AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ಹೆಚ್ಚು ಫೋನ್‌ ನೋಡಲು ಬಿಡ್ಬೇಡಿ; ಯಾಕೆ ಗೊತ್ತಾ?

ಈ ಡಿಜಿಟಲ್‌ ಯುಗದಲ್ಲಿ ಪುಟ್ಟ ಪುಟ್ಟ ಮಕ್ಕಳು ಸ್ಮಾರ್ಟ್‌ ಫೋನ್‌ ವ್ಯಸನಿಗಳಾಗಿದ್ದಾರೆ. ಹೊರಗಡೆ ಆಟವಾಡಲು ಹೋಗುವ ಬದಲು ಮೊಬೈಲ್‌ ನೋಡುತ್ತಲೇ ಸಮಯ ಕಳೆಯುತ್ತಾರೆ. ಇನ್ನೂ ಪೋಷಕರು ಅಷ್ಟೆ ಮಕ್ಕಳು ಅತ್ತರೆ ಅಥವಾ ಅವರು ಊಟ ಮಾಡಲ್ಲ ಎಂದು ಹಠ ಮಾಡಿದಾಗ ಮೊಬೈಲ್‌ ಕೊಟ್ಟು ಬಿಡುತ್ತಾರೆ. ಹೀಗೆ ಹೆಚ್ಚು ಮಕ್ಕಳಿಗೆ ಮೊಬೈಲ್‌ ಕೊಟ್ಟರೆ ಏನಾಗುತ್ತದೆ ಎಂಬುದನ್ನು ನೀವು ತಿಳಿಯಲೇಬೇಕು ನೋಡಿ.

ಮಕ್ಕಳಿಗೆ ಹೆಚ್ಚು ಫೋನ್‌ ನೋಡಲು ಬಿಡ್ಬೇಡಿ; ಯಾಕೆ ಗೊತ್ತಾ?
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Aug 23, 2025 | 9:00 AM

Share

ಈಗಿನ ಕಾಲದ ಮಕ್ಕಳು ಸ್ನೇಹಿತರು, ಒಡ ಹುಟ್ಟಿದವರ ಜೊತೆ ಆಟವಾಡುತ್ತಾ ಸಮಯ ಕಳೆಯುವುದಕ್ಕಿಂತ ಮೊಬೈಲ್‌ (phones) ನೋಡುತ್ತಾ ಸಮಯ ಕಳೆಯುವುದೇ ಹೆಚ್ಚಾಗಿದೆ. ಮಕ್ಕಳಂತೂ ಮೊಬೈಲ್‌ ಚಟಕ್ಕೆ (Mobile addiction) ಬಿದ್ದಿದ್ದು, ಗೇಮ್ಸ್‌, ಸೋಷಿಯಲ್‌ ಮೀಡಿಯಾದ ಅಂತೆಲ್ಲಾ ದಿನದ ಹೆಚ್ಚಿನ ಸಮಯ ಫೋನ್‌ನಲ್ಲಿಯೇ ಕಳೆಯುತ್ತಿದ್ದಾರೆ. ಮಕ್ಕಳು ಹಠ ಮಾಡ್ತಾರೆ ಅನ್ನೋ ಕಾರಣಕ್ಕೆ ನೀವು ಪೋಷಕರಾದ ನೀವು ಸಹ ಅವರಿಗೆ ಮೊಬೈಲ್‌ ಕೊಡುತ್ತಿದ್ದೀರಾ? ಹೀಗೆ ಫೋನನ್ನು ಹೆಚ್ಚು ಹೊತ್ತು ನೋಡೋದ್ರಿಂದ ಏನಾಗುತ್ತೆ ಗೊತ್ತಾ? ಇದು ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮವನ್ನು ಬೀರುತ್ತದೆ ಎಂಬುದನ್ನು ತಿಳಿಯಿರಿ.

ಮಕ್ಕಳಿಗೆ ಫೋನ್ ಕೊಟ್ಟರೆ ಏನಾಗುತ್ತದೆ?

ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ಅತಿಯಾದ ಮೊಬೈಲ್‌ ಬಳಕೆ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಿರಂತರವಾಗಿ ಫೋನ್‌ ನೋಡುವುದರಿಂದ ಅವರ ಏಕಾಗ್ರತೆ ಕಡಿಮೆಯಾಗುತ್ತದೆ. ಇದು ಅವರ ಅಧ್ಯಯನ ಮತ್ತು ಇತರ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ ಹೆಚ್ಚು ಫೋನ್‌ ನೋಡುವುದರಿಂದ ಕಿರಿಕಿರಿ ಮತ್ತು ಕೋಪಗೊಳ್ಳುತ್ತಾರೆ.

ನಿದ್ರೆ ಸಂಬಂಧಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಕೆಲವೊಂದು ಮಕ್ಕಳು ರಾತ್ರಿ ಹೆಚ್ಚು ಹೊತ್ತು ಮೊಬೈಲ್‌ ನೋಡುತ್ತಾರೆ. ಇದು ಅವರ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಿದ್ರಾಹೀನತೆಗೆ ಕಾರಣವಾಗಬಹುದು. ಅಲ್ಲದೆ ಫೋನ್‌ನಿಂದ ಬರುವ ನೀಲಿ ಬೆಳಕು ನಿದ್ರೆಯನ್ನು ನಿಯಂತ್ರಿಸುವ ಮೆಲಟೋನಿನ್ ಹಾರ್ಮೋನ್ ಮೇಲೆ ಪರಿಣಾಮ ಬೀರುತ್ತದೆ. ಪರಿಣಾಮವಾಗಿ, ಮಕ್ಕಳು ರಾತ್ರಿಯಲ್ಲಿ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ
Image
ಒಡಹುಟ್ಟಿದವರು ಯಾವಾಗಲೂ ಕಿತ್ತಾಡುವುದು ಏಕೆ ಗೊತ್ತಾ?
Image
ಮೊಮ್ಮಕ್ಕಳು ಅಜ್ಜ-ಅಜ್ಜಿಯೊಂದಿಗೆ ಸಮಯ ಕಳೆಯಬೇಕು ಎನ್ನುವುದು ಇದಕ್ಕೆ ನೋಡಿ
Image
ನಿಮ್ಮ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ
Image
ಪೋಷಕರು ಪದೇ ಪದೇ ಮಕ್ಕಳ ಮುಂದೆ ಜಗಳವಾಡಿದರೆ ಏನಾಗುತ್ತದೆ ಗೊತ್ತಾ?

ಕಣ್ಣುಗಳ ಮೇಲೆ ಪರಿಣಾಮ ಬೀರುತ್ತದೆ: ಫೋನ್ ಪರದೆಗಳಿಂದ ಬರುವ ನೀಲಿ ವಿಕಿರಣವು ಮಕ್ಕಳ ಸೂಕ್ಷ್ಮ ಕಣ್ಣುಗಳಿಗೆ ಹಾನಿ ಉಂಟುಮಾಡುತ್ತದೆ. ಇದರಿಂದ ದೃಷ್ಟಿ ಮಂದವಾಗುವುದು, ಕಣ್ಣಿನ ಕಿರಿಕಿರಿ ಮತ್ತು ಕಣ್ಣುಗಳಲ್ಲಿ ನೀರು ಬರುವಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನೂ ಓದಿ: ಮೊಮ್ಮಕ್ಕಳು ಅಜ್ಜ-ಅಜ್ಜಿಯೊಂದಿಗೆ ಸಮಯ ಕಳೆಯಬೇಕು ಎನ್ನುವುದು ಇದಕ್ಕೆ ನೋಡಿ

ದೈಹಿಕ ಚಟುವಟಿಕೆಯ ಕೊರತೆ: ಹೆಚ್ಚು ಕಾಲ  ಫೋನ್ ನೋಡುತ್ತಾ ಸಮಯ ಕಳೆಯುವ ಮಕ್ಕಳು ಹೊರಾಂಗಣ ಆಟಗಳನ್ನು ಆಡುವುದೇ ಇಲ್ಲ. ಇದು ದೈಹಿಕ ಚಟುವಟಿಕೆಯ ಕೊರತೆಗೆ ಕಾರಣವಾಗುತ್ತದೆ. ಇದು ಮಕ್ಕಳ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಅಲ್ಲದೆ ಇದು ಮಕ್ಕಳ ತೂಕ ಹೆಚ್ಚಾಗಲು ಕಾರಣವಾಗುತ್ತದೆ, ಇದು ಬೊಜ್ಜಿನ ಸಮಸ್ಯೆಯನ್ನು ಉಂಟುಮಾಡುತ್ತದೆ.

ಸಾಮಾಜಿಕ ಕೌಶಲ್ಯಗಳು ಪರಿಣಾಮ ಬೀರುತ್ತವೆ: ಹೆಚ್ಚು ಹೊತ್ತು ಮೊಬೈಲ್‌ನಲ್ಲಿ ಸಮಯ ಕಳೆಯುವುದರಿಂದ ಸಾಮಾಜಿಕವಾಗಿ ದೌರ್ಬಲರಾಗಿರುತ್ತಾರೆ. ಅವು ಯಾರೊಂದಿಗೂ ಹೆಚ್ಚು ಸಂವಹನ ನಡೆಸುವುದಿಲ್ಲ. ಇದು ಮಕ್ಕಳ ಸಂವಹನ ಕೌಶಲ್ಯ, ಚುರುಕುತನ ಮತ್ತು ಆತ್ಮವಿಶ್ವಾಸವನ್ನು ಕಡಿಮೆ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ