AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Back Acne : ಬೆನ್ನಿನ ಮೇಲೆ ಮೊಡವೆಗಳಿದ್ದರೆ ಟೆನ್ಶನ್ ಬೇಡ, ಇಲ್ಲಿದೆ ಸರಳ ಪರಿಹಾರ

ಮುಖದ ಮೇಲಿನ ಮೊಡವೆಯೂ ಅಂದವನ್ನು ಹಾಳು ಮಾಡುತ್ತದೆಯೇ ಹೇಗೋ, ಅದೇ ರೀತಿ ಬೆನ್ನ ಮೇಲಿನ ಮೊಡವೆಗಳು ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಬ್ಯಾಕ್ ಡೀಪ್ ಡ್ರೆಸ್ ಏನಾದರೂ ಹಾಕಿ ಬಿಟ್ಟರೆ ಮುಗಿದೇ ಹೋಯಿತು, ಬೆನ್ನ ಮೇಲಿನ ಮೊಡವೆ ಹಾಗೂ ಕಲೆಗಳಿಂದ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. ಈ ಸಮಸ್ಯೆಗೆ ಇದಕ್ಕೆ ಮನೆಯಲ್ಲೆ ಸುಲಭವಾಗಿ ಪರಿಹಾರವನ್ನು ಕಂಡುಕೊಳ್ಳಬಹುದು.

Back Acne : ಬೆನ್ನಿನ ಮೇಲೆ ಮೊಡವೆಗಳಿದ್ದರೆ ಟೆನ್ಶನ್ ಬೇಡ, ಇಲ್ಲಿದೆ ಸರಳ ಪರಿಹಾರ
ಸಾಯಿನಂದಾ
| Edited By: |

Updated on: Jun 04, 2024 | 5:24 PM

Share

ಹೆಣ್ಣು ಮಕ್ಕಳಿಗೆ ಮುಖದ ಮೇಲೆ ಒಂದೋ ಎರಡೋ ಮೊಡವೆಗಳು ಕಾಣಿಸಿಕೊಂಡರೆ ಆಕಾಶವೇ ತಲೆ ಮೇಲೆ ಬಿದ್ದವರಂತೆ ವರ್ತಿಸುತ್ತಾರೆ. ಬೆನ್ನ ಮೇಲೆ ಮೊಡವೆಗಳು ಕಾಣಿಸಿಕೊಂಡರೆ, ಬೆನ್ನ ಮೇಲಿನ ಮೊಡವೆಗಳು ತುರಿಕೆ ಹಾಗೂ ಉರಿಯಂತಹ ಸಮಸ್ಯೆಯನ್ನು ಉಂಟು ಮಾಡಬಹುದು. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುತ್ತಾರೆ. ಬೆನ್ನ ಮೇಲಿನ ಮೊಡವೆಯನ್ನು ತೊಡೆದು ಹಾಕಲು ಈ ಮನೆ ಮದ್ದುಗಳನ್ನು ಬಳಸಬಹುದು.

ಬೆನ್ನ ಮೇಲಿನ ಮೊಡವೆ ನಿವಾರಣೆಗೆ ಮನೆಮದ್ದುಗಳಿವು:

  • ಟೊಮೆಟೊವನ್ನು ಅರ್ಧದಷ್ಟು ಕತ್ತರಿಸಿ, ಅದನ್ನು ಬೆನ್ನಿನ ಮೇಲೆ ಹಚ್ಚಿ 15 ನಿಮಿಷಗಳ ಕಾಲ ಬಿಡಬೇಕು. ಆ ಬಳಿಕ ತಣ್ಣೀರಿನಿಂದ ತೊಳೆದರೆ ಬೆನ್ನಿನ ಮೇಲಿನ ಮೊಡವೆ ಹಾಗೂ ಕಲೆಗಳು ಕಡಿಮೆಯಾಗುತ್ತದೆ.
  • ನಿಂಬೆ ರಸ ಮತ್ತು ರೋಸ್ ವಾಟರನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ, ಬೆನ್ನಿನ ಮೇಲೆ ಹಚ್ಚಿ 30 ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆಯುವುದು ಪರಿಣಾಮಕಾರಿಯಾಗಿದೆ.
  • ಅಲೋವೆರಾ ಜೆಲ್ ಚರ್ಮಕ್ಕೆ ಒಳ್ಳೆಯದು. ಹೀಗಾಗಿ ಸ್ವಲ್ಪ ಅಲೋವೆರಾ ಜೆಲ್ ತೆಗೆದುಕೊಂಡು ಅದನ್ನು ಫ್ರಿಜ್ನಲ್ಲಿಡಿ. ತಣ್ಣಗಾದ ಈ ಜೆಲ್ ಅನ್ನು ಮೊಡವೆ ಇರುವ ಜಾಗಕ್ಕೆ ಅನ್ವಯಿಸಿ ಅರ್ಧ ಘಂಟೆಯ ನಂತರ ತೊಳೆಯುವುದರಿಂದ ಮೊಡವೆಗಳು ಕಡಿಮೆಯಾಗುತ್ತದೆ.
  • ಜೇನುತುಪ್ಪ ಮತ್ತು ದಾಲ್ಚಿನ್ನಿ ಮಿಶ್ರಣದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿದ್ದು, ಮೊಡವೆ ಸಮಸ್ಯೆಯನ್ನು ನಿವಾರಿಸುತ್ತದೆ. ಒಂದು ಚಮಚ ಜೇನುತುಪ್ಪ ಮತ್ತು ದಾಲ್ಚಿನ್ನಿ ಪುಡಿಯನ್ನು ಬೆರೆಸಿ ಮೊಡವೆಗಳ ಮೇಲೆ ಹಚ್ಚಬೇಕು. ಸ್ವಲ್ಪ ಸಮಯದ ನಂತರ ತಣ್ಣೀರಿನಿಂದ ತೊಳೆದರೆ ಸಾಕು ಬೆನ್ನ ಮೇಲಿನ ಮೊಡವೆಗಳು ಕಡಿಮೆಯಾಗುತ್ತದೆ.
  • ತ್ವಚೆಯ ಆರೈಕೆಯಲ್ಲಿ ಗ್ರೀನ್ ಟೀ ಕೂಡ ಉಪಯುಕ್ತವಾಗಿದೆ. ಒಂದು ಲೋಟ ಗ್ರೀನ್ ಟೀ ತಯಾರಿಸಿ, ಅದರಲ್ಲಿ ಹತ್ತಿಯನ್ನು ಅದ್ದಿ ಬೆನ್ನ ಮೇಲಿನ ಮೊಡವೆಗಳ ಮೇಲೆ ಹಚ್ಚಿದರೆ ಈ ಸಮಸ್ಯೆಯೂ ಶಮನವಾಗುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಇದನ್ನೂ ಓದಿ: ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು