AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ

ಯಾವುದೇ ಅಡುಗೆಯೇ ಇರಲಿ ಉಪ್ಪಿಯಿಲ್ಲದೇ ರುಚಿಸುವುದೇ ಇಲ್ಲ. ಉಪ್ಪು ಕಡಿಮೆಯಾದರೆ, ಬೆರೆಸಿಯಾದರೂ ಊಟ ಮಾಡಬಹುದು. ಹೆಚ್ಚಾದರೆ ಆಹಾರವನ್ನು ಸೇವಿಸಲು ಆಗುವುದೇ ಇಲ್ಲ. ಕೆಲವೊಮ್ಮೆ ಅಪ್ಪಿತಪ್ಪಿ ಅಡುಗೆಗೆ ಉಪ್ಪು ಹೆಚ್ಚಾದರೆ, ತಕ್ಷಣವೇ ಹೀಗೆ ಮಾಡಿದರೆ ಆಹಾರದಲ್ಲಿರುವ ಉಪ್ಪಿನಾಂಶವನ್ನು ಕಡಿಮೆ ಮಾಡಬಹುದು.

Cooking Tips : ಅಡುಗೆಯಲ್ಲಿ ಉಪ್ಪು ಹೆಚ್ಚಾದರೆ ಟೆನ್ಶನ್ ಮಾಡಿಕೊಳ್ಬೇಡಿ, ತಕ್ಷಣವೇ ಹೀಗೆ ಮಾಡಿ
ಅಕ್ಷತಾ ವರ್ಕಾಡಿ
|

Updated on: Jun 11, 2024 | 7:40 PM

Share

ಒಬ್ಬರ ಕೈ ರುಚಿ ಮತ್ತೊಬ್ಬರ ಕೈ ರುಚಿಗೆ ಹೋಲಿಸಿದರೆ ಭಿನ್ನವಾಗಿರುತ್ತದೆ. ಅಡುಗೆ ಮಾಡುವಾಗ ಕೆಲವೊಮ್ಮೆ ರುಚಿಯಲ್ಲಿ ವ್ಯತ್ಯಾಸವಾಗಬಹುದು. ರುಚಿ ಬದಲಾದರೆ ಹೇಗೋ ತಿನ್ನಬಹುದು. ಆದರೆ ಉಪ್ಪು ಹೆಚ್ಚಾದರೆ ಏನು ಮಾಡೋದು. ಮನೆಗೆ ಅತಿಥಿಗಳು ಬರುತ್ತಾರೆ ಅಂತಾದರೆ ಅಡುಗೆಯಲ್ಲಿ ಉಪ್ಪು ಹೆಚ್ಚಾಗಿ ಬಿಡುತ್ತದೆ. ಹೀಗಾಗಿ ಅದೆಷ್ಟೋ ಸಲ ಅಡುಗೆ ಉಪ್ಪಿರುವ ಕಾರಣಕ್ಕೆ ತಯಾರಿಸಿದ ಪದಾರ್ಥಗಳನ್ನು ಬಿಸಾಡುತ್ತಾರೆ. ಕೆಲವರು ಬೇರೆ ಅಡುಗೆ ಮಾಡಿ ಅತಿಥಿಗಳ ಮುಂದೆ ಮರ್ಯಾದೆಯನ್ನು ಉಳಿಸಿಕೊಳ್ಳುವುದಿದೆ. ಆದರೆ ಈ ಕೆಲವು ಟ್ರಿಕ್ಸ್ ಬಳಸಿದರೆ ಅಡುಗೆಯಲ್ಲಿ ಹೆಚ್ಚಾಗಿರುವ ಉಪ್ಪನ್ನು ಕಡಿಮೆ ಮಾಡಬಹುದು.

  1. ಸಾರಿಗೆ ಉಪ್ಪು ಹೆಚ್ಚಾಗಿದ್ದರೆ ನೀರು ಬೆರೆಸಿ ಮತ್ತೊಮ್ಮೆ ಕುದಿಸಿಕೊಳ್ಳುವುದು ಒಳ್ಳೆಯದು. ಹೀಗೆ ಮಾಡಿದ್ದಲ್ಲಿ ಬೆರೆಸಿದ ಹೆಚ್ಚುವರಿ ನೀರಲ್ಲಿ ಉಪ್ಪು ಕರಗಿ ಹೋಗುತ್ತದೆ.
  2. ಅಡುಗೆಯ ಹೆಚ್ಚು ಉಪ್ಪಾಗಿದ್ದರೆ, ಅದನ್ನು ಸರಿ ಮಾಡಲು ಹುರಿದ ಕಡಲೆ ಹಿಟ್ಟನ್ನು ಬೆರೆಸುವುದು ಉತ್ತಮ. ಇದು ರುಚಿಯನ್ನು ಹೆಚ್ಚಿಸಿ, ಉಪ್ಪಿನಾಂಶವು ಕಡಿಮೆಯಾಗುತ್ತದೆ.
  3. ನಿಂಬೆ ರಸವನ್ನು ಬಳಸುವ ಮೂಲಕ, ನೀವು ಅಡುಗೆಯಲ್ಲಿನ ಹೆಚ್ಚುವರಿ ಉಪ್ಪನ್ನು ಸುಲಭವಾಗಿ ಕಡಿಮೆ ಮಾಡಬಹುದು.
  4. ಸಾಂಬಾರು ಉಪ್ಪಾಗಿದ್ದರೆ ಎರಡರಿಂದ ಮೂರು ಚಮಚ ನಿಂಬೆ ರಸವನ್ನು ಮಿಶ್ರಣವನ್ನು ಸೇರಿಸಿದರೆ ಸಮತೋಲನಕ್ಕೆ ಬರುತ್ತದೆ.
  5. ಉಪ್ಪಾಗಿರುವ ಅಡುಗೆಗೆ ತಕ್ಷಣವೇ ಮೊಸರನ್ನು ಬೆರೆಸಿ, ಎರಡರಿಂದ ಮೂರು ನಿಮಿಷಗಳ ಕಾಲ ಸಾಂಬಾರು ಅಥವಾ ಗ್ರೇವಿಯನ್ನು ಚೆನ್ನಾಗಿ ಕುದಿಸಿಬೇಕು. ಈ ಮೊಸರು ಉಪ್ಪಿನ ಅಂಶವನ್ನು ಹೀರಿಕೊಳ್ಳುತ್ತದೆ.
  6. ಅಡುಗೆಯಲ್ಲಿ ಉಪ್ಪಿನಾಂಶವು ಹೆಚ್ಚಾಗಿದರೆ ಬೇಯಿಸಿದ ಆಲೂಗಡ್ಡೆಯನ್ನು ಬಳಸಬಹುದು. ಬೇಯಿಸಿದ ಆಲೂಗಡ್ಡೆಯನ್ನು ಮ್ಯಾಶ್ ಮಾಡಿ, ಪದಾರ್ಥಕ್ಕೆ ಮಿಶ್ರಣ ಮಾಡಿದರೆ ಉಪ್ಪು ಸಮತೋಲನಕ್ಕೆ ಬರುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ