AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ

ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಸಂಭವಿಸಲಿದೆ. ಹಾಗಾದ್ರೆ, ಕರ್ನಾಟಕದ ಬೇರೆ-ಬೇರೆ ಜಿ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಗೋಚರಿಸಲಿದೆ? ಎಷ್ಟೊತ್ತಿಗೆ ಪ್ರಾರಂಭವಾಗಲಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Solar Eclipse 2022 ಕರ್ನಾಟಕದ ಬೇರೆ-ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಇಲ್ಲಿದೆ
ಸೂರ್ಯ ಗ್ರಹಣ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 23, 2022 | 4:40 PM

Share

ಬೆಂಗಳೂರು: ಎಲ್ಲೆಡೆ ದೀಪಾವಳಿ (Deepavali) ಸಂಭ್ರಮ ಮನೆ ಮಾಡಿದೆ. ಇದರ ಮಧ್ಯೆ ದೀಪಾವಳಿ ಅಮಾವಾಸ್ಯೆಯ ದಿನ ಅಕ್ಟೋಬರ್ 25ರಂದೇ ಸೂರ್ಯ ಗ್ರಹಣ ಸಂಭವಿಸಲಿದೆ. ಮಂಗಳವಾರ ಸಂಜೆ ಭಾಗಶಃ ಸೂರ್ಯಗ್ರಹಣ (Solar Eclipse) ಗೋಚರವಾಗಲಿದೆ. 3 ವರ್ಷಗಳ ಬಳಿಕ ಗೋಚರವಾಗುವ ಈ ಪಾರ್ಶ್ವ ಸೂರ್ಯಗ್ರಹಣದ ಕೌತುಕವನ್ನ ಕಣ್ತುಂಬಿಕೊಳ್ಳಲು ಇಡೀ ದೇಶದ ಜನ ಕಾತುರದಿಂದ ಕಾಯುತ್ತಿದ್ದಾರೆ.

Solar Eclipse 2022: ಸೂರ್ಯ ಗ್ರಹಣದಂದು ಗರ್ಭಿಣಿಯರು ಏನು ಮಾಡಬೇಕು? ಏನು ಮಾಡಬಾರದು?

ಗ್ರಹಣದ ಗರಿಷ್ಠ ಗೋಚರತೆಯು ರಷ್ಯಾ ಮತ್ತು ಖಜಕಿಸ್ತಾನ್‌ನಲ್ಲಿ ಶೇ 80 ರಷ್ಟು ಇರುತ್ತದೆ. ಆದ್ದರಿಂದ, ಗ್ರಹಣವನ್ನು ವೀಕ್ಷಿಸಲು ಜನರಿಗೆ ನೆರವಾಗುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ವಿಶೇಷ ಸ್ಕ್ರೀನಿಂಗ್ ಮತ್ತು ಲೈವ್ ಸ್ಟ್ರೀಮಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ಸ್ಕೋಪ್ (ಔಟ್ರೀಚ್) ವಿಭಾಗದ ಮುಖ್ಯಸ್ಥ ನಿರುಜ್ ಮೋಹನ್ ರಾಮಾನುಜಮ್ ಹೇಳಿದ್ದಾರೆ. ಕೆಲವು ಖಗೋಳ ಭೌತಶಾಸ್ತ್ರಜ್ಞರ ಪ್ರಕಾರ, ಶೇ 55 ರಷ್ಟು ಗ್ರಹಣವು ಲಡಾಖ್‌ನಲ್ಲಿ ಸಂಜೆ 4.30 ರಿಂದ ಗೋಚರಿಸುತ್ತದೆ. ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಇನ್ನು ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಕಾಣುವ ಪಾರ್ಶ್ವ ಸೂರ್ಯ ಗ್ರಹಣದ ವಿವರ ಈ ಕೆಳಗಿನಂತಿದೆ.

ಸೂರ್ಯ ಗ್ರಹಣ ಸಮಯ..!

ಗ್ರಹಣ ಸ್ಪರ್ಶಕಾಲ – ಮಧ್ಯಾಹ್ನ 2:15 ಗ್ರಹಣ ಮಧ್ಯಕಾಲ – ಮಧ್ಯಾಹ್ನ 4:18 ಗ್ರಹಣ ಮೋಕ್ಷಕಾಲ – ಸಂಜೆ 6:30

* ಬೆಂಗಳೂರು- ಶೇ.10.09ರಷ್ಟು ಸೂರ್ಯ ಗ್ರಹಣ ಗೋಚರವಾಗಲಿದ್ದು, ಸಂಜೆ 5:12 ಗಂಟೆಗೆ ಗ್ರಹಣ ಪ್ರಾರಂಭವಾಗಲಿದೆ.

* ಮೈಸೂರು- 9.5%- ಸಂಜೆ 5:13 ಗಂಟೆಗೆ ಪ್ರಾರಂಭ

* ಧಾರವಾಡ- 16.09%- ಸಂಜೆ 5:01 ಗಂಟೆಗೆ ಪ್ರಾರಂಭ

* ರಾಯಚೂರು- 16.67%- ಸಂಜೆ 5:01 ಗಂಟೆಗೆ ಪ್ರಾರಂಭ

* ಬಳ್ಳಾರಿ- 14.64%- ಸಂಜೆ 5:04 ಗಂಟೆಗೆ ಪ್ರಾರಂಭ

* ಬಾಗಲಕೋಟೆ- 17.33%- ಸಂಜೆ 5:00 ಗಂಟೆಗೆ ಪ್ರಾರಂಭ

* ಮಂಗಳೂರು- 10.91%- ಸಂಜೆ 5:10 ಗಂಟೆಗೆ ಪ್ರಾರಂಭ

Published On - 4:23 pm, Sun, 23 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?