AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ

ಪೇರಳೆ ಎಲೆಗಳು ಹುಡುಗಿಯರ ಅಂದಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ
Acne on face
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Jul 05, 2024 | 4:51 PM

Share

ಪೇರಳೆ ಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ಇದನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಕ್ಯಾನ್ಸರ್ ಕೋಶಗಳನ್ನು ಕಡಿಮೆ ಮಾಡುತ್ತದೆ. ಪೇರಳೆಯಲ್ಲಿರುವ ಜೀವಸತ್ವಗಳು ಮತ್ತು ಪೋಷಕಾಂಶಗಳು ದೇಹವನ್ನು ಹೆಚ್ಚು ಶಕ್ತಿಯುತವಾಗಿಸುತ್ತದೆ. ಆದರೆ ಪೇರಳೆ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಸಹ ಅನೇಕ ರೀತಿಯ ಪ್ರಯೋಜನಗಳನ್ನು ಹೊಂದಿವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

ಮೊಡವೆಗಳನ್ನು ಕಡಿಮೆ ಮಾಡುತ್ತದೆ:

ಪೇರಳೆ ಎಲೆಗಳು ಹುಡುಗಿಯರ ಅಂದ ಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ. ಮಾಲಿನ್ಯ, ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ, ಮುಖದ ಮೇಲೆ ಗೆರೆಗಳು ಮತ್ತು ಕಪ್ಪು ಕಲೆಗಳು ಕಂಡು ಬರುವುದು ಸಾಮಾನ್ಯ. ಆದರೆ ಪೇರಳೆ ಎಲೆಗಳು ಇವುಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುತ್ತದೆ. ಈ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಫೇಸ್ ಪ್ಯಾಕ್ ಹೇಗೆ ಮಾಡುವುದು?

  • ಕೆಲವು ಪೇರಳೆ ಎಲೆಗಳನ್ನು ಜಜ್ಜಿ ಅದರ ರಸವನ್ನು ತೆಗೆಯಿರಿ. ಬಳಿಕ ಉಳಿದಿರುವ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಸರಿಯಾಗಿ ಮಸಾಜ್ ಮಾಡಿ. ಇದನ್ನು ಮಾಡುವುದರಿಂದ ಮೊಡವೆ ಕಡಿಮೆಯಾಗುತ್ತದೆ. ಜೊತೆಗೆ ಮುಖ ಕಪ್ಪಗಾಗುವುದನ್ನು ತಡೆಯುತ್ತದೆ.
  • ಕೆಲವು ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ. ವಾರಕ್ಕೆ ಮೂರರಿಂದ ನಾಲ್ಕು ಬಾರಿ ಹೀಗೆ ಮಾಡಿದರೆ ಚರ್ಮವು ಕಾಂತಿಯುತವಾಗುತ್ತದೆ.

ಸೂಚನೆ: ಈ ಮಾಹಿತಿಯನ್ನು ಅನುಸರಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಿ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ