Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ಚಳಿಯಾದರೆ ದೇಹದ ಮೇಲಾಗುವ ಪರಿಣಾಮಗಳೇನು?

ವಿಪರೀತ ಚಳಿಯನ್ನು ನಿಭಾಯಿಸಲು ಮಾನವನ ದೇಹವು ಅಸಮರ್ಥವಾಗಿದೆ. ಹೊರಗಿನ ತಾಪಮಾನ ಕಡಿಮೆಯಾಗುತ್ತಿದ್ದಂತೆ ನಮ್ಮ ದೇಹವು ತಾಪಮಾನವನ್ನು ಎತ್ತಿ ಹಿಡಿಯಲು ಹೆಚ್ಚುವರಿ ಪ್ರಯತ್ನ ಮಾಡುತ್ತದೆ. ಇದರಿಂದ ಆರೋಗ್ಯದ ಅಪಾಯಗಳು ಉಂಟಾಗಬಹುದು.

ವಿಪರೀತ ಚಳಿಯಾದರೆ ದೇಹದ ಮೇಲಾಗುವ ಪರಿಣಾಮಗಳೇನು?
ಚಳಿ
Follow us
ಸುಷ್ಮಾ ಚಕ್ರೆ
|

Updated on: Jan 09, 2024 | 3:42 PM

ಚಳಿಗಾಲದ ಚಳಿಗೆ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಕರ್ನಾಟಕದ ಕೆಲವು ಭಾಗಗಳು ಕೂಡ ನಲುಗುತ್ತಿವೆ. ಮಂಜು ತುಂಬಿದ ಮುಂಜಾನೆ ಮತ್ತು ಸೂರ್ಯನ ಬೆಳಕು ಕಡಿಮೆಯಾಗಿ ಉತ್ತರ ಭಾರತದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದೆ. ದೆಹಲಿಯಲ್ಲಿ 12.1 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಈ ಚಳಿಯು 2 ದಿನಗಳವರೆಗೆ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ವಿಪರೀತ ಚಳಿಯನ್ನು ನಿಭಾಯಿಸಲು ಮಾನವನ ದೇಹವು ಅಸಮರ್ಥವಾಗಿದೆ. ಹೊರಗಿನ ತಾಪಮಾನ ಕಡಿಮೆಯಾಗುತ್ತಿದ್ದಂತೆ ನಮ್ಮ ದೇಹವು ತಾಪಮಾನವನ್ನು ಎತ್ತಿ ಹಿಡಿಯಲು ಹೆಚ್ಚುವರಿ ಪ್ರಯತ್ನ ಮಾಡುತ್ತದೆ. ಇದರಿಂದ ಆರೋಗ್ಯದ ಅಪಾಯಗಳು ಉಂಟಾಗಬಹುದು. ತೀವ್ರವಾದ ಚಳಿಯು ನಿಮ್ಮ ಯೋಗಕ್ಷೇಮದ ಮೇಲೆ ಯಾವ ರೀತಿಯ ಕೆಟ್ಟ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಹೈಪೋಥರ್ಮಿಯಾ:

ಇದು ನಡುಗುವಿಕೆ, ಗೊಂದಲ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಪ್ರಜ್ಞಾಹೀನತೆಯಂತಹ ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ವಿಪರೀತ ಚಳಿಯ ತಾಪಮಾನಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಜೀವಕ್ಕೇ ಅಪಾಯಕಾರಿಯಾದ ಈ ಸಮಸ್ಯೆ ಉಂಟಾಗುತ್ತದೆ.

ಇದನ್ನೂ ಓದಿ: ಹೃದಯದ ಆರೋಗ್ಯ ಹೆಚ್ಚಿಸುವ 9 ಸೂಪರ್‌ಫುಡ್‌ಗಳು ಇಲ್ಲಿವೆ

ಫ್ರಾಸ್ಬೈಟ್:

ತೆರೆದ ಚರ್ಮ ಮತ್ತು ತುದಿಗಳು ತೀವ್ರವಾದ ಶೀತದಲ್ಲಿ ಫ್ರಾಸ್ಬೈಟ್​ಗೆ ಒಳಗಾಗುತ್ತವೆ. ಚರ್ಮ ಮತ್ತು ಅಂಗಾಂಶಗಳ ಘನೀಕರಣದಿಂದ ತೊಂದರೆ ಉಂಟಾಗಬಹುದು. ಮರಗಟ್ಟುವಿಕೆ, ಬಣ್ಣ ಮತ್ತು ಅಂಗಾಂಶಗಳ ಹಾನಿಗೆ ಕಾರಣವಾಗಬಹುದು. ತೀವ್ರವಾದ ಶೀತದ ಈ ನೋವಿನ ಮತ್ತು ಸಂಭಾವ್ಯ ಶಾಶ್ವತ ಪರಿಣಾಮವನ್ನು ತಡೆಯಲು ಕೈಗಳು, ಪಾದಗಳು, ಮೂಗು ಮತ್ತು ಕಿವಿಗಳನ್ನು ಬೆಚ್ಚಗಿಡುವುದು ಮುಖ್ಯ.

ಉಸಿರಾಟದ ಸಮಸ್ಯೆಗಳು:

ತಣ್ಣನೆಯ ಗಾಳಿಯು ಉಸಿರಾಟದ ವ್ಯವಸ್ಥೆಗೆ ತೊಂದರೆ ಉಂಟುಮಾಡಬಹುದು. ಅದರಲ್ಲೂ ವಿಶೇಷವಾಗಿ ಅಸ್ತಮಾ ಅಥವಾ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ (COPD) ರೀತಿಯ ಮೊದಲೇ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಇದು ಇನ್ನಷ್ಟು ತೊಂದರೆ ಉಂಟುಮಾಡುತ್ತದೆ. ಶೀತ, ಶುಷ್ಕ ಗಾಳಿಯು ಶ್ವಾಸನಾಳಕ್ಕೆ ತೊಂದರೆ ಉಂಟುಮಾಡುತ್ತದೆ. ಇದು ಉಸಿರಾಟದ ತೊಂದರೆ, ಕೆಮ್ಮು ಮತ್ತು ಉಬ್ಬಸಕ್ಕೆ ಕಾರಣವಾಗುತ್ತದೆ. ಹೀಗಾಗಿ, ಆರೋಗ್ಯ ಸಮಸ್ಯೆ ಇರುವವರು ತಮ್ಮ ಮೂಗು ಮತ್ತು ಬಾಯಿಯನ್ನು ಮುಚ್ಚಲು ಸ್ಕಾರ್ಫ್‌ಗಳನ್ನು ಧರಿಸುವ ಮೂಲಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.

ಹೃದಯರಕ್ತನಾಳದ ಒತ್ತಡ:

ತೀವ್ರವಾದ ಶೀತವು ಹೃದಯರಕ್ತನಾಳದ ವ್ಯವಸ್ಥೆಯ ಮೇಲೆ ಹೆಚ್ಚುವರಿ ಹೊರೆಯನ್ನು ಉಂಟುಮಾಡುತ್ತದೆ. ಆಗ ದೇಹವು ತನ್ನ ತಾಪಮಾನವನ್ನು ಕಾಪಾಡಿಕೊಳ್ಳಲು ಹೆಚ್ಚು ಶ್ರಮಿಸುತ್ತದೆ. ಇದು ಹೆಚ್ಚಿದ ಹೃದಯ ಬಡಿತ ಮತ್ತು ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೃದಯದ ಸಮಸ್ಯೆ ಇರುವ ವ್ಯಕ್ತಿಗಳಿಗೆ ಈ ಹೆಚ್ಚುವರಿ ಒತ್ತಡವು ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತದ ಅಪಾಯದಿಂದ ಪಾರಾಗುವುದು ಹೇಗೆ?

ಸೋಂಕುಗಳಿಗೆ ಹೆಚ್ಚಿದ ಸಂವೇದನೆ:

ಶೀತ ಹವಾಮಾನವು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಈ ವೇಳೆ ಜನರು ಸೋಂಕುಗಳಿಗೆ ಹೆಚ್ಚು ಒಳಗಾಗುತ್ತಾರೆ. ಕಡಿಮೆ ತಾಪಮಾನ ಮತ್ತು ಶುಷ್ಕ ಗಾಳಿಯ ಸಂಯೋಜನೆಯು ವೈರಸ್​ ಮತ್ತು ಬ್ಯಾಕ್ಟೀರಿಯಾಗಳ ವಿರುದ್ಧ ದೇಹ ಹೋರಾಡದೆ ಇರಬಹುದು. ಜ್ವರ ಮತ್ತು ನೆಗಡಿಯಂತಹ ಉಸಿರಾಟದ ಸೋಂಕುಗಳು ಚಳಿಗಾಲದ ತಿಂಗಳುಗಳಲ್ಲಿ ಹೆಚ್ಚಾಗುತ್ತವೆ. ಹೀಗಾಗಿ, ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡುವುದು, ಉಷ್ಣತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ