Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಿನ ಸುತ್ತಲಿನ ಕಪ್ಪು ಕಲೆಗೆ ತಜ್ಞರು ನೀಡಿರುವ ಮನೆಮದ್ದು ಇಲ್ಲಿದೆ

ಆದರೆ ಇನ್ನೂ ಮುಂದೆ ಇಂತಹ ಸಮಸ್ಯೆಗಳಿಗೆ ಚಿಂತಿಸಬೇಕಿಲ್ಲ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಕತ್ತಿನ ಭಾಗ ಕಪ್ಪು ಕಲೆಯನ್ನು ನಿವಾರಿಸಬಹುದಾಗಿದೆ ಎಂದು ಡಾ. ಶರದ್​​​ ಕುಲಕರ್ಣಿ ಸಲಹೆ ನೀಡುತ್ತಾರೆ.

ಕತ್ತಿನ ಸುತ್ತಲಿನ ಕಪ್ಪು ಕಲೆಗೆ ತಜ್ಞರು ನೀಡಿರುವ ಮನೆಮದ್ದು ಇಲ್ಲಿದೆ
ಕತ್ತಿನ ಸುತ್ತಲಿನ ಕಪ್ಪು ಕಲೆImage Credit source: Fabbon
Follow us
ಅಕ್ಷತಾ ವರ್ಕಾಡಿ
|

Updated on:Mar 17, 2023 | 3:11 PM

ಮೈ ಎಲ್ಲ ಬೆಳಗ್ಗಿದ್ದರೂ, ಕುತ್ತಿಗೆಯ ಸುತ್ತ ಕಪ್ಪಾಗಿರುವುದು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದು ಕೇವಲ ಸಮಸ್ಯೆಯಾಗಿರದೇ ನಿಮ್ಮನ್ನು ಮುಜುಗರಕ್ಕೀಡು ಮಾಡುತ್ತದೆ. ಈ ಕಪ್ಪು ಕಲೆಗೆ ಸರಿಯಾದ ಚಿಕಿತ್ಸೆ ಇಲ್ಲದಿದ್ದಾಗ ಸಾಕಷ್ಟು ಜನರು ಕುತ್ತಿಗೆ ಸಂಪೂರ್ಣವಾಗಿ ಮುಚ್ಚಿಕೊಂಡಿರುವ ಬಟ್ಟೆಯನ್ನು ಧರಿಸುತ್ತಾರೆ. ಆದರೆ ಇನ್ನೂ ಮುಂದೆ ಇಂತಹ ಸಮಸ್ಯೆಗಳಿಗೆ ಚಿಂತಿಸಬೇಕಿಲ್ಲ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಕತ್ತಿನ ಭಾಗ ಕಪ್ಪು ಕಲೆಯನ್ನು ನಿವಾರಿಸಬಹುದಾಗಿದೆ ಎಂದು ಡಾ. ಶರದ್​​​ ಕುಲಕರ್ಣಿ ಸಲಹೆ ನೀಡುತ್ತಾರೆ.

ಡಾ. ಶರದ್​​​ ಕುಲಕರ್ಣಿ ನೀಡಿರುವ ಮೂರು ಮನೆಮದ್ದುಗಳ ಕುರಿತು ಮಾಹಿತಿ ಇಲ್ಲಿದೆ.

1 ಚಮಚ ಕಡ್ಲೇ ಹಿಟ್ಟು, 1/4 ಚಮಚ ಅರಶಿನ ಪುಡಿ, 3 ಚಮಚ ನಿಂಬೆ ಹಣ್ಣಿನ ರಸ, ಸ್ವಲ್ಪ ರೋಸ್​ ವಾಟರ್​​. ಇವಿಷ್ಟು ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಪೇಸ್ಟ್​​​​ ತಯಾರಿಸಿ. ಈ ಪೇಸ್ಟ್​​ನ್ನು ಕುತ್ತಿಯ ಸುತ್ತ ಹಚ್ಚಿ. ಇದನ್ನು 45 ನಿಮಿಷಗಳ ಕಾಲ ಹಾಗೆಯೇ ಬಿಡಿ. ವಾರದಲ್ಲಿ ಎರಡು ಬಾರೀ ಈ ರೀತಿ ಮಾಡುವುದರಿಂದ ನಿಮ್ಮ ಕುತ್ತಿಗೆಯ ಸುತ್ತಲಿನ ಕಪ್ಪು ಕಲೆಯೂ ನಿಧಾನವಾಗಿ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಡಾ. ಶರದ್ ಹೇಳುತ್ತಾರೆ.

ಇನ್ನೊಂದು ಮನೆಮದ್ದು ಅಲೂಗಡ್ಡೆ ಸಿಪ್ಪೆಯ ಒಳಭಾಗವನ್ನು 5ರಿಂದ 8 ನಿಮಿಷದಷ್ಟು ನಿಮ್ಮ ಕುತ್ತಿಯ ಸುತ್ತಲೂ ರಬ್​​ ಮಾಡಿ. ಇದು ಕೂಡ ಕಪ್ಪು ಕಲೆಯ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯಕವಾಗಿದೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಚರ್ಮದ ಆರೈಕೆಗಾಗಿ ರೋಸ್ ವಾಟರ್ ಬಳಸಿ

ಡಾ. ಶರದ್ ಹಂಚಿಕೊಂಡಿರುವ ಮೂರನೇ ಮನೆಮದ್ದು, ಕಿತ್ತಳೆಯ ಹಣ್ಣಿನ ಸಿಪ್ಪೆಯನ್ನು ಒಣಗಿಸಿ ಪುಡಿ ಮಾಡಿ ಅಥವಾ ನೆಲ್ಲಿಕಾಯಿ ಪುಡಿ ಬಳಸಿ ಇದಕ್ಕೆ ಅರ್ಧ ಚಮಚ ಅರಶಿನ ಮತ್ತು ಒಂದು ಚಮಚ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ. ಇದನ್ನು ನಿಮ್ಮ ಕುತ್ತಿಯ ಸುತ್ತಲೂ ಹಚ್ಚಿ, 45 ನಿಮಿಷಗಳ ಕಾಲ ಹಾಗೆಯೇ ಬಿಡಿ. ಇದು ಕೂಡ ಕುತ್ತಿಗೆಯ ಸುತ್ತಲಿನ ಕಪ್ಪು ಕಲೆಯನ್ನು ಕಡಿಮೆ ಮಾಡಲು ಒಂದು ಒಳ್ಳೆಯ ಮನೆಮದ್ದು ಎಂದು ಹೇಳುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:11 pm, Fri, 17 March 23

ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ