AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕಿರಿಯನ್ನುಂಟು ಮಾಡುವ ಗಂಟಲು ನೋವಿನಿಂದ ಮುಕ್ತಿಗೆ ಈ ಮನೆ ಮದ್ದನ್ನು ಟ್ರೈ ಮಾಡಿ

ಹವಾಮಾನದಲ್ಲಾಗುವ ಸಣ್ಣ ಪುಟ್ಟ ಬದಲಾವಣೆಗಳು ಆರೋಗ್ಯದ ಮೇಲೆ ಪರಿಣಾಮಗಳನ್ನು ಬೀರುತ್ತವೆ. ಈ ವೇಳೆ ಹೆಚ್ಚಿನವರಲ್ಲಿ ಗಂಟಲು ನೋವಿನ ಸಮಸ್ಯೆಯು ಬಾಧಿಸಬಹುದು. ಗಂಟಲು ನೋವಿನಿಂದ ಕಿರಿಕಿರಿ ಅನುಭವಿಸುತ್ತಿದ್ದರೆ ಮನೆ ಮದ್ದಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬಹುದು.

ಕಿರಿಕಿರಿಯನ್ನುಂಟು ಮಾಡುವ ಗಂಟಲು ನೋವಿನಿಂದ ಮುಕ್ತಿಗೆ ಈ ಮನೆ ಮದ್ದನ್ನು ಟ್ರೈ ಮಾಡಿ
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 28, 2024 | 5:51 PM

Share

ಕುಡಿಯುವ ನೀರಿನಿಂದ, ಹವಾಮಾನದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಗಂಟಲು ನೋವು ಕಾಡುತ್ತದೆ. ಗಂಟಲಿನಲ್ಲಿ ಕಿರಿಕಿರಿ ಅನುಭವವಾದರೆ ಸಾಕು, ಶೀತ ಕೆಮ್ಮಿನಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಮುನ್ಸೂಚನೆಯಾಗಿದೆ. ಆಹಾರ ಸೇವಿಸುವುದಕ್ಕೆ, ರಾತ್ರಿ ನಿದ್ದೆ ಮಾಡುವುದಕ್ಕೂ ಕಷ್ಟವಾಗುತ್ತದೆ. ಬಿಸಿ ಬಿಸಿ ನೀರು ಕುಡಿದರೆ ಸ್ವಲ್ಪ ಆರಾಮದಾಯಕವಾಗುತ್ತದೆ. ಈ ಗಂಟಲು ಕೆರೆತ ಹಾಗೂ ನೋವು ಕಾಣಿಸಿಕೊಂಡಾಗ ಪ್ರಾರಂಭದಲ್ಲೇ ಮನೆಮದ್ದಿನ ಮೂಲಕ ತಕ್ಷಣದ ಪರಿಹಾರ ಕಂಡುಕೊಳ್ಳಬಹುದು.

* ಗಂಟಲು ನೋವಿಗೆ ಶುಂಠಿ ಜಜ್ಜಿಕೊಂಡು ರಸ ತೆಗೆದು ಜೇನು ತುಪ್ಪದೊಂದಿಗೆ ಮಿಶ್ರಣ ಮಾಡಿ ಸೇವಿಸಿದರೆ ಗಂಟಲು ನೋವಿನ ಸಮಸ್ಯೆಯು ಕಡಿಮೆಯಾಗುತ್ತದೆ.

* ಗಂಟಲು ನೋವಿನ ಸಮಸ್ಯೆ ಕಾಣಿಸಿಕೊಂಡರೆ ಕರಿಮೆಣಸಿನ ಪುಡಿ ಕಷಾಯ ಮಾಡಿ ಸೇವಿಸಿದರೆ ಪರಿಣಾಮಕಾರಿ.

* ಸ್ವಲ್ಪ ಕರಿಮೆಣಸಿನ ಪುಡಿಗೆ ಅರ್ಧ ಚಮಚ ಚಕ್ಕೆ ಪುಡಿ ಹಾಗೂ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಗಂಟಲು ನೋವಿಗೆ ಉತ್ತಮವಾದ ಮನೆ ಮದ್ದು.

* ತುಳಸಿ ಎಲೆಯ ರಸಕ್ಕೆ ಬಿಸಿ ನೀರು, ಅರಿಶಿಣ ಮತ್ತು ಸೈಂಧವ ಉಪ್ಪು ಹಾಕಿ ಬಾಯಿ ಮುಕ್ಕಳಿಸುವುದರಿಂದ ನೋವು ಶಮನವಾಗುತ್ತದೆ.

* ಬೆಳ್ಳುಳ್ಳಿ ರಸ ಮತ್ತು ನಿಂಬೆರಸವನ್ನು ಬೆರೆಸಿ ಸೇವಿಸುವುದರಿಂದ ಗಂಟಲು ನೋವಿನೊಂದಿಗೆ ಕಫದ ಸಮಸ್ಯೆಯಿದ್ದಲ್ಲಿ ನಿವಾರಣೆಯಾಗುತ್ತದೆ.

* ಮೋಸಂಬಿ ರಸಕ್ಕೆ ಜೇನುತುಪ್ಪ ಸೇರಿಸಿ ಕುಡಿದರೆ ಗಂಟಲು ಕೆರೆತವು ಕಡಿಮೆಯಾಗುತ್ತದೆ.

* ಉಪ್ಪನ್ನು ಬಿಸಿ ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಆರಾಮದಾಯಕ ಅನುಭವವಾಗುತ್ತದೆ.

* ಓಮಿನ ಕಷಾಯಕ್ಕೆ ಅಡಿಗೆ ಉಪ್ಪನ್ನು ಸೇರಿಸಿ, ಆಗಾಗ ಬಾಯಿ ಮುಕ್ಕಳಿಸುವುದರಿಂದ ಗಂಟಲು ಹುಣ್ಣು ಗುಣ ಮುಖ ಕಾಣುತ್ತದೆ.

* ಅಳಲೆಕಾಯಿಯನ್ನು ಜೇನುತುಪ್ಪದಲ್ಲಿ ತೇದು, ಗಂಟಲಿಗೆ ಹಚ್ಚುತ್ತಿದ್ದರೆ ಗಂಟಲ ಕೆರೆತವು ದೂರವಾಗುತ್ತದೆ

* ಮಾವಿನ ತೊಗಟೆಯ ಕಷಾಯಕ್ಕೆ ಉಪ್ಪು ಸೇರಿಸಿ, ಬಾಯಿ ಮುಕ್ಕುಳಿಸುವುದ ರಿಂದ ಗಂಟಲು ನೋವಿಗೆ ಪರಿಣಾಮಕಾರಿ ಔಷಧಿ.

ಇದನ್ನೂ ಓದಿ: ಅಧಿಕ ವರ್ಷಗಳು ಇಲ್ಲದಿದ್ದರೆ ಏನಾಗುತ್ತಿತ್ತು ಗೊತ್ತಾ?

* ಹಸಿಶುಂಠಿಯ ಸಣ್ಣ ಸಣ್ಣ ಚೂರುಗಳೊಂದಿಗೆ ಕಲ್ಲು ಸಕ್ಕರೆಯ ಚೂರುಗಳನ್ನು ಬೆರೆಸಿ ಜಗಿದು ರಸವನ್ನು ನುಂಗುತ್ತಿದ್ದರೆ ಗಂಟಲುನೋವು ಕಡಿಮೆಯಾಗುವುದು.

* ಅಡಿಕೆ ಕಷಾಯದಿಂದ ಬಾಯಿ ಮುಕ್ತಳಿಸಿದರೆ ಗಂಟಲುನೋವು ಗುಣ ಮುಖ ಕಾಣುತ್ತದೆ.

* ಲವಂಗವನ್ನು ಉಪ್ಪಿನ ಹರಳಿನೊಂದಿಗೆ ಚಪ್ಪರಿಸುತ್ತಿದ್ದರೆ ಗಂಟಲ ಕೆರೆತ ಕಡಿಮೆ ಆಗುವುದು.

* ಲವಂಗವನ್ನು ಜಗಿದು ರಸವನ್ನು ನುಂಗುವುದರಿಂದ ಗಂಟಲು ನೋವು ಶಮನವಾಗುತ್ತದೆ.

* ಗಂಟಲು ನೋವು ಬಾಧಿಸುತ್ತಿದ್ದರೆ, ತುಳಸಿ ಎಲೆ, ದೊಡ್ಡ ಪತ್ರೆ ಎಲೆಗಳನ್ನು ಅರೆದು, ಅರ್ಧ ಲೀಟರ್ ನೀರಿನಲ್ಲಿ ಕುದಿಸಬೇಕು. ಈ ನೀರಿಗೆ ಉಪ್ಪು ಬೆರೆಸಿ ದಿನಕ್ಕೆ ಮೂರು ಸಲ ಊಟಕ್ಕೂ ಮುನ್ನ ಕುಡಿಯುವುದರಿಂದ ಗಂಟಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಗುಣಮುಖ ಕಾಣುವುದು.

ಈ ಮನೆಮದ್ದು ಉಪಯೋಗಿಸುವ ಮುನ್ನ ತಜ್ಞರ ಬಳಿ ಚರ್ಚಿಸುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ