AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spirituality: ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ಆಧ್ಯಾತ್ಮಿಕತೆ ಉತ್ತಮ

ಆಧ್ಯಾತ್ಮಿಕತೆಯ ಕುರಿತ ಸಾರ್ವತ್ರಿಕ ವ್ಯಾಖ್ಯಾನವಿಲ್ಲ ಮತ್ತು ಅದನ್ನು ಅಭ್ಯಾಸ ಮಾಡಲು ಸರಿಯಾದ ಮಾರ್ಗವಿಲ್ಲ. ಆಧ್ಯಾತ್ಮಿಕತೆಯ ಪರಿಕಲ್ಪನೆಯು ವಿಭಿನ್ನ ವ್ಯಕ್ತಿತ್ವಗಳಿಗೆ ವಿಭಿನ್ನ ವಿಷಯಗಳನ್ನು ಅರ್ಥೈಸುತ್ತದೆ. ಕೆಲವು ಜನರಿಗೆ ಆಧ್ಯಾತ್ಮಿಕತೆಯ ವ್ಯಾಖ್ಯಾನ ಮತ್ತು ಪರಿಕಲ್ಪನೆಯು ವಿಕಸನಗೊಳ್ಳಬಹುದು.

Spirituality: ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕಾಗಿ ಆಧ್ಯಾತ್ಮಿಕತೆ ಉತ್ತಮ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 09, 2023 | 4:19 PM

Share

ಆಧ್ಯಾತ್ಮಿಕತೆಯ ಕುರಿತ ಸಾರ್ವತ್ರಿಕ ವ್ಯಾಖ್ಯಾನವಿಲ್ಲ ಮತ್ತು ಅದನ್ನು ಅಭ್ಯಾಸ ಮಾಡಲು ಸರಿಯಾದ ಮಾರ್ಗವಿಲ್ಲ. ಆಧ್ಯಾತ್ಮಿಕತೆಯ ಪರಿಕಲ್ಪನೆಯು ವಿಭಿನ್ನ ವ್ಯಕ್ತಿತ್ವಗಳಿಗೆ ವಿಭಿನ್ನ ವಿಷಯಗಳನ್ನು ಅರ್ಥೈಸುತ್ತದೆ. ಕೆಲವು ಜನರಿಗೆ ಆಧ್ಯಾತ್ಮಿಕತೆಯ ವ್ಯಾಖ್ಯಾನ ಮತ್ತು ಪರಿಕಲ್ಪನೆಯು ವಿಕಸನಗೊಳ್ಳಬಹುದು. ಧ್ಯಾನ, ಪ್ರಾರ್ಥನೆ, ಸಾವಧಾನತೆ, ಯೋಗ ಅಥವಾ ಇತರ ಯಾವುದೇ ವಿಧಾನದ ಮೂಲಕ ನೀವು ಮಾನಸಿಕ ಮತ್ತು ದೈಹಿಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿಮ್ಮ ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರುವ ಆಧ್ಯಾತ್ಮಿಕತೆಯ ಕೆಲವು ಪ್ರಯೋಜನಗಳು ಇಲ್ಲಿವೆ.

ಒತ್ತಡ ನಿವಾರಣೆ: ಒಬ್ಬ ವ್ಯಕ್ತಿಯು ಒತ್ತಡದಲ್ಲಿದ್ದಾಗ, ದೇಹವು ಕೆಲವು ಹಾರ್ಮೋನುಗಳನ್ನು ಅಧಿಕವಾಗಿ ಉತ್ಪಾದಿಸುತ್ತದೆ ಮತ್ತು ದೀರ್ಘಾವಧಿಯಲ್ಲಿ ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಒತ್ತಡದ ಜೀವನವು ಆತಂಕ, ರಕ್ತದೊತ್ತಡ, ನಿದ್ರಾಹೀನತೆ ಅತವಾ ಕಡಿಮೆ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಆಧ್ಯಾತ್ಮಿಕ ಅಭ್ಯಾಸಗಳು ಒತ್ತಡವನ್ನು ನಿವಾರಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಧ್ಯಾನಗಳಂತಹ ಆಧ್ಯಾತ್ಮಿಕ ಅಭ್ಯಾಸಗಳು ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ: ದೀರ್ಘಕಾಲದ ನಿದ್ರೆಯ ಸಮಸ್ಯೆಗಳು ಜೀವನಶೈಲಿಯ ಆಯ್ಕೆ, ಮಾನಸಿಕ ಆಘಾತ, ಪ್ರಮುಖ ಜೀವನ ಘಟನೆಗಳು ಮತ್ತು ಕೆಲವೊಂದು ಪರಿವರ್ತನೆಗಳ ಪರಿಣಾಮವಾಗಿರಬಹುದು. ಆಧ್ಯಾತ್ಮಿಕ ಅಭ್ಯಾಸಗಳು ಸಾಮಾನ್ಯವಾಗಿ ವ್ಯಕ್ತಿಗಳಿಗೆ ಮಾನಸಿಕ ಮತ್ತು ಭಾವನಾತ್ಮಕ ನೆಮ್ಮದಿಯನ್ನು ಪಡೆಯಲು ಸಹಾಯ ಮಾಡುತ್ತದೆ. ಇದು ಅಸ್ವಸ್ಥತೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆತಂಕಗಳನ್ನು ಕಡಿಮೆ ಮಾಡುತ್ತದೆ ಮತ್ತು ಸಾಮಾಜಿಕ ಸಂಪರ್ಕಗಳನ್ನು ಸುಧಾರಿಸುತ್ತದೆ: ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮನಸ್ಸು ಅತ್ಯಂತ ಶಾಂತಿಯುತ ಸ್ಥಿತಿಯಲ್ಲಿರುತ್ತದೆ. ನಮ್ಮ ಆತಂಕವನ್ನು ನಿಯಂತ್ರಿಸುವಲ್ಲಿ ನಮ್ಮ ಆಧ್ಯಾತ್ಮಿಕ ಅಭ್ಯಾಸಗಳು ನಮಗೆ ಸಹಾಯ ಮಾಡುತ್ತದೆ. ಇವುಗಳು ಚಿಂತೆಯ ಕಾರಣಗಳು ಮತ್ತು ಅದಕ್ಕೆ ಉತ್ತೇಜನ ನೀಡುವ ಅಂಶಗಳಿAದ ನಮ್ಮನ್ನು ದೂರವಿರಿಸುತ್ತದೆ. ಧ್ಯಾನ, ಪ್ರಾರ್ಥನೆ, ಯೋಗ ಇವುಗಳು ಉತ್ತಮ ಮಾನಸಿಕ ಆರೋಗ್ಯವನ್ನು ಹೊಂದಲು ಸಹಾಯ ಮಾಡುತ್ತವೆ.

ಇದನ್ನೂ ಓದಿ: Self-Validation: ನಿಮ್ಮನ್ನು ನೀವು ಮೊದಲ ಅರ್ಥ ಮಾಡಿಕೊಳ್ಳಿ, ಸ್ವಯಂ ಮೌಲ್ಯೀಕರಣ ಅಗತ್ಯ ಯಾಕೆ?

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ: ದೇಹ ಮತ್ತು ಮನಸ್ಸಿನಲ್ಲಿ ಸಮತೋಲನದ ಸ್ಥಿತಿಯನ್ನು ಉತ್ತೇಜಿಸುವ ಮೂಲಕ ಆಧ್ಯಾತ್ಮಿಕ ಅಭ್ಯಾಸಗಳು ರೋಗನಿರೋಧಕ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಧ್ಯಾನ, ಸಾವಧಾನತೆ ಅಭ್ಯಾಸಗಳು ಮತ್ತು ಇತರ ರೀತಿಯ ಚಟುವಟಿಕೆಗಳು ಮಾನಸಿಕ ನೆಮ್ಮದಿಯನ್ನು ತರುತ್ತದೆ ಮತ್ತು ಮಾನಸಿಕ ಹಾಗೂ ದೈಹಿಕ ಆರೋಗ್ಯದ ನಡುವೆ ಸಮತೋಲನವನ್ನು ತರಲು ಸಹಾಯ ಮಾಡುತ್ತದೆ.

ಖಿನ್ನತೆಯಿಂದ ದೂರವಿಡುತ್ತದೆ: ಪಾರ್ಥನೆ, ಸಾವಧಾನತೆ, ಧ್ಯಾನ ಮತ್ತು ಇತರ ಆಧ್ಯಾತ್ಮಿಕ ಅಭ್ಯಾಸಗಳು ಖಿನ್ನತೆ ಮತ್ತು ಮಾನಸಿಕ ಅಸ್ವಸ್ಥತೆಗಳನ್ನು ಕಡಿಮೆಗೊಳಿಸಬಹುದು. ಖಿನ್ನತೆ ಅಥವಾ ಆತಂಕವನ್ನು ಉಂಟುಮಾಡುವ ಮನಸ್ಥಿತಿ ಮತ್ತು ಭಾವನಾತ್ಮಕ ಅಡಚಣೆಗಳನ್ನು ನಿಯಂತ್ರಿಸುವಲ್ಲಿ ಆದ್ಯಾತ್ಮಿಕ ಅಭ್ಯಾಸಗಳು ಉಪಯೋಗಕಾರಿಯಾಗಿದೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?