AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ

ಪೇರಳೆ ಎಲೆಗಳು ಹುಡುಗಿಯರ ಅಂದಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

Skin Care: ಈ ಎಲೆಗಳನ್ನು ಹೀಗೆ ಬಳಸಿದರೆ ಮುಖದಲ್ಲಿ ಮೊಡವೆಗಳು ಆಗುವುದಿಲ್ಲ
Acne on face
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 05, 2024 | 4:51 PM

Share

ಪೇರಳೆ ಹಣ್ಣು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ಇದನ್ನು ಸೇವನೆ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಕ್ಯಾನ್ಸರ್ ಕೋಶಗಳನ್ನು ಕಡಿಮೆ ಮಾಡುತ್ತದೆ. ಪೇರಳೆಯಲ್ಲಿರುವ ಜೀವಸತ್ವಗಳು ಮತ್ತು ಪೋಷಕಾಂಶಗಳು ದೇಹವನ್ನು ಹೆಚ್ಚು ಶಕ್ತಿಯುತವಾಗಿಸುತ್ತದೆ. ಆದರೆ ಪೇರಳೆ ಹಣ್ಣು ಮಾತ್ರವಲ್ಲದೆ ಇದರ ಎಲೆಗಳು ಸಹ ಅನೇಕ ರೀತಿಯ ಪ್ರಯೋಜನಗಳನ್ನು ಹೊಂದಿವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರ ಉಪಯೋಗವೇನು? ಇಲ್ಲಿದೆ ಮಾಹಿತಿ.

ಮೊಡವೆಗಳನ್ನು ಕಡಿಮೆ ಮಾಡುತ್ತದೆ:

ಪೇರಳೆ ಎಲೆಗಳು ಹುಡುಗಿಯರ ಅಂದ ಹೆಚ್ಚಿಸಲು ತುಂಬಾ ಉಪಯುಕ್ತ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಮಾಲಿನ್ಯದಿಂದ ಉಂಟಾಗಿರುವ ಮುಖದ ಮೇಲಿನ ಕಲೆಗಳು ಮತ್ತು ಮೊಡವೆಗಳು ಸಂಪೂರ್ಣವಾಗಿ ಹೋಗುತ್ತದೆ ಜೊತೆಗೆ ಮುಖದ ಅಂದ ಹೆಚ್ಚಾಗುತ್ತದೆ. ಮಾಲಿನ್ಯ, ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ, ಮುಖದ ಮೇಲೆ ಗೆರೆಗಳು ಮತ್ತು ಕಪ್ಪು ಕಲೆಗಳು ಕಂಡು ಬರುವುದು ಸಾಮಾನ್ಯ. ಆದರೆ ಪೇರಳೆ ಎಲೆಗಳು ಇವುಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುತ್ತದೆ. ಈ ಎಲೆಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಫೇಸ್ ಪ್ಯಾಕ್ ಹೇಗೆ ಮಾಡುವುದು?

  • ಕೆಲವು ಪೇರಳೆ ಎಲೆಗಳನ್ನು ಜಜ್ಜಿ ಅದರ ರಸವನ್ನು ತೆಗೆಯಿರಿ. ಬಳಿಕ ಉಳಿದಿರುವ ಮಿಶ್ರಣವನ್ನು ಮುಖಕ್ಕೆ ಹಚ್ಚಿ ಸರಿಯಾಗಿ ಮಸಾಜ್ ಮಾಡಿ. ಇದನ್ನು ಮಾಡುವುದರಿಂದ ಮೊಡವೆ ಕಡಿಮೆಯಾಗುತ್ತದೆ. ಜೊತೆಗೆ ಮುಖ ಕಪ್ಪಗಾಗುವುದನ್ನು ತಡೆಯುತ್ತದೆ.
  • ಕೆಲವು ಪೇರಳೆ ಎಲೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಆ ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ. ವಾರಕ್ಕೆ ಮೂರರಿಂದ ನಾಲ್ಕು ಬಾರಿ ಹೀಗೆ ಮಾಡಿದರೆ ಚರ್ಮವು ಕಾಂತಿಯುತವಾಗುತ್ತದೆ.

ಸೂಚನೆ: ಈ ಮಾಹಿತಿಯನ್ನು ಅನುಸರಿಸುವ ಮೊದಲು ವೈದ್ಯರ ಸಲಹೆ ಪಡೆದುಕೊಳ್ಳಿ.

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್