ ಮಾಡಬೇಡಿ, ಕೈಕಾಲು ಮುಖ ತೊಳೆದುಕೊಂಡರೆ ಸಾಕು ಎಂದು ಹೇಳುತ್ತಾರೆ. ಏಕೆಂದರೆ ಇಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡಿದರೆ ಜ್ವರವು ಇನ್ನಷ್ಟು ಉಲ್ಬಣಗೊಳ್ಳಬಹುದು ಎಂಬ ಕಾರಣಕ್ಕೆ ಈ ಮಾತನ್ನು ಹೇಳುತ್ತಾರೆ. ಅಷ್ಟಕ್ಕೂ ಜ್ವರ ಬಂದಾಗ ಸ್ನಾನ ಮಾಡಬಾರದೇ? ಈ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ನೋಡೋಣ.

ಜ್ವರದ ಸಮಯದಲ್ಲಿ ಸ್ನಾನ ಮಾಡಬೇಕೇ ಅಥವಾ ಬೇಡವೇ?

ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯುಂಟಾಗುವುದಿಲ್ಲ. ಅವರ ಪ್ರಕಾರ ನೀವು ಜ್ವರ ಇರುವಂತಹ ಸಮಯದಲ್ಲಿ ಸ್ನಾನ ಮಾಡಬಹುದು ಆದರೆ ಅದಕ್ಕೂ ಮೊದಲು ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಜ್ವರ ಬಂದಾಗ ಅಧಿಕ ಬಿಸಿ ಅಥವಾ ತನ್ನೀರಿನಿಂದ ಸ್ನಾನ ಮಾಡಬಾರದು. ಬದಲಿಗೆ ಉಗುರು ಬೆಚ್ಚಗಿನ ನೀರಿನಲ್ಲಿ ಸ್ನಾನ ಮಾಡಿದರೆ ಉತ್ತಮ. ತಜ್ಞರ ಪ್ರಕಾರ ಜ್ವರದ ಸಮಯದಲ್ಲಿ ಉಗುರುಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಜ್ವರದ ಪರಿಣಾಮವನ್ನು ಸಹ ಕಡಿಮೆ ಮಾಡಬಹುದು.

ಇದನ್ನೂ ಓದಿ:ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ

ಅಷ್ಟೇ ಅಲ್ಲ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಿಮ್ಮ ಸ್ನಾಯುಗಳು ಸಹ ವಿಶ್ರಾಂತಿಯನ್ನು ಪಡೆಯುತ್ತವೆ. ಜೊತೆಗೆ ದೇಹದ ನೋವು ನಿವಾರಣೆಯಾಗುತ್ತದೆ. ಇದರ ಹೊರತಾಗಿ ಯಾರಿಗಾದರೂ ಜ್ವರ 102 ಡಿಗ್ರಿ ಅಥವಾ ಅದಕ್ಕಿಂಂತ ಹೆಚ್ಚಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಸ್ನಾನ ಮಾಡುವ ತಪ್ಪನ್ನು ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ: 

ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ವಾರಂಗಲ್​ನ ಉದ್ಯೋಗ ಮೇಳದಲ್ಲಿ ಕಾಲ್ತುಳಿತ; ಮೂವರು ಮಹಿಳೆಯರಿಗೆ ಗಾಯ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ