AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ance Remedies: ಮೊಡವೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ಮನೆಮದ್ದು

ಮೊಡವೆಗಳ ಸಮಸ್ಯೆಯು ನಿಮ್ಮನ್ನು ಕಾಡುತ್ತಿದ್ದರೆ, ದುಬಾರಿ ಕ್ರೀಮ್ ಮತ್ತು ಜೆಲ್​​ಗಳ ಮೇಲೆ ಹಣ ವ್ಯರ್ಥ ಮಾಡುವುದನ್ನು ಬಿಟ್ಟುಬಿಡಿ. ಬದಲಾಗಿ ಈ ಕೆಲವೊಂದು ಮನೆಮದ್ದುಗಳನ್ನು ಬಳಸುವ ಮೂಲಕ ಸುಲಭವಾಗಿ ಮೊಡವೆಗಳನ್ನು ತೊಡೆದುಹಾಕಬಹುದು.

Ance Remedies: ಮೊಡವೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಇಲ್ಲಿದೆ ಮನೆಮದ್ದು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 21, 2023 | 5:25 PM

ಮೊಡವೆಗಳ ಸಮಸ್ಯೆಯು ಸಾಮಾನ್ಯವಾಗಿ ಹದಿಹರೆಯದವರಿಂದ ಹಿಡಿದು ಮದ್ಯವಯಸ್ಸಿನವರಲ್ಲೂ ಕಂಡುಬರುತ್ತದೆ. ಮೊಡವೆಗಳು ಮುಖದ ಅಂದವನ್ನು ಹಾಳು ಮಾಡುವುದಲ್ಲದೆ ವ್ಯಕ್ತಿಯ ಆತ್ಮಸ್ಥೈರ್ಯದ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ. ಮೊಡವೆಗಳು ಉಂಟಾಗಲು ಹಲವು ಕಾರಣಗಳಿರಬಹುದು. ಹದಿಹರೆಯದವರಲ್ಲಿ ಹಾರ್ಮೋನುಗಳ ಬದಲಾವಣೆಯಿಂದಾಗಿ ಮೊಡವೆಗಳ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾಗೂ ಹೆಚ್ಚುತ್ತಿರುವ ಮಾಲಿನ್ಯ, ಧೂಳು, ಜಂಕ್ ಫುಡ್ ಮತ್ತು ಕರಿದ ಆಹಾರಗಳ ಸೇವನೆ ನಮ್ಮ ಚರ್ಮವನ್ನು ಎಣ್ಣೆಮುಕ್ತವಾಗಿಸುವುದರ ಜೊತೆಗೆ ಮೊಡವೆಗಳು ಉಂಟಾಗಲು ಕಾರಣವಾಗುತ್ತದೆ. ಮೊಡವೆಗಳು ದೇಹದ ಆಂತರಿಕ ಸಮಸ್ಯೆಗಳಿಗೆ ಸಂಬಂಧಿಸಿದೆ. ಅದ್ದರಿಂದ ಅದನ್ನು ತೊಡೆದುಹಾಕಲು ಆಂತರಿಕವಾಗಿ ಹಾಗೂ ಬಾಹ್ಯವಾಗಿ ಚಿಕಿತ್ಸೆ ನೀಡುವುದು ಅವಶ್ಯಕ. ನಾವು ಸೇವಿಸುವ ಆಹಾರಗಳು ಮೊಡವೆಗಳ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಸಮತೋಲಿತ ಆಹಾರವನ್ನು ತೆಗೆದುಕೊಳ್ಳುವುದು ಅವಶ್ಯಕ. ಇನ್ನು ಕೆಲವರು ಮೊಡವೆಗಳನ್ನು ಹೋಗಲಾಡಿಸಲು ಔಷಧಿಗಳು ಹಾಗೂ ದುಬಾರಿ ಉತ್ಪನ್ನಗಳನ್ನು ಬಳಸುತ್ತಾರೆ. ಇದರ ಬದಲಿಗೆ ಮನೆಮದ್ದುಗಳು ಹೆಚ್ಚು ಪ್ರಯೋಜನಕಾರಿಯಾಗಬಲ್ಲವು.

ಮೊಡವೆಗಳನ್ನು ಹೋಗಲಾಡಿಸಲು ಸಹಕಾರಿ ಈ ಕೆಲವು ಮನೆಮದ್ದುಗಳು:

ಟೀ ಟ್ರೀ ಆಯಿಲ್ ಮೊಡವೆಗಳಿಗೆ ಉತ್ತಮವಾಗಿದೆ: ಟೀ ಟ್ರೀ ಆಯಿಲ್ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡುವ ಮತ್ತು ಚರ್ಮದ ಉರಿಯೂತವನ್ನು ಕಡಿಮೆ ಮಾಡುವ ಸಾಮರ್ಥ್ಯ ಹೆಸರುವಾಸಿಯಾದ ಸಾರಭೂತ ತೈಲವಾಗಿದೆ. ನೀವು ಕೆಲವು ಹನಿ ಟೀ ಟ್ರೀ ಆಯಿಲ್ ನ್ನು ನೀರು ಅಥವಾ ರೋಸ್ ವಾಟರ್ ನಲ್ಲಿ ಬೆರೆಸಿ ನೇರವಾಗಿ ಮೊಡವೆಗಳಿಗೆ ಹಚ್ಚಬಹುದು. ಇದು ಮೊಡವೆಗಳನ್ನು ತೊಡೆದುಹಾಕಲು ಪರಿಣಾಮಕಾರಿ ಮನೆಮದ್ದಾಗಿದೆ.

ಜೇನುತುಪ್ಪ ಮತ್ತು ದಾಲ್ಚಿನ್ನಿ ಮಾಸ್ಕ್: ಜೀನುತುಪ್ಪ ಮತ್ತು ದಾಲ್ಚಿನ್ನಿ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಮೊಡವೆಗಳು ಮತ್ತು ಅದರ ಉರಿಯೂತವನ್ನು ಕಡಿಮೆ ಮಾಡಲು ಎರಡು ಚಮಚ ಜೇನುತುಪ್ಪವನ್ನು ಒಂದು ಚಮಚ ದಾಲ್ಚಿನ್ನಿಯೊಂದಿಗೆ ಬೆರೆಸಿ ಪೇಸ್ಟ್ ಮಾಡಿ. ಈ ಪೇಸ್ಟ್​ನ್ನು ಮುಖಕ್ಕೆ ಹಚ್ಚಿ ಮತ್ತು 10 ರಿಂದ 15 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಮುಖವನ್ನು ತೊಳೆಯಿರಿ.

ಐಸ್ ಪ್ಯಾಕ್: ಮೊಡವೆಯ ಸಮಸ್ಯೆಯನ್ನು ಹೋಗಲಾಡಿಸಲು ನೀವು ಐಸ್​​ನ್ನು ಬಳಸಬಹುದು. ಐಸ್ ತುಂಡನ್ನು ಒಂದು ಸ್ವಚ್ಛವಾದ ತೆಳುವಾದ ಬಟ್ಟೆಯಲ್ಲಿ ಸುತ್ತಿ ಮತ್ತು ಮತ್ತು ಮೊಡವೆಯ ಮೇಲೆ ನಿಧಾನವಾಗಿ ಉಜ್ಜಿಕೊಳ್ಳಿ. ದಿನಕ್ಕೆರಡು ಬಾರಿ ಹೀಗೆ ಮಾಡುವುದರಿಂದ ಮುಖದಲ್ಲಿನ ಊತ ಮತ್ತು ಮೊಡವೆಗಳು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಮೊಣಕಾಲು ನೋವಿಗೆ ಇಲ್ಲಿದೆ ಮನೆಮದ್ದು

ನಿಂಬೆ ರಸ: ನಿಂಬೆ ರಸವು ನೈಸರ್ಗಿಕ ಸಂಕೋಚನ ಗುಣವನ್ನು ಹೊಂದಿದೆ. ಮತ್ತು ಇದು ವಿಟಮಿನ್ ಸಿ ಅಂಶದಿಂದ ಸಮೃದ್ಧವಾಗಿದೆ. ಇದು ಮೊಡವೆಗಳನ್ನು ತೊಡೆದುಹಾಕಲು ಸಹಕಾರಿ. ಹತ್ತಿಯ ಮೇಲೆ ತಾಜಾ ನಿಂಬೆ ರಸವನ್ನು ಸುರಿದು ಅದನ್ನು ಮೊಡವೆಯ ಮೆಲೆ ಅನ್ವಯಿಸಿ. ಇದರಿಂದ ಮೊಡವೆಗಳನ್ನು ತೊಡೆದು ಹಾಕಬಹುದು

ಗ್ರೀನ್ ಟೀ: ಗ್ರೀನ್ ಟೀಯಲ್ಲಿ ಉತ್ಕಷ‍್ಣ ನಿರೋಧಕಗಳು ಹೆಚ್ಚಿರುವುದರಿಂದ ಇದು ಉತ್ತಮ ಆರೋಗ್ಯ ಪ್ರಯೋಜನವನ್ನು ಹೊಂದಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಅಲ್ಲದೆ ಇದು ಮೊಡವೆಗಳನ್ನು ತೊಡೆದುಹಾಕಲು ಕೂಡಾ ಸಹಕಾರಿಯಾಗಿದೆ. ಗ್ರೀನ್ ಟೀ ಫ್ಲೇವನಾಯ್ಡ್ ಮತ್ತು ಟ್ಯಾನಿನ್​​​ಗಳನ್ನು ಹೊಂದಿರುವುದರಿಂದ ಇದು ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಲು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗೂ ಮೊಡವೆಗಳ ಬೆಳವಣಿಗೆಯನ್ನು ತಡೆಯುತ್ತದೆ. ಮೊದಲು ನೀವು ಗ್ರೀನ್ ಟೀ ಕುದಿಸಿ ಅದನ್ನು ತಣ್ಣಗಾಗಲು ಬಿಡಿ. ತಣ್ಣದಾದ ಬಳಿಕ ಗ್ರೀನ್ ಟೀಯನ್ನು ಹತ್ತಿ ಚೆಂಡನ್ನು ಬಳಸಿ ಮುಖಕ್ಕೆ ಅನ್ವಯಿಸಿ ಅಥವಾ ಸ್ಪ್ರೇ ಬಾಟಲಿಯ ಸಹಾಯದಿಂದ ಅದನ್ನು ಮುಖಕ್ಕೆ ಸ್ಪ್ರೇ ಮಾಡಬಹುದು. 10 ರಿಂದ 15 ನಿಮಿಷಗಳ ಬಳಿಕ ಮುಖವನ್ನು ಸ್ವಚ್ಛ ನೀರಿನಿಂದ ತೊಳೆಯಿರಿ. ಇದು ಕೂಡ ಮೊಡವೆಯನ್ನು ಹೋಗಲಾಡಿಸಲು ಪರಿಣಾಮಕಾರಿ ಮನೆಮದ್ದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ