AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ಹಬ್ಬದಂದು ಕಣ್ಣಿನ ರಕ್ಷಣೆ ಹೇಗೆ? ಕೆಲ ಸಲಹೆ ಇಲ್ಲಿವೆ

ಮೈ ಮರೆತು ಆಡುವ ಈ ಹಬ್ಬದಲ್ಲಿ ದೇಹಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಅಪಾಯಗಳ ಬಗ್ಗೆ ಎಚ್ಚರ ವಹಿಸಬೇಕು. ಒಬ್ಬರಿಗೊಬ್ಬರು ಬಣ್ಣ ಎರಚಿಕೊಂಡಾಗ ಕಣ್ಣಿಗೆ ಬೀಳಬಹುದು.

ಹೋಳಿ ಹಬ್ಬದಂದು ಕಣ್ಣಿನ ರಕ್ಷಣೆ ಹೇಗೆ? ಕೆಲ ಸಲಹೆ ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 15, 2022 | 2:06 PM

Share

ಮಾರ್ಚ್ 18ಕ್ಕೆ ಹೋಳಿ ಹಬ್ಬ (Holi). ದೇಶದ ಹಲವು ಕಡೆ ಬಹಳ ಅದ್ದೂರಿಯಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಕುಣಿದು ಕುಪ್ಪಳಿಸುವುದಕ್ಕೆ ಜನ ಕಾಯುತ್ತಿದ್ದಾರೆ. ಬಣ್ಣಗಳನ್ನ (Colour) ಎರಚ್ಚುತ್ತಾ ಸಂಭ್ರಮಿಸುವ ಈ ಹಬ್ಬ ಎಂದರೆ ಎಲ್ಲರಿಗೂ ಇಷ್ಟ. ಮೈ ಮರೆತು ಕುಣಿಯುತ್ತಾ ಆಡುವ ಈ ಹಬ್ಬದಲ್ಲಿ ದೇಹಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುತ್ತೆ. ಹೀಗಾಗಿ ಅಪಾಯಗಳ ಬಗ್ಗೆ ಎಚ್ಚರ ವಹಿಸಬೇಕು. ಒಬ್ಬರಿಗೊಬ್ಬರು ಬಣ್ಣ ಎರಚಿಕೊಂಡಾಗ ಕಣ್ಣಿಗೆ ಬೀಳಬಹುದು. ಹೋಳಿ ಹಬ್ಬದಂದು ಕಣ್ಣಿನ ಬಗ್ಗೆ ಹೇಗೆ ಎಚ್ಚರವಹಿಸಬೇಕು ಅಂತ ಇಲ್ಲಿ ತಿಳಿಸಲಾಗಿದೆ.

ಕಣ್ಣಿನ ಸುತ್ತ ಕೊಬ್ಬರಿ ಎಣ್ಣೆ: ಕೆಮಿಕಲ್ ಬಳಸಿ ಬಣ್ಣವನ್ನು ಸಿದ್ಧಪಡಿಸಲಾಗುತ್ತದೆ. ಹೀಗಾಗಿ ಬಣ್ಣ ಕಣ್ಣಿಗೆ ಹೋದರೆ ಅಲರ್ಜಿ ಆಗಬಹುದು. ಕೆಲವೊಮ್ಮೆ ಕಾಣಿಸದೇ ಇರಬಹುದು. ಇದರಿಂದ ಕಣ್ಣಿನ ಸುತ್ತ ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಂಡು ಹೋಳಿ ಆಡಿ. ಹೀಗೆ ಮಾಡಿದರೆ ಕಣ್ಣು ಸುರಕ್ಷಿತವಾಗಿರುತ್ತದೆ.

ಗ್ಲಾಸ್ ಬಳಸಿ: ಹೋಳಿ ಆಡುವ ಮೊದಲು ಕಣ್ಣಿನ ಬಗ್ಗೆ ಕಾಳಜಿ ಇರಲಿ. ರಕ್ಷಣಾತ್ಮಕ ಗ್ಲಾಸ್, ಸನ್​ಗ್ಲಾಸ್​ಗಳನ್ನ ಬಳಸಿ. ಗ್ಲಾಸ್ ಬಳಿಸಿದರೆ ಕಣ್ಣಿಗೆ ಬೀಳುವ ಬಣ್ಣ ಗ್ಲಾಸ್ ಮೇಲೆ ಬೀಳುತ್ತದೆ. ಈ ಮೂಲಕ ಹೋಳಿ ಹಬ್ಬದಂದು ಕಣ್ಣನ್ನು ರಕ್ಷಣೆ ಮಾಡಬಹುದು.

ಶುದ್ಧ ನೀರಿನಿಂದ ತೊಳೆಯಿರಿ: ಹೋಳಿ ಹಬ್ಬದಲ್ಲಿ ಬಣ್ಣಗಳು ಕಣ್ಣಿಗೆ ಬೀಳುವುದು ಸಹಜ. ಆದರೆ ಹಬ್ಬ ಸಂಭ್ರಮದಿಂದ ಕೂಡಿರಬೇಕು. ಬದಲಾಗಿ ನೋವಿಗೆ ಕಾರಣವಾಗಬಾರದು. ಕಣ್ಣಿಗೆ ಬಣ್ಣ ಬಿದ್ದ ತಕ್ಷಣ ಶುದ್ಧ ನೀರಿನಿಂದ ತೊಳೆಯಿರಿ. ಅಥವಾ ಶುದ್ಧ ನೀರಿನಲ್ಲಿ ಕಣ್ಣು ಬಿಡಿ. ಹೀಗೆ ಮಾಡಿದರೆ ಕಣ್ಣನ್ನು ರಕ್ಷಿಸಿಕೊಳ್ಳಬಹುದು.

ಬಣ್ಣದ ಪೌಡರ್ ಬಳಸಿ: ಕಣ್ಣಿನ ಒಳಗೆ ಬಣ್ಣ ಹೋದರೆ ಯಾವುದೇ ಕಾರಣಕ್ಕೂ ಉಜ್ಜಬಾರದು. ಹೋಳಿ ಹಬ್ಬದಂದು ಬಣ್ಣದ ಪೇಸ್ಟ್ ಬಳಸುವ ಬದಲು ಪುಡಿಯನ್ನು ಬಳಸಿ. ಇದರ ಅಪಾಯ ಪ್ರಮಾಣ ಕಡಿಮೆ. ಒಂದು ವೇಳೆ ಕಣ್ಣಿಗೆ ಬಣ್ಣ ಹೋಗಿ ಕೆಂಪಾದರೆ ತಕ್ಷಣ ವೈದ್ಯರ ಬಳಿ ಹೋಗಿ ಪರಿಕ್ಷಿಸಿಕೊಳ್ಳಿ.

ಇದನ್ನೂ ಓದಿ

Jasprit Bumrah: ಭಾರತ ಪರ ಇದುವರೆಗೆ ಯಾರೂ ಮಾಡಿಲ್ಲ: ವಿಶೇಷ ದಾಖಲೆ ನಿರ್ಮಿಸಿದ ಜಸ್​ಪ್ರೀತ್ ಬುಮ್ರಾ

ಫಿಲ್ಮ್​ ಚೇಂಬರ್​ನಲ್ಲಿ ಚುನಾವಣೆ ಗಲಾಟೆ; ಭಾಮಾ ‌ಹರೀಶ್ ಹಾಗು ಸುರೇಶ್ ನಡುವೆ ಮಾತಿನ ಚಕಮಕಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ