AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2022: ಅ. 25ರಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ; ಭಾರತದಲ್ಲೂ ಗೋಚರವಾಗುತ್ತಾ?

Surya Grahan 2022: ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದಲ್ಲಿಯೂ ಇದನ್ನು ಕಾಣಬಹುದು.

Solar Eclipse 2022: ಅ. 25ರಂದು ಈ ವರ್ಷದ ಕೊನೆಯ ಸೂರ್ಯ ಗ್ರಹಣ; ಭಾರತದಲ್ಲೂ ಗೋಚರವಾಗುತ್ತಾ?
ಸೂರ್ಯ ಗ್ರಹಣ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 08, 2022 | 12:41 PM

ಸೂರ್ಯ ಗ್ರಹಣ 2022: ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು (Solar Eclipse) ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ (Surya Grahan) ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ.

ಈ ಸೂರ್ಯ ಗ್ರಹಣವು ಅಕ್ಟೋಬರ್ 25ರಂದು ಸಂಜೆ 4.29ಕ್ಕೆ ಪ್ರಾರಂಭವಾಗಿ, ಸಂಜೆ 5.42ಕ್ಕೆ ಕೊನೆಗೊಳ್ಳುತ್ತದೆ. ಭಾರತವಲ್ಲದೆ, ಯುರೋಪ್, ಆಫ್ರಿಕಾ ಖಂಡದ ಈಶಾನ್ಯ ಭಾಗ, ಏಷ್ಯಾದ ನೈಋತ್ಯ ಭಾಗ ಮತ್ತು ಅಟ್ಲಾಂಟಿಕ್‌ನಲ್ಲಿಯೂ ಇದನ್ನು ಕಾಣಬಹುದು.

ಸೂತಕದ ಅವಧಿಯು ಸೂರ್ಯಗ್ರಹಣಕ್ಕೆ 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಗ್ರಹಣ ಮುಗಿದ ನಂತರ ಸೂತಕ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂತಕದ ಅವಧಿಯಲ್ಲಿ ಯಾವುದೇ ಮಂಗಳಕರ ಅಥವಾ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ವಿಶೇಷವಾಗಿ ಗರ್ಭಿಣಿಯರು ಈ ಸಮಯದಲ್ಲಿ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಏಕೆಂದರೆ ಇದು ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Solar Eclipse 2022: ಏ. 30ರಂದು ಈ ವರ್ಷದ ಮೊದಲ ಸೂರ್ಯಗ್ರಹಣ; ಈ ಸ್ಥಳಗಳಲ್ಲಿ ಭಾಗಶಃ ಸೂರ್ಯಗ್ರಹಣ ಗೋಚರ

ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯ ದೇವರು ತುಲಾ ರಾಶಿಯಲ್ಲಿರುತ್ತಾನೆ. ಈ ಕಾರಣದಿಂದಾಗಿ, ತುಲಾ ರಾಶಿಯ ಜನರ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು. ತುಲಾ ರಾಶಿಯವರಿಗೆ ಸೂರ್ಯಗ್ರಹಣದ ಸಮಯವು ಅನುಕೂಲಕರವಾಗಿರುವುದಿಲ್ಲ. ಸೂರ್ಯಗ್ರಹಣವು ಕೆಲವು ರಾಶಿಚಕ್ರ ಚಿಹ್ನೆಗಳ ಮೇಲೆ ಉತ್ತಮ ಪರಿಣಾಮ ಬೀರಲಿದೆ. ಚಂದ್ರನ ನೆರಳಿನ ಮಧ್ಯಭಾಗವು ಭೂಮಿಯನ್ನು ತಪ್ಪಿಸಿಕೊಂಡಾಗ ಭೂಮಿಯ ಧ್ರುವ ಪ್ರದೇಶಗಳಲ್ಲಿ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.

timeanddate.com ವೆಬ್‌ಸೈಟ್ ಪ್ರಕಾರ, ಈ ಭಾಗಶಃ ಸೂರ್ಯಗ್ರಹಣವು ನವದೆಹಲಿಯಲ್ಲಿ ಗೋಚರಿಸುತ್ತದೆ. ಭಾಗಶಃ ಸೂರ್ಯಗ್ರಹಣವನ್ನು ಆಂಶಿಕ್ ಸೂರ್ಯ ಗ್ರಹಣ ಎಂದೂ ಕರೆಯುತ್ತಾರೆ. ಸಂಪೂರ್ಣ ಗ್ರಹಣವಾದಾಗ ಸೂರ್ಯನ ಡಿಸ್ಕ್ ಸಂಪೂರ್ಣವಾಗಿ ಚಂದ್ರನಿಂದ ಅಸ್ಪಷ್ಟವಾಗಿರುತ್ತದೆ. ಆದರೆ, ಭಾಗಶಃ ಮತ್ತು ವಾರ್ಷಿಕ ಗ್ರಹಣಗಳಲ್ಲಿ ಸೂರ್ಯನ ಒಂದು ಭಾಗವನ್ನು ಮಾತ್ರ ಅಸ್ಪಷ್ಟಗೊಳಿಸಲಾಗುತ್ತದೆ.

ಇದನ್ನೂ ಓದಿ: Solar Eclipse 2022: ಸೂರ್ಯಗ್ರಹಣದ ಸಂದರ್ಭದಲ್ಲಿ ಏನು ಮಾಡಬೇಕು? ಏನು ಮಾಡಬಾರದು?

ಸೂರ್ಯ ಗ್ರಹಣದಲ್ಲಿ ಏನು ಮಾಡಬೇಕು? ಏನು ಮಾಡಬಾರದು?: ಭಾರತದಲ್ಲಿ ಜನರು ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ಯಾವುದೇ ಆಹಾರವನ್ನು ಸೇವಿಸುವುದಿಲ್ಲ. ಅಲ್ಲದೆ, ಗ್ರಹಣದ ದುಷ್ಪರಿಣಾಮಗಳನ್ನು ತಡೆಗಟ್ಟಲು ದರ್ಭೆ ಹುಲ್ಲು ಅಥವಾ ತುಳಸಿ ಎಲೆಗಳನ್ನು ತಿನ್ನಲು ಮತ್ತು ನೀರಿನಲ್ಲಿ ಹಾಕಲಾಗುತ್ತದೆ. ಗ್ರಹಣ ಮುಗಿದ ನಂತರ ಸ್ನಾನ ಮಾಡಿ ಹೊಸ ಬಟ್ಟೆಯನ್ನು ಬದಲಾಯಿಸಿಕೊಳ್ಳಬೇಕೆಂದು ಹಲವರು ನಂಬುತ್ತಾರೆ. ಸೂರ್ಯ ದೇವರಿಗೆ ಸಮರ್ಪಿತವಾದ ಮಂತ್ರಗಳನ್ನು ಪಠಿಸುವುದು ದೇಶದ ಅನೇಕ ಮನೆಗಳಲ್ಲಿ ಅನುಸರಿಸುವ ಮತ್ತೊಂದು ಅಭ್ಯಾಸವಾಗಿದೆ.

ವಿಶೇಷವಾಗಿ, ಗರ್ಭಿಣಿಯರು ಮನೆಯೊಳಗೆ ಇರಲು ಮತ್ತು ಸಂತಾನ ಗೋಪಾಲ ಮಂತ್ರವನ್ನು ಪಠಿಸಲು ಹಿರಿಯರು ಸೂಚಿಸುತ್ತಾರೆ. ಗ್ರಹಣದ ಸಮಯದಲ್ಲಿ ಅನೇಕರು ನೀರನ್ನು ಕೂಡ ಕುಡಿಯುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Sat, 8 October 22

ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ