AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care Tips : ಮೊಡವೆ ಸಮಸ್ಯೆಗೆ ಈ ಹಣ್ಣಿನ ಬೀಜದಲ್ಲಿದೆ ಸುಲಭ ಪರಿಹಾರ

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಲ್ಲರಿಗೂ ತಿಳಿದಿದೆ. ಹೀಗಾಗಿ ಈ ಹಣ್ಣನ್ನು ತಿಂದು ಅದರ ಬೀಜವನ್ನು ಎಸೆಯುತ್ತಾರೆ. ಆದರೆ ಈ ಹಣ್ಣಿನಷ್ಟೇ ಈ ಬೀಜವು ಆರೋಗ್ಯಕ್ಕೆ ಒಳ್ಳೆಯದು. ಈ ಪಪ್ಪಾಯಿ ಬೀಜಗಳು ಪಪೈನ್ ಎಂಬ ಕಿಣ್ವವನ್ನು ಹೊಂದಿದ್ದು, ಸತ್ತ ಚರ್ಮದ ಕೋಶಗಳನ್ನು ತೆಗೆದುಹಾಕುತ್ತದೆ. ಅದಲ್ಲದೇ, ಸತ್ತ ಚರ್ಮವನ್ನು ಶುದ್ಧೀಕರಿಸಲು ಮತ್ತು ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಬೀಜಗಳು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ಎ ಹೊಂದಿದ್ದು, ಇದು ಚರ್ಮವನ್ನು ಹೊಳೆಪು ಹೆಚ್ಚಿಸಿ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹಾಗಾದ್ರೆ ತ್ವಚೆಯ ಆರೈಕೆಯಲ್ಲಿ ಪಪ್ಪಾಯಿ ಹಣ್ಣಿನ ಬೀಜವನ್ನು ಹೇಗೆ ಬಳಸಬಹುದು ಎನ್ನುವ ಮಾಹಿತಿ ಇಲ್ಲಿದೆ.

Skin Care Tips : ಮೊಡವೆ ಸಮಸ್ಯೆಗೆ ಈ ಹಣ್ಣಿನ ಬೀಜದಲ್ಲಿದೆ ಸುಲಭ ಪರಿಹಾರ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 25, 2025 | 9:58 AM

Share

ಮುಖದ ಚರ್ಮವು ಹೆಚ್ಚು ಎಣ್ಣೆಯುಕ್ತವಾಗಿದ್ದಾಗ ತ್ವಚೆಯಲ್ಲಿ ಮೊಡವೆಗಳು ಏಳುತ್ತವೆ. ಬೆವರು, ಧೂಳು ಮುಖಕ್ಕೆ ಅಂಟಿಕೊಂಡಾಗ ಚರ್ಮದ ಸಣ್ಣ ರಂಧ್ರದೊಳಗೆ ಸಿಲುಕಿ ಗುಳ್ಳೆಗಗಳು ಏಳುವ ಸಾಧ್ಯತೆಯೇ ಹೆಚ್ಚು. ಹೀಗಾದಾಗ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಈ ಹಣ್ಣಿನ ಬೀಜವು ಮೊಡವೆ ಸಮಸ್ಯೆಯನ್ನು ತೊಡೆದು ಹಾಕಲು ಸಹಕಾರಿಯಾಗಿದೆ. ಹಾಗಾದ್ರೆ ಈ ಪಪ್ಪಾಯಿ ಬೀಜವನ್ನು ಈ ರೀತಿ ಬಳಸಿದ್ರೆ ತ್ವಚೆಯ ಎಲ್ಲಾ ಸಮಸ್ಯೆಯೂ ನಿವಾರಣೆಯಾಗುತ್ತದೆ.

  • ಪಪ್ಪಾಯಿ ಬೀಜದ ಪೇಸ್ಟ್ ತಯಾರಿಸಿ ತ್ವಚೆಗೆ ಅನ್ವಯಿಸಿ : ಪಪ್ಪಾಯಿ ಬೀಜಗಳು ಮೊಡವೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ಹೀಗಾಗಿ ಪಪ್ಪಾಯಿ ಬೀಜಗಳನ್ನು ಪುಡಿಮಾಡಿ ಪೇಸ್ಟ್ ತಯಾರಿಸಿ ಮೊಡವೆಯಿದ್ದಲ್ಲಿಗೆ ಅನ್ವಯಿಸಿ. 15-20 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ..ಹೀಗೆ ಮಾಡುವುದರಿಂದ ಈ ಬೀಜಗಳಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣವು ಉರಿಯೂತ ಮತ್ತು ಸೋಂಕನ್ನು ಕಡಿಮೆ ಮಾಡಿ ಮೊಡವೆ ಸಮಸ್ಯೆಗೆ ಮುಕ್ತಿ ನೀಡುತ್ತದೆ.
  • ಪಪ್ಪಾಯಿ ಬೀಜ ಮತ್ತು ಜೇನುತುಪ್ಪದ ಫೇಸ್ ಪ್ಯಾಕ್ : ಪಪ್ಪಾಯಿ ಬೀಜಗಳ ಪೇಸ್ಟ್ ತಯಾರಿಸಿ ಅದಕ್ಕೆ ಜೇನುತುಪ್ಪ ಸೇರಿಸಿಕೊಳ್ಳಿ. ಈ ಮಿಶ್ರಣದಿಂದ ನಿಮ್ಮ ಮುಖವನ್ನು ನಿಧಾನಕ್ಕೆ ಮಸಾಜ್ ಮಾಡಿಕೊಳ್ಳಿ. ಈ ಜೇನುತುಪ್ಪವು ಚರ್ಮವನ್ನು ತೇವಗೊಳಿಸುತ್ತದೆ ಹಾಗೂ ಪಪ್ಪಾಯಿ ಬೀಜಗಳು ಚರ್ಮವನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ. ಇಪ್ಪತ್ತು ನಿಮಿಷಗಳ ಬಳಿಕ ಮುಖವನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
  • ಪಪ್ಪಾಯಿ ಬೀಜದ ಸ್ಕ್ರಬ್ : ಪಪ್ಪಾಯಿ ಬೀಜಗಳನ್ನು ಪುಡಿಮಾಡಿ ಅದಕ್ಕೆ ಸ್ವಲ್ಪ ನೀರು ಅಥವಾ ಜೇನುತುಪ್ಪ ಸೇರಿಸಿ ಸ್ಕ್ರಬ್ ತಯಾರಿಸಿಕೊಳ್ಳಿ. ಇದರಿಂದ ಮುಖಕ್ಕೆ ನಿಧಾನವಾಗಿ ಮಸಾಜ್ ಮಾಡಿ. ಇದು ಮೊಡವೆಗಳನ್ನು ತೊಡೆದು ಹಾಕುತ್ತದೆ. ತ್ವಚೆಯನ್ನು ಯೌವ್ವನದಿಂದ ಇಡಲು ಸಹಾಯ ಮಾಡುವುದಲ್ಲದೆ, ಚರ್ಮವನ್ನು ಮೃದುವಾಗಿಸಿ ಹೊಳೆಯುವಂತೆ ಮಾಡುತ್ತದೆ.
  • ಪಪ್ಪಾಯಿ ಬೀಜಗಳು ಮತ್ತು ಹಾಲಿನ ಫೇಸ್ ಪ್ಯಾಕ್ : ಮೊದಲಿಗೆ ಪಪ್ಪಾಯಿ ಬೀಜಗಳ ಪೇಸ್ಟ್ ಮಾಡಿಟ್ಟುಕೊಳ್ಳಿ. ಇದಕ್ಕೆ ಸ್ವಲ್ಪ ಹಾಲು ಸೇರಿಸಿ, ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಈ ಪ್ಯಾಕ್ ಚರ್ಮಕ್ಕೆ ಆಳವಾದ ಪೋಷಣೆಯನ್ನು ಒದಗಿಸಿ, ತ್ವಚೆಯನ್ನು ಮೃದುವಾಗಿರುತ್ತದೆ. ವಯಸ್ಸಾಗುವಿಕೆಯನ್ನು ತಪ್ಪಿಸಿ ಮುಖದ ಕಾಂತಿ ಹೆಚ್ಚಿಸುತ್ತದೆ.

ಸೂಚನೆ : ಈ ಲೇಖನವು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ತಜ್ಞರನ್ನು ಅಥವಾ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ