AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಇಲಿಗಳ ಕಾಟವೇ? ಈ ಟಿಪ್ಸ್ ಪಾಲಿಸಿದರೆ ಈ ಸಮಸ್ಯೆಯಿಂದ ನಿಮಗೆ ಸಿಗುತ್ತೆ ಮುಕ್ತಿ

ಕೆಲವರ ಮನೆಯಲ್ಲಿ ಸಿಕ್ಕಾಪಟ್ಟೆ ಇಲಿಗಳ ಕಾಟ ಇರುತ್ತೆ. ಡಬ್ಬಗಳಲ್ಲಿಟ್ಟ ಕಾಳು, ಆಹಾರದಿಂದ ಹಿಡಿದು ಬಟ್ಟೆ ಇತ್ಯಾದಿ ಮನೆ ವಸ್ತುಗಳನ್ನು ಸಹ ಹಾಳು ಮಾಡಿ ಬಿಡುತ್ತದೆ. ಈ ಕಾಟದಿಂದ ಬೇಸತ್ತು ಹೆಚ್ಚಿನವರು ಮನೆಯಲ್ಲಿ ಬೆಕ್ಕು ಸಾಕುವುದೋ ಇಲ್ಲವೇ ವಿಷವಿಟ್ಟು ಇಲಿ ಕಾಟದಿಂದ ಮುಕ್ತಿ ಪಡೆಯಲು ಯತ್ನಿಸುತ್ತಾರೆ. ಆದ್ರೆ ಈ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ಇಲಿಗಳನ್ನು ಸಾಯಿಸದೆಯೇ, ಅವುಗಳ ಕಾಟದಿಂದ ಮುಕ್ತಿ ಪಡೆಯಬಹುದು.

ಮನೆಯಲ್ಲಿ ಇಲಿಗಳ ಕಾಟವೇ? ಈ ಟಿಪ್ಸ್ ಪಾಲಿಸಿದರೆ ಈ ಸಮಸ್ಯೆಯಿಂದ ನಿಮಗೆ ಸಿಗುತ್ತೆ ಮುಕ್ತಿ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Aug 04, 2025 | 6:10 PM

Share

ಹಲ್ಲಿ, ಜಿರಳೆಗಳ ಕಾಟವಿರುವಂತೆ ಹೆಚ್ಚಿನ ಮನೆಗಳಲ್ಲಿ ಇಲಿಗಳ (Rats) ಕಾಟ ಸಹ ಇದ್ದೇ ಇರುತ್ತದೆ. ಜಿರಳೆಗಳಿಗೆ ಹೋಲಿಸಿದರೆ ಇಲಿಗಳ ಕಾಟವೇ ತೀರಾ ಹೆಚ್ಚು. ಹೌದು ಇವುಗಳು ದಿನಸಿ, ಕಾಳುಗಳನ್ನು ಹಾಳು ಮಾಡುವುದು ಮಾತ್ರವಲ್ಲದೆ ಬಟ್ಟೆ, ಎಲೆಕ್ಟ್ರಾನಿಕ್‌ ವಸ್ತುಗಳನ್ನು ಸಹ ಹಾನಿ ಮಾಡುತ್ತವೆ. ಇವುಗಳ ಈ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ಆಹಾರದಲ್ಲಿ ವಿಷ ಹಾಕಿ ಇಟ್ಟು ಬಿಡುತ್ತಾರೆ. ಆದ್ರೆ ಕೆಲವೊಂದು ಬಾರಿ ಇಲಿಗಳಿಗೆ ಇಟ್ಟಂತಹ ಈ ಆಹಾರಗಳನ್ನು ಮನೆಯಲ್ಲಿರುವ ಸಾಕು ಪ್ರಾಣಿಗಳು ತಿಂದು ಅಪಾಯಕ್ಕೆ ಸಿಲುಕುತ್ತವೆ. ಹೀಗಿರುವಾಗ ಇಲಿಗಳನ್ನು ಸಾಯಿಸದೆ ಅವುಗಳ ಕಾಟದಿಂದ ಹೇಗಪ್ಪಾ ಮುಕ್ತಿ (remove rats from the home) ಪಡೆಯುವುದು ಎಂದು ಯೋಚಿಸುತ್ತಿದ್ದರೆ, ನಿಮಗಾಗಿ ಇಲ್ಲಿವೆ ಕೆಲವೊಂದು ಸಲಹೆಗಳು.

ಇಲಿಗಳ ಕಾಟದಿಂದ ಮುಕ್ತಿ ಪಡೆಯಲು ಸುಲಭ ಸಲಹೆಗಳು:

ಕರ್ಪೂರ: ಇಲಿಗಳನ್ನು ಓಡಿಸಲು ಕರ್ಪೂರ ಪರಿಣಾಮಕಾರಿಯಾಗಿದೆ.  ಹೌದು ಕರ್ಪೂರ ಇದ್ದರೆ, ನಿಮ್ಮ ಮನೆಯಲ್ಲಿ ಇಲಿಗಳ ಕಾಟವೇ ಇರುವುದಿಲ್ಲ. ಕರ್ಪೂರದ ವಾಸನೆ ಎಷ್ಟು ಪ್ರಬಲವಾಗಿದೆಯೆಂದರೆ ಇಲಿಗಳು ಅವುಗಳನ್ನು ಇಷ್ಟಪಡುವುದಿಲ್ಲ.  ಆದ್ದರಿಂದ ಮನೆಯ ಪ್ರತಿಯೊಂದು ಮೂಲೆಯಲ್ಲಿಯೂ ಕರ್ಪೂರವನ್ನು ಇರಿಸಿ ಅಥವಾ ನೀವು ಕರ್ಪೂರವನ್ನು ಸುಟ್ಟು ಅದರ ಹೊಗೆಯನ್ನು ಮನೆಯಲ್ಲಿ ಹರಡಬಹುದು ಈ ಮೂಲಕ ಇಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು.

ಪಲಾವ್‌ ಎಲೆ: ಬೇ ಲೀಫ್‌ ಅಥವಾ ಪಲಾವ್‌ ಎಲೆ ಕೂಡ ಇಲಿಗಳನ್ನು ಓಡಿಸಲು ಪರಿಣಾಮಕಾರಿಯಾಗಿದೆ. ಇಲಿಗಳಿಗೆ ಇದರ ಕಟುವಾದ ವಾಸನೆ ಇಷ್ಟವಾಗುವುದಿಲ್ಲ.  ಆದ್ದರಿಂದ ಮನೆಯಲ್ಲಿ ಇಲಿಗಳು ಓಡಾಡುವ ಸ್ಥಳದಲ್ಲಿ  8-10 ಪಲಾವ್‌  ಎಲೆಗಳನ್ನು ಇಟ್ಟು ಬಿಡಿ. ಇದರ ವಾಸನೆಗೆ ಇಲಿಗಳು ನಿಮ್ಮ ಮನೆಯ ಹತ್ತಿರಕ್ಕೂ ಸುಳಿಯುವುದಿಲ್ಲ.

ಇದನ್ನೂ ಓದಿ
Image
ಮೊಮ್ಮಕ್ಕಳು ಅಜ್ಜ-ಅಜ್ಜಿಯೊಂದಿಗೆ ಸಮಯ ಕಳೆಯಬೇಕು ಎನ್ನುವುದು ಇದಕ್ಕೆ ನೋಡಿ
Image
ಈ ಅಭ್ಯಾಸಗಳಿದ್ದರೆ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದಿಲ್ಲ
Image
ಮನೆಯಲ್ಲಿ ಈ ಪಕ್ಷಿಗಳ ಫೋಟೊಗಳನ್ನು ಇಡುವುದು ಅದೃಷ್ಟದ ಸಂಕೇತವಂತೆ
Image
ನಿಮ್ಮ ಮಕ್ಕಳ ನೆನಪಿನ ಶಕ್ತಿಯನ್ನು ಹೆಚ್ಚಿಸಲು ಹೀಗೆ ಮಾಡಿ

ದಾಲ್ಚಿನ್ನಿ: ಈ ಮಸಾಲೆ ಪದಾರ್ಥ ಅಡುಗೆಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಇಲಿಗಳನ್ನು ಓಡಿಸಲು ಸಹ ಪರಿಣಾಮಕಾರಿ ಮನೆಮದ್ದಾಗಿದೆ. ಇದಕ್ಕಾಗಿ, ನೀವು  ಮೊದಲು ದಾಲ್ಚಿನ್ನಿಯ ಪುಡಿಯನ್ನು ತಯಾರಿಸಿ ಮನೆಯ ಪ್ರತಿಯೊಂದು ಮೂಲೆಯಲ್ಲಿ ಇರಿಸಿ. ಇಲಿಗಳು ಇವುಗಳ ವಾಸನೆ ಗ್ರಹಿಸಿದರೆ ಅಲ್ಲಿಂದ ಓಡಿ ಬಿಡುತ್ತವೆ.

ಇದನ್ನೂ ಓದಿ: ಈ ಪಕ್ಷಿಗಳ ಫೋಟೋವನ್ನು ಮನೆಯಲ್ಲಿಟ್ಟರೆ, ಅದೃಷ್ಟ ನಿಮ್ಮನ್ನು ಹುಡುಕಿ ಬರುತ್ತೆ

ಬೆಳ್ಳುಳ್ಳಿ ಮತ್ತು ಕರಿಮೆಣಸು: ಇಲಿಗಳಿಗೆ ಬೆಳ್ಳುಳ್ಳಿ ಮತ್ತು ಕರಿಮೆಣಸಿನ ವಾಸನೆಯೂ ಇಷ್ಟವಾಗುವುದಿಲ್ಲ.   ಹೀಗಿರುವಾಗ ಇಲಿಗಳನ್ನು ಮನೆಯಿಂದ ಓಡಿಸಲು ನೀವು ಬೆಳ್ಳುಳ್ಳಿ ಮತ್ತು ಕರಿಮೆಣಸನ್ನು ಪುಡಿ ಮಾಡಿ ಬಳಿಕ ಅದರ ಉಂಡೆ ತಯಾರಿಸಿ, ಇಳಿಗಳು ವಿಪರೀತವಾಗಿ ಓಡಾಡುವ ಸ್ಥಳದಲ್ಲಿ ಇಟ್ಟುಬಿಡಿ.

ಪುದೀನಾ, ಲವಂಗ: ಇದಲ್ಲದೆ ಇಲಿಗಳಿಗೆ ಪುದೀನಾ ಮತ್ತು ಲವಂಗದ ವಾಸನೆಯೂ ಇಷ್ಟವಾಗುವುದಿಲ್ಲ. ಹಾಗಾಗಿ ಇದು ಕೂಡಾ ಇಲಿಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ನೀವು ಮನೆಯಲ್ಲಿ ಇಲಿಗಳು ಓಡಾಡುವ ಸ್ಥಳದಲ್ಲಿ ಪುದೀನಾದ ಎಲೆಗಳು ಹಾಗೂ ಲವಂಗವನ್ನು ಹರಡಿ. ಇವುಗಳ ಕಟುವಾದ ವಾಸನೆಯಿಂದಾಗಿ ಇಲಿಗಳು ಓಡಿ ಹೋಗುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?