AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips : ವಿಚ್ಛೇದನದವರೆಗೆ ತಲುಪಿದ ದಾಂಪತ್ಯ ಜೀವನವನ್ನು ಸರಿಪಡಿಸಿಕೊಳ್ಳುವುದೇಗೆ? ಇಲ್ಲಿದೆ ಸರಳ ಸಲಹೆಗಳು

ಮದುವೆ ಎನ್ನುವುದು ಒಂದು ದಿನ ಬಂಧವಲ್ಲ. ಜೀವನ ಪರ್ಯಂತ ಗಂಡು ಹೆಣ್ಣು ಜೊತೆಗೆ ಬದುಕಬೇಕಾಗುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಮದುವೆ ಎನ್ನುವ ಸುಮಧುರ ಬಾಂಧವ್ಯ ಅರ್ಥವನ್ನು ಕಳೆದುಕೊಳ್ಳುತ್ತಿದೆ. ಸಣ್ಣ ಪುಟ್ಟ ವಿಷಯಗಳಿಗೆ ಡೈವೋರ್ಸ್ ಒಂದೇ ಮಾರ್ಗ ಎನ್ನುವ ನಿರ್ಧಾರಕ್ಕೆ ಎಷ್ಟೋ ದಂಪತಿಗಳು ಬರುತ್ತಿದ್ದಾರೆ. ಆದರೆ ಡೈವೋರ್ಸ್ ಹಂತದಲ್ಲಿರುವ ದಂಪತಿಗಳು ಈ ಕೆಲವು ಸಲಹೆಗಳನ್ನು ಅನುಸರಿಸಿದರೆ ದಾಂಪತ್ಯ ಜೀವನವನ್ನು ಸರಿಪಡಿಸಿಕೊಳ್ಳಬಹುದು.

Relationship Tips : ವಿಚ್ಛೇದನದವರೆಗೆ ತಲುಪಿದ ದಾಂಪತ್ಯ ಜೀವನವನ್ನು ಸರಿಪಡಿಸಿಕೊಳ್ಳುವುದೇಗೆ? ಇಲ್ಲಿದೆ ಸರಳ ಸಲಹೆಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 11, 2024 | 5:37 PM

Share

ಯಾವುದೇ ಸಂಬಂಧವನ್ನು ಕಾಪಾಡಿಕೊಳ್ಳುವುದು ಸುಲಭದ ವಿಷಯ ಅಲ್ಲವೇ ಅಲ್ಲ. ಪ್ರೀತಿ ಬೆಟ್ಟದಷ್ಟು ಇದ್ದರೂ ಸಣ್ಣ ಪುಟ್ಟ ಮುನಿಸು, ಮನಸ್ತಾಪಗಳು ಆ ಪ್ರೀತಿಯನ್ನು ಮರೆಮಾಚಿ ಬಿಡುತ್ತದೆ. ಈ ದಂಪತಿಗಳಲ್ಲಿ, ಸಂಬಂಧವು ಅನೇಕ ವಿಷಯಗಳಿಂದಾಗಿ ಹಳಸಿ ಹೋಗುವ ಸಾಧ್ಯತೆ ಇದೆ. ಕೊನೆಗೆ ಜೊತೆಗೆ ಇರಲು ಸಾಧ್ಯವೇ ಇಲ್ಲ ಎನ್ನುವ ತೀರ್ಮಾನಕ್ಕೆ ಬರುತ್ತಾರೆ. ಆದರೆ ದಂಪತಿಗಳಿಬ್ಬರೂ ಎಲ್ಲವನ್ನು ಮರೆತು ಒಬ್ಬರು ಇನ್ನೊಬ್ಬರಿಗಾಗಿ ಬದುಕಿದರೆ ಅದಕ್ಕಿಂತ ಸ್ವರ್ಗ ಮತ್ತೊಂದಿಲ್ಲ.

* ಪ್ರೀತಿಯನ್ನು ವ್ಯಕ್ತಪಡಿಸಿ : ವಿಚ್ಛೇದನ ನೀಡಲು ಇಷ್ಟವಿಲ್ಲದಿದ್ದರೆ ಕೊನೆಯ ಹಂತದಲ್ಲಿ ಸಂಬಂಧವನ್ನು ಉಳಿಸಿಕೊಳ್ಳಲು ಅವಕಾಶವಿದೆ. ಸತಿ ಪತಿಯರಲ್ಲಿ ಏನೇ ಮನಸ್ತಾಪಗಳಿದ್ದರೂ, ಅದನ್ನೆಲ್ಲವನ್ನು ಮರೆತು ಪ್ರೀತಿಯನ್ನು ವ್ಯಕ್ತಪಡಿಸಬಹುದು. ನಿಮ್ಮ ಸಂಗಾತಿಯ ಮೇಲೆ ನಿಮಗಿರುವ ಪ್ರೀತಿಯನ್ನು ಹೇಳಲು ಇದೊಂದು ಒಳ್ಳೆಯ ಅವಕಾಶವಾಗಿದೆ.

* ಜೊತೆಯಾಗಿ ಸಮಯವನ್ನು ಕಳೆಯಿರಿ : ಗಂಡ ಹೆಂಡಿರ ನಡುವಿನ ಅಂತರವು ವಿಚ್ಛೇದನಕ್ಕೆ ಕಾರಣವಾಗಿರಬಹುದು. ಹೀಗಾಗಿ ವಿಚ್ಛೇದನ ಆಲೋಚನೆ ಬಂದ ತಕ್ಷಣವೇ ಸಂಗಾತಿಯೊಂದಿಗೆ ಹೆಚ್ಚು ಸಮಯವನ್ನು ಕಳೆಯಿರಿ. ಹೀಗಾಗಿ ದಂಪತಿಗಳಿಬ್ಬರೂ ಒಬ್ಬರನ್ನೊಬ್ಬರು ಅರಿತು ಕೊಂಡು ಡೈವೋರ್ಸ್ ನಂತಹ ಕಠಿಣ ನಿರ್ಧಾರದಿಂದ ಹೊರ ಸರಿಯಲು ಸಾಧ್ಯವಾಗುತ್ತದೆ.

* ಲೈಂಗಿಕ ಸಂಬಂಧ ಉತ್ತಮವಾಗಿರಲಿ : ಸಂಸಾರದಲ್ಲಿ ಹೊಂದಾಣಿಕೆಯೂ ಇರಬೇಕಾದರೆ ಲೈಂಗಿಕ ಜೀವನವು ಮುಖ್ಯವಾಗುತ್ತದೆ. ಒಂದು ವೇಳೆ ದಂಪತಿಗಳ ನಡುವೆ ಲೈಂಗಿಕ ಸಂಬಂಧ ಚೆನ್ನಾಗಿಲ್ಲ ಎನ್ನುವ ಕಾರಣಕ್ಕೆ ದೂರವಾಗಲು ಹೊರಟಿದ್ದರೆ ಸಂಸಾರವನ್ನು ಸರಿಪಡಿಸಿಕೊಳ್ಳುವುದು ಕಷ್ಟವೇನಲ್ಲ. ಹೀಗಾಗಿ ಸತಿ ಪತಿಗಳಿಬ್ಬರೂ ಆದಷ್ಟು ರೊಮ್ಯಾಂಟಿಕ್‌ ಆಗಿದ್ದರೆ ದೂರವಾಗುವುದನ್ನು ತಪ್ಪಿಸಬಹುದು.

* ತಜ್ಞರೊಂದಿಗೆ ಆಪ್ತ ಸಮಾಲೋಚನೆ ಮಾಡಿ : ಕೆಲವೊಮ್ಮೆ ಹೊಂದಾಣಿಕೆ ಸಾಧ್ಯವಿಲ್ಲ ಎನ್ನುವ ಮಟ್ಟಿಗೆ ದಂಪತಿಗಳಿಬ್ಬರಿಗೂ ಅನಿಸಿರಬಹುದು. ಹೀಗಾದಾಗ ಸತಿ ಪತಿಗಳಿಬ್ಬರೂ ತಜ್ಞರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸಬೇಕು.

* ಅನಗತ್ಯವಾಗಿ ಜಗಳವಾಗುವುದನ್ನು ತಪ್ಪಿಸಿ : ಗಂಡ ಹೆಂಡಿರ ನಡುವೆ ಹೊಂದಾಣಿಕೆಯೂ ಇಲ್ಲದಿದ್ದಾಗ ಜಗಳ, ಮನಸ್ತಾಪಗಳು ಆಗುತ್ತದೆ. ಕೆಲವೊಮ್ಮೆ ಜಗಳದಿಂದ ಮನಸ್ಸುಗಳು ಒಡೆದು ಹೋಗಬಹುದು. ಜೊತೆಗೆ ಬಾಳಬೇಕು ಎನ್ನುವ ಒಬ್ಬರ ಮನಸ್ಸಿನಲ್ಲಿದ್ದರೆ ಜಗಳವಾಗುವ ಸನ್ನಿವೇಶವನ್ನು ತಪ್ಪಿಸುವುದು ಒಳ್ಳೆಯದು. ಪದೇ ಪದೇ ಮನಸ್ಸುಗಳು ಒಡೆದಂತೆ ನೋಡಿಕೊಳ್ಳುವ ಜವಾಬ್ದಾರಿ ಇಬ್ಬರಿಗೂ ಇದೆ ಎನ್ನುವುದನ್ನು ಮರೆಯದಿರಿ.

ಇದನ್ನೂ ಓದಿ: ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆಹಾರ ಕ್ರಮ ಹೇಗಿರಬೇಕು? ಇಲ್ಲಿದೆ ಸಿಂಪಲ್ ಟಿಪ್ಸ್

* ಇಬ್ಬರಿಗೂ ಒಪ್ಪಿಗೆ ಇದೆಯೇ ತಿಳಿದುಕೊಳ್ಳಿ : ದೂರವಾಗುವ ನಿರ್ಧಾರಕ್ಕೆ ಬರುವ ಮುನ್ನ ಇಬ್ಬರೂ ಜೊತೆಯಾಗಿ ಕುಳಿತು ಚರ್ಚಿಸಿ. ಮತ್ತೆ ದಾಂಪತ್ಯ ಜೀವನವನ್ನು ಮುಂದುವರೆಸುವ ಆಯ್ಕೆಯೂ ನಿಮ್ಮ ಕೈಯಲ್ಲೇ ಇದೆ. ಆದರೆ ದಂಪತಿಗಳ ಕೊನೆಯ ಆಯ್ಕೆಯೇ ಡೈವೋರ್ಸ್ ಎನ್ನುವುದಾದರೆ ಮತ್ತೆ ಜೊತೆಗೆ ಬದುಕಲು ಸಾಧ್ಯವಿಲ್ಲ. ದೂರವಾಗುವ ಬಗ್ಗೆ ಇಬ್ಬರ ಅಭಿಪ್ರಾಯವೇನು ಎಂದು ತಿಳಿಯುವುದು ಮುಖ್ಯವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ