Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ನೈಸರ್ಗಿಕವಾಗಿ ಹೊಳೆಯುವ ತ್ವಚೆ ಪಡೆಯುವುದು ಹೇಗೆ?

ಚಳಿಗಾಲದ ತೇವಾಂಶದ ಹವಾಮಾನದಿಂದಾಗಿ ತ್ವಚೆ ಶುಷ್ಕವಾಗುತ್ತದೆ. ಒಣಗಿದ ಚರ್ಮದಿಂದ ಮುಖದ ಕಾಂತಿ ಕುಂದುತ್ತದೆ. ಹೀಗಿದ್ದಾಗ ಕೆಲವು ಆಹಾರಗಳನ್ನು ಸೇವಿಸುವುದರಿಂದ ತ್ವಚೆಗೆ ನೈಸರ್ಗಿಕ ಕಾಂತಿಯನ್ನು ವಾಪಾಸ್ ತರಬಹುದು. ಅಂತಹ ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ಚಳಿಗಾಲದಲ್ಲಿ ನೈಸರ್ಗಿಕವಾಗಿ ಹೊಳೆಯುವ ತ್ವಚೆ ಪಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ Image Credit source: iStock
Follow us
ಸುಷ್ಮಾ ಚಕ್ರೆ
|

Updated on: Jan 23, 2024 | 7:04 PM

ಕೆಲವು ಸೂಪರ್‌ಫುಡ್‌ಗಳು ನಿಸರ್ಗದ ಪೌಷ್ಟಿಕಾಂಶದ ಪವರ್‌ಹೌಸ್‌ಗಳಾಗಿವೆ. ಈ ಸೂಪರ್‌ಫುಡ್‌ಗಳನ್ನು ನಿಮ್ಮ ಚಳಿಗಾಲದ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಆರೋಗ್ಯಕರ ಮತ್ತು ಕಾಂತಿಯುತ ಚರ್ಮವನ್ನು ಪಡೆಯಬಹುದಾಗಿದೆ. ಶುಷ್ಕತೆಯನ್ನು ಎದುರಿಸುವುದರಿಂದ ಹಿಡಿದು ಸ್ಥಿತಿಸ್ಥಾಪಕತ್ವವನ್ನು ಉತ್ತೇಜಿಸುವವರೆಗೆ ಚರ್ಮದ ಹೊಳಪನ್ನು ವಾಪಾಸ್ ತರಲು ಈ ಸೂಪರ್‌ಫುಡ್‌ಗಳು ನಿಮಗೆ ಸಹಾಯ ಮಾಡಬಹುದು.

ಈ ಪೌಷ್ಟಿಕಾಂಶಭರಿತ ಆಹಾರಗಳು ನಮ್ಮ ತ್ವಚೆಗೆ ಅಗತ್ಯವಾದ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಮತ್ತು ಚರ್ಮದ ಆರೋಗ್ಯವನ್ನು ಒಳಗೊಂಡಂತೆ ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸುವ ವಿಟಮಿನ್‌ಗಳಲ್ಲಿ ಸಮೃದ್ಧವಾಗಿವೆ. ಚಳಿಗಾಲದಲ್ಲಿ, ಚರ್ಮವು ಕಠಿಣ ಹವಾಮಾನ ಪರಿಸ್ಥಿತಿಗಳು ಮತ್ತು ಶುಷ್ಕ ಗಾಳಿಗೆ ಒಡ್ಡಿಕೊಂಡಾಗ ಈ ಪೋಷಕಾಂಶ-ದಟ್ಟವಾದ ಆಹಾರಗಳು ಚರ್ಮದ ಜಲಸಂಚಯನವನ್ನು ಕಾಪಾಡಿಕೊಳ್ಳಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಕಾಲಜನ್ ಉತ್ಪಾದನೆಯನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ.

ಆವಕಾಡೊ:

ಆರೋಗ್ಯಕರ ಕೊಬ್ಬುಗಳು, ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಆವಕಾಡೊ ಚಳಿಗಾಲದ ತ್ವಚೆಗೆ ಅತ್ಯುತ್ತಮವಾಗಿದೆ. ಈ ಹಣ್ಣು ಚರ್ಮವನ್ನು ಪೋಷಿಸುತ್ತದೆ ಮತ್ತು ಹೈಡ್ರೇಟ್ ಮಾಡುತ್ತದೆ. ಆವಕಾಡೊಗಳಲ್ಲಿ ಇರುವ ಒಮೆಗಾ-9 ಕೊಬ್ಬಿನಾಮ್ಲಗಳು ಮೃದುವಾದ ಮತ್ತು ತೇವಭರಿತ ಮೈಬಣ್ಣವನ್ನು ನೀಡುತ್ತವೆ. ಇದು ನಿಮ್ಮ ಚಳಿಗಾಲದ ಆಹಾರಕ್ಕೆ ಸೂಕ್ತವಾದ ಸೇರ್ಪಡೆಯಾಗಿದೆ.

ಇದನ್ನೂ ಓದಿ: ದಿನವೂ ಸ್ನಾನ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಗೊತ್ತಾ?

ಗೆಣಸು:

ಬೀಟಾ ಕ್ಯಾರೋಟಿನ್‌ ಅನ್ನು ಒಳಗೊಂಡಿರುವ ಗೆಣಸು ನಿಮ್ಮ ಚರ್ಮಕ್ಕೆ ಪೌಷ್ಟಿಕಾಂಶದ ಶಕ್ತಿಯಾಗಿದೆ. ಈ ಉತ್ಕರ್ಷಣ ನಿರೋಧಕವು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ಚಳಿಗಾಲದ ತೇವಾಂಶದಿಂದ ಚರ್ಮವನ್ನು ರಕ್ಷಿಸುತ್ತದೆ. ನಿಮ್ಮ ಊಟದಲ್ಲಿ ಗೆಣಸನ್ನು ಬಳಸುವುದರಿಂದ ಸ್ವತಂತ್ರ ರಾಡಿಕಲ್​ಗಳ ಪರಿಣಾಮಗಳನ್ನು ಎದುರಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಚರ್ಮವು ಆರೋಗ್ಯಕರ ಮತ್ತು ಕಾಂತಿಯುತ ನೋಟವನ್ನು ನೀಡುತ್ತದೆ.

ಕೊಬ್ಬಿನ ಮೀನು:

ಸಾಲ್ಮನ್, ಮ್ಯಾಕೆರೆಲ್ ಮತ್ತು ಸಾರ್ಡೀನ್‌ಗಳಂತಹ ತಣ್ಣೀರಿನ ಕೊಬ್ಬಿನ ಮೀನುಗಳು ಒಮೆಗಾ-3 ಕೊಬ್ಬಿನಾಮ್ಲಗಳಿಂದ ತುಂಬಿರುತ್ತವೆ. ಈ ಅಗತ್ಯ ಕೊಬ್ಬುಗಳು ತೇವಾಂಶವನ್ನು ಉಳಿಸಿಕೊಳ್ಳುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.

ಇದನ್ನೂ ಓದಿ: ನಾವೇಕೆ ಆಗಾಗ ದಂತ ತಪಾಸಣೆ ಮಾಡಿಸಿಕೊಳ್ಳಬೇಕು?

ಬೆರಿ ಹಣ್ಣುಗಳು:

ಈ ಬೆರಿಗಳು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಇದು ಸ್ವತಂತ್ರ ರಾಡಿಕಲ್​ಗಳನ್ನು ಎದುರಿಸುತ್ತದೆ. ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಪಾಲಕ್ ಸೊಪ್ಪು:

ಹೆಚ್ಚಿನ ವಿಟಮಿನ್ ಎ ಮತ್ತು ಸಿ, ಜೊತೆಗೆ ಕಬ್ಬಿಣದ ಅಂಶವನ್ನು ಹೊಂದಿರುವ ಪಾಲಕ್ ಕಾಲಜನ್ ಉತ್ಪಾದನೆಯನ್ನು ಬೆಂಬಲಿಸುತ್ತದೆ. ಇದು ಚರ್ಮದ ದುರಸ್ತಿಗೆ ಸಹಾಯ ಮಾಡುತ್ತದೆ, ಇದು ಚಳಿಗಾಲದ ತ್ವಚೆಗೆ ಅತ್ಯುತ್ತಮ ಆಯ್ಕೆಯಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್