AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Rice: ಕೆಂಪು ಅಕ್ಕಿಯ ಅದ್ಭುತ ಆರೋಗ್ಯ ಪ್ರಯೋಜನಗಳು

ಇತ್ತೀಚಿನ ಸಂಶೋಧನೆಯ ಪ್ರಕಾರ ಕೆಂಪು ಅಕ್ಕಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಈಗ ಕೆಂಪು ಅಕ್ಕಿಯನ್ನು ತಿನ್ನುವುದರಿಂದ ಆಗುವ ಲಾಭಗಳೇನು ಎಂದು ನೋಡೋಣ.

Red Rice: ಕೆಂಪು ಅಕ್ಕಿಯ ಅದ್ಭುತ ಆರೋಗ್ಯ ಪ್ರಯೋಜನಗಳು
Benefits of Red Rice
ಅಕ್ಷತಾ ವರ್ಕಾಡಿ
|

Updated on: Mar 29, 2024 | 8:28 PM

Share

ಅಕ್ಕಿಯಲ್ಲಿ ಹಲವು ವಿಧಗಳಿವೆ. ಆದರೆ ಹೆಚ್ಚಾಗಿ ಎಲ್ಲರೂ ಬೆಳ್ತಿಗೆ ಅನ್ನವನ್ನು ತಿನ್ನುತ್ತಾರೆ. ಆದರೆ ಕೆಂಪು ಹಾಗೂ ಕಂದು ಬಣ್ಣದ ಅಕ್ಕಿಗಳಿಗೆ ಹೋಲಿಕೆ ಮಾಡಿದೆ ಬೆಳ್ತಿಗೆ ಅಕ್ಕಿಯಲ್ಲಿ ಫೈಬರ್​ , ಪ್ರೊಟೀನ್​ ಅಂಶಗಳು, ಜೀವಸತ್ವಗಳು ಹಾಗೂ ಖನಿಜದ ಪ್ರಮಾಣ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಇತ್ತೀಚಿನ ಸಂಶೋಧನೆಯ ಪ್ರಕಾರ ಕೆಂಪು ಅಕ್ಕಿಯನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಈಗ ಕೆಂಪು ಅಕ್ಕಿಯನ್ನು ತಿನ್ನುವುದರಿಂದ ಆಗುವ ಲಾಭಗಳೇನು ಎಂದು ನೋಡೋಣ.

ಹೃದಯ ಆರೋಗ್ಯಕರ:

ಕೆಂಪು ಅಕ್ಕಿಯ ಅನ್ನ ತಿನ್ನುವುದರಿಂದ ಹೃದಯವು ಆರೋಗ್ಯಕರವಾಗಿರುತ್ತದೆ. ಈ ಅನ್ನ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಸ್ವತಂತ್ರ ರಾಡಿಕಲ್ಗಳ ವಿರುದ್ಧವೂ ರಕ್ಷಿಸುತ್ತದೆ. ಹೃದಯಕ್ಕೆ ಯಾವುದೇ ಅಡೆತಡೆಗಳಿಲ್ಲ.

ಮಧುಮೇಹ ನಿಯಂತ್ರಣ:

ಕೆಂಪು ಅಕ್ಕಿಯ ಅನ್ನ ತಿನ್ನುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಮಧುಮೇಹ ಇರುವವರಿಗೆ ಕೆಂಪು ಅಕ್ಕಿಯ ಅನ್ನ ತುಂಬಾ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸದೆ ನಿಯಂತ್ರಿಸುತ್ತದೆ. ಮಧುಮೇಹ ಇರುವವರು ಈ ಅನ್ನವನ್ನು ಯಾವುದೇ ಸಂಶಯವಿಲ್ಲದೆ ತಿನ್ನಬಹುದು.

ತೂಕ ಇಳಿಕೆ:

ಕೆಂಪು ಅಕ್ಕಿಯ ಅನ್ನದಲ್ಲಿ ಪ್ರೋಟೀನ್ ಮತ್ತು ಫೈಬರ್ ಇರುತ್ತದೆ. ಇದರಿಂದ ಇವುಗಳನ್ನು ಸ್ವಲ್ಪ ತಿಂದರೂ ಹೊಟ್ಟೆ ತುಂಬಿದ ಅನುಭವವಾಗುತ್ತದೆ. ಈ ಕಾರಣದಿಂದಾಗಿ, ಇತರ ಆಹಾರಗಳನ್ನು ತೆಗೆದುಕೊಳ್ಳಲಾಗುವುದಿಲ್ಲ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ. ಕೆಂಪು ಅಕ್ಕಿಯನ್ನು ಹೀಗೆ ತಿಂದರೆ ಬೇಗ ತೂಕ ಇಳಿಸಿಕೊಳ್ಳಬಹುದು.

ಇದನ್ನೂ ಓದಿ: Weight Loss: ಋತುಬಂಧದ ಬಳಿಕ ಮಹಿಳೆಯರ ತೂಕ ಇಳಿಸುವುದು ಹೇಗೆ?

ಚರ್ಮವನ್ನು ರಕ್ಷಿಸುತ್ತದೆ:

ಕೆಂಪು ಅಕ್ಕಿಯ ಅನ್ನದಲ್ಲಿ ಆಂಥೋಸಯಾನಿನ್ ಇರುತ್ತದೆ. ಇದು ಯುವಿ ಕಿರಣಗಳಿಂದ ರಕ್ಷಿಸುತ್ತಾರೆ. ಇದರಿಂದ ಚರ್ಮವು ಆರೋಗ್ಯಕರವಾಗಿರುತ್ತದೆ. ಇದು ವಯಸ್ಸಾಗುವುದನ್ನು ತಡೆಯುತ್ತದೆ. ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಉಸಿರಾಟದ ತೊಂದರೆಗಳ ನಿಯಂತ್ರಣ:

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕೆಂಪು ಅಕ್ಕಿಯ ಅನ್ನ ತಿನ್ನುವುದರಿಂದ ಅವುಗಳನ್ನು ನಿಯಂತ್ರಿಸಬಹುದು. ಅಂತೆಯೇ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ. ಅದೂ ಅಲ್ಲದೆ ಈ ಅನ್ನವನ್ನು ತಿನ್ನುವುದರಿಂದ ಸಂಧಿವಾತ ಮತ್ತು ಕೀಲು ನೋವು ಬರುವುದಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!