AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧವನ್ನು ಒತ್ತಡದಿಂದ ರಕ್ಷಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಮಾನವನು ಜೀವನ ಶೈಲಿಯೂ ಬದಲಾಗುತ್ತಿದ್ದಂತೆ ಒತ್ತಡ ತುಂಬಿದ ಜೀವನವನ್ನು ಬರಮಾಡಿಕೊಳ್ಳುತ್ತಿದ್ದಾನೆ. ಈ ಒತ್ತಡವು ಮನುಷ್ಯನ ನಿಜವಾದ ಸಂತೋಷವನ್ನು ಹಾಳು ಮಾಡುತ್ತವೆ. ಈ ಸಂಬಂಧದಲ್ಲಿ ಉಂಟಾಗುವ ಒತ್ತಡದಿಂದಾಗಿ ಬಿರುಕು ಕಾಣಿಸಿಕೊಳ್ಳಬಹುದು. ಅದಲ್ಲದೇ, ಒತ್ತಡದಿಂದ ಉಂಟಾಗುವ ಸಮಸ್ಯೆಯೂ ದಂಪತಿಗಳ ನಡುವಿನ ಬಂಧವನ್ನು ದೂರ ಮಾಡಬಹುದು. ಹೀಗಾಗಿ ನಿಮ್ಮ ಸಂಬಂಧವನ್ನು ಒತ್ತಡದಿಂದ ರಕ್ಷಿಸಲು ಈ ಮಾರ್ಗಗಳನ್ನು ಅನುಸರಿಸುವುದು ಉತ್ತಮ.

ಸಂಬಂಧವನ್ನು ಒತ್ತಡದಿಂದ ರಕ್ಷಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Jan 22, 2024 | 4:25 PM

Share

ಸಂಬಂಧದಲ್ಲಿ ಪ್ರೀತಿಯ ಜೊತೆ ಜೊತೆಗೆ ಹೊಂದಿಕೆ ಎನ್ನುವುದು ಬಹಳ ಮುಖ್ಯ. ಸಂಬಂಧದಲ್ಲಿ ಪ್ರೀತಿ ಎನ್ನುವುದು ತಟಸ್ಟವಾಗಿರಲು ಸಾಧ್ಯವಿಲ್ಲ. ಕೆಲವೊಮ್ಮೆ ಒತ್ತಡವು ದಾಂಪತ್ಯ ಜೀವನದ ಏರುಪೇರುಗಳಿಗೆ ಕಾರಣವಾಗಬಹುದು. ಸಂಬಂಧದಲ್ಲಿ ಒತ್ತಡ ಏರ್ಪಟ್ಟಾಗ ಒಬ್ಬರ ಮಾತುಗಳು ಇನ್ನೊಬ್ಬರಿಗೆ ಕಿರಿಕಿರಿ ಭಾವವನ್ನು ಉಂಟು ಮಾಡಬಹುದು. ಈ ಸಮಯದಲ್ಲಿ ದಂಪತಿಗಳು ಸಂಬಂಧವನ್ನು ಜಾಣ್ಮೆಯಿಂದ ನಿಭಾಯಿಸಿಕೊಂಡು ಹೋಗುವುದು ಮುಖ್ಯವಾಗುತ್ತದೆ.

ಒತ್ತಡದ ನಡುವೆ ಸಂಬಂಧವನ್ನು ನಿಭಾಯಿಸಲು ಈ ಟಿಪ್ಸ್ ಅನುಸರಿಸಿ

* ಸಂಗಾತಿಯ ಪ್ರತಿ ಒಳ್ಳೆಯ ಕೆಲಸಗಳನ್ನು ಶ್ಲಾಘಿಸುವುದನ್ನು ಕಲಿಯಿರಿ. ನಿಮ್ಮ ಸಂಗಾತಿಯ ಕೆಲಸವನ್ನು ಶ್ಲಾಘಿಸುವುದರಿಂದ ಪ್ರೀತಿ ಮತ್ತು ಗೌರವವನ್ನು ಬೆಳೆಸುವುದರ ಜೊತೆಗೆ ಸ್ನೇಹವನ್ನು ಬಲಪಡಿಸುತ್ತದೆ. ಹಾಗೂ ಸಂಬಂಧದಲ್ಲಿ ಒತ್ತಡಮುಕ್ತಗೊಳಿಸಲು ಸಾಧ್ಯವಾಗುತ್ತದೆ.

* ಪರಸ್ಪರರ ಯೋಜನೆಗಳನ್ನು ಗೌರವಿಸಿ. ಕಠಿಣ ಸಮಯದಲ್ಲಿ ಸಹಾಯ ಮಾಡುವುದರಿಂದ ಸಂಬಂಧಗಳಲ್ಲಿ ವಿಶ್ವಾಸಾರ್ಹ ಬಂಧವು ಬೆಳೆಯಲು ಸಾಧ್ಯವಾಗುತ್ತದೆ. * ಪರಸ್ಪರರ ಅಗತ್ಯಗಳಿಗೆ ಸ್ಪಂದಿಸುವುದನ್ನು ಕಲಿಯಿರಿ. ಸಂಬಂಧಗಳಲ್ಲಿ ಪರಸ್ಪರರ ಆದ್ಯತೆಗಳನ್ನು ಬೆಂಬಲಿಸುವುದರಿಂದ ಸಂಬಂಧಗಳಲ್ಲಿ ಭಾವನಾತ್ಮಕ ಬಂಧವು ಗಟ್ಟಿಯಾಗುತ್ತದೆ.

* ಸಂಗಾತಿಗಳಿಬ್ಬರೂ ಸಂವಹನದ ಮೂಲಕ ಸಮಸ್ಯೆಗಳನ್ನು ಒಟ್ಟಿಗೆ ಪರಿಹರಿಸಿಕೊಳ್ಳಿ. ಒತ್ತಡದ ವೇಳೆ ಸಂಬಂಧದಲ್ಲಿ ಸಂಘರ್ಷವನ್ನು ತಪ್ಪಿಸಲು ಆರೋಗ್ಯಕರ ಮಾತುಗಳನ್ನು ಅನುಸರಿಸುವುದು ಒಳ್ಳೆಯದು.

* ಸಂಬಂಧದಲ್ಲಿ ಸಂಗಾತಿಯ ಅಭಿಪ್ರಾಯಗಳಿಗೆ ಮಹತ್ವ ನೀಡಿ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ಪರಸ್ಪರ ವಿನಿಮಯವು ನಿಮ್ಮಿಬ್ಬರ ಸಂಬಂಧದಲ್ಲಿ ಒತ್ತಡವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:ನಿಮ್ಮಲ್ಲಿ ಈ ಗುಣವಿದ್ದರೆ ಮಾತ್ರ ನಿಮ್ಮ ಪ್ರೀತಿ ನಿಜವಾಗಿರಲು ಸಾಧ್ಯ 

* ಒಳ್ಳೆಯ ಮತ್ತು ಕೆಟ್ಟ ಸಮಯಗಳಲ್ಲಿ ಪರಸ್ಪರರನ್ನು ಬೆಂಬಲಿಸಿ ಜೊತೆಯಲ್ಲಿರುವುದು ಮುಖ್ಯ. ಒತ್ತಡ ತುಂಬಿದ ಸಮಯದಲ್ಲಿ ನಿಮ್ಮ ಸಂಗಾತಿಯ ಜೊತೆಗೆ ನೀವು ನಿಂತುಕೊಳ್ಳುವುದರಿಂದ ಸಂಗಾತಿಗೆ ನಿಮ್ಮ ಮೇಲೆ ಪ್ರೀತಿ ಹಾಗೂ ನಂಬಿಕೆಯೂ ಹೆಚ್ಚಾಗುತ್ತದೆ.

* ಜೀವನದ ಬದಲಾವಣೆಗಳು ಧನಾತ್ಮಕವಾಗಿರಲಿ ಅಥವಾ ಸವಾಲಾಗಿರಲಿ ಒಟ್ಟಿಗೆ ಸ್ವೀಕರಿಸುವುದನ್ನು ಕಲಿಯಿರಿ. ಸಂಗಾತಿಗಳಿಬ್ಬರೂ ತಮಗೆ ಅನಿಸುವುದನ್ನು ಮುಕ್ತವಾಗಿ ಹೇಳಿಕೊಳ್ಳಿ. ಹೊಸ ಸನ್ನಿವೇಶಗಳಿಗೆ ಹೊಂದಿಕೊಳ್ಳುವಾಗ ಪರಸ್ಪರ ಬೆಂಬಲವಿರಲಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು