Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸೌಂದರ್ಯ ಹೆಚ್ಚಾಗಲು ಕಾಫಿಯೂ ಮ್ಯಾಜಿಕ್ ಮಾಡಬಲ್ಲದು!

ಕಾಫಿ ನಿಮ್ಮ ಚರ್ಮದ ಡೆಡ್ ಸ್ಕಿನ್​ಗಳನ್ನು ತೆಗೆದುಹಾಕುತ್ತದೆ. ತೆಂಗಿನೆಣ್ಣೆ ಅಥವಾ ಮೊಸರಿನೊಂದಿಗೆ ಕಾಫಿ ಪುಡಿಯನ್ನು ಬೆರೆಸಿದಾಗ ಅದು ಸತ್ತ ಚರ್ಮದ ಕೋಶಗಳನ್ನು ಸೂಕ್ಷ್ಮವಾಗಿ ತೆಗೆದುಹಾಕುವ ಮೂಲಕ ನಿಮ್ಮ ಚರ್ಮವನ್ನು ಎಫ್ಫೋಲಿಯೇಟ್ ಮಾಡಲು ಸಹಾಯ ಮಾಡುತ್ತದೆ.

ನಿಮ್ಮ ಸೌಂದರ್ಯ ಹೆಚ್ಚಾಗಲು ಕಾಫಿಯೂ ಮ್ಯಾಜಿಕ್ ಮಾಡಬಲ್ಲದು!
ಕಾಫಿImage Credit source: iStock
Follow us
ಸುಷ್ಮಾ ಚಕ್ರೆ
|

Updated on:Oct 22, 2023 | 3:53 PM

ಕಾಫಿಪ್ರಿಯರು ಒಂದು ದಿನವೂ ಕಾಫಿ ಕುಡಿಯದೆ ಇರಲು ಸಾಧ್ಯವೇ ಇಲ್ಲ. ಕಾಫಿ ನಮ್ಮ ದೇಹಕ್ಕೆ ಚೈತನ್ಯ ನೀಡುತ್ತದೆ. ಹಾಗೆಯೇ, ನಮ್ಮ ಚರ್ಮಕ್ಕೂ ಚೈತನ್ಯ ನೀಡುತ್ತದೆ ಎಂಬ ವಿಷಯ ನಿಮಗೆ ಗೊತ್ತೇ? ಕಾಫಿಯಲ್ಲಿ ಅಧಿಕವಾಗಿರುವ ಆರೊಮ್ಯಾಟಿಕ್ ಸುವಾಸನೆಗಳು ಮತ್ತು ಫೀನಾಲ್‌ಗಳನ್ನು ಒಳಗೊಂಡಂತೆ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮಕ್ಕೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದ್ದರಿಂದ ಕಾಫಿಯನ್ನು ಕುಡಿಯವುದರ ಜೊತೆಗೆ ಕಾಫಿ ಪುಡಿಯನ್ನು ನಿಮ್ಮ ತ್ವಚೆಗೂ ಹಚ್ಚಿಕೊಳ್ಳುವುದರಿಂದ ಸಾಕಷ್ಟು ಪ್ರಯೋಜನಗಳಿವೆ.

ಕಾಫಿ ಪುಡಿಯಿಂದ ಮಾಡಿದ ಫೇಸ್​ಪ್ಯಾಕ್, ಸ್ಕ್ರಬ್‌ಗಳು ಅಥವಾ ಪೇಸ್ಟ್‌ಗಳನ್ನು ಬಳಸಿ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು. ಕಾಫಿಯು ನಮ್ಮ ಚರ್ಮವನ್ನು ಪುನರುಜ್ಜೀವನಗೊಳಿಸುವ ಗುಣ ಹೊಂದಿದೆ. ಕೆಫೀನ್​ ನಮ್ಮ ಚರ್ಮಕ್ಕೆ ಹೊಸ ಜೀವವನ್ನು ನೀಡುತ್ತದೆ. ಕಾಫಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚರ್ಮ, ಮುಖದ ಸೌಂದರ್ಯಕ್ಕೆ ಮೊಸರಿನಿಂದ ಆಗುವ 10 ಪ್ರಯೋಜನಗಳಿವು

ಕಾಫಿ ನಿಮ್ಮ ಚರ್ಮದ ಡೆಡ್ ಸ್ಕಿನ್​ಗಳನ್ನು ತೆಗೆದುಹಾಕುತ್ತದೆ. ಕಾಫಿ ಬೀಜಗಳು ನೈಸರ್ಗಿಕ ಎಕ್ಸ್‌ಫೋಲಿಯೇಟಿಂಗ್ ಏಜೆಂಟ್‌ಗಳಾಗಿವೆ. ತೆಂಗಿನೆಣ್ಣೆ ಅಥವಾ ಮೊಸರಿನೊಂದಿಗೆ ಕಾಫಿ ಪುಡಿಯನ್ನು ಬೆರೆಸಿದಾಗ ಅದು ಸತ್ತ ಚರ್ಮದ ಕೋಶಗಳನ್ನು ಸೂಕ್ಷ್ಮವಾಗಿ ತೆಗೆದುಹಾಕುವ ಮೂಲಕ ನಿಮ್ಮ ಚರ್ಮವನ್ನು ಎಫ್ಫೋಲಿಯೇಟ್ ಮಾಡಲು ಸಹಾಯ ಮಾಡುತ್ತದೆ. ಕಾಫಿಯ ಕೆಫೀನ್ ಅಂಶ ನಿಮ್ಮ ಬೆಳಗಿನ ಸಮಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಚರ್ಮವನ್ನು ತಾತ್ಕಾಲಿಕವಾಗಿ ಬಿಗಿಗೊಳಿಸುತ್ತದೆ. ಚರ್ಮದ ರಕ್ತದ ಹರಿವನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: Beauty Tips: ಮುಖದ ಮೊಡವೆಯ ಕಲೆ ಹೋಗಲಾಡಿಸಲು ಇಲ್ಲಿದೆ ಸುಲಭ ಉಪಾಯ

ಕಾಫಿಯ ನೈಸರ್ಗಿಕ ಉರಿಯೂತದ ಗುಣಲಕ್ಷಣಗಳು ಕಣ್ಣಿನ ಕೆಳಗಿರುವ ಊತವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ. ಒಂದು ಕಪ್ ಕಾಫಿಯನ್ನು ಕುದಿಸಿ, ಅದನ್ನು ತಣ್ಣಗಾಗಲು ಬಿಡಿ, ನಂತರ ಕಾಟನ್ ಪ್ಯಾಡ್‌ಗಳನ್ನು ಕಾಫಿಪುಡಿಯನ್ನು ಕುದಿಸಿದ ನೀರಿನಲ್ಲಿ ಮುಳುಗಿಸಿ. ಅವುಗಳನ್ನು ನಿಮ್ಮ ಮುಚ್ಚಿದ ಕಣ್ಣುಗಳ ಮೇಲೆ ಇರಿಸಿ. ಇದರಲ್ಲಿರುವ ಕೆಫೀನ್ ರಕ್ತನಾಳಗಳನ್ನು ಸಂಕುಚಿತಗೊಳಿಸಲು ಸಹಾಯ ಮಾಡುತ್ತದೆ, ಕಣ್ಣಿನ ಕೆಳಗಿನ ಊತವನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Sun, 22 October 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ