AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಹಣ್ಣುಗಳನ್ನು ತಿನ್ನಿ

Summer Fruits: ಬೇಸಿಗೆ ಶುರುವಾಗಿದೆ. ಬೇಸಿಗೆ ಕಾಲದಲ್ಲಿ ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ನೀರಿನಂಶ ಸಿಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಕಾರಣದಿಂದಲೇ ಬೇಸಿಗೆಯಲ್ಲಿ ಹೆಚ್ಚು ಹಣ್ಣುಗಳನ್ನು ತಿನ್ನಲು ವೈದ್ಯರು, ಡಯೆಟಿಷಿಯನ್​ಗಳು ಶಿಫಾರಸು ಮಾಡುತ್ತಾರೆ. ಆದರೆ, ಹಣ್ಣುಗಳನ್ನು ತಿನ್ನುವುದರಿಂದ ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳುವುದು ಕೂಡ ಸುಲಭವಾಗುತ್ತದೆ ಎಂಬುದು ನಿನಗೆ ಗೊತ್ತಾ?

Weight Loss: ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಹಣ್ಣುಗಳನ್ನು ತಿನ್ನಿ
ಹಣ್ಣುImage Credit source: iStock
ಸುಷ್ಮಾ ಚಕ್ರೆ
|

Updated on: Mar 29, 2024 | 6:27 PM

Share

ಬೇಸಿಗೆ ಕಾಲದಲ್ಲಿ ವಿವಿಧ ಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಅದು ಸುವಾಸನೆ ಮಾತ್ರವಲ್ಲದೆ ಕಡಿಮೆ ಕ್ಯಾಲೋರಿಗಳನ್ನು ಕೂಡ ಹೊಂದಿರುತ್ತದೆ. ಇದು ತೂಕ ಇಳಿಸಲು ಪ್ರಯೋಜನಕಾರಿಯಾಗಿದೆ. ಚಳಿಗಾಲದ ತಿಂಗಳುಗಳಿಗೆ ಹೋಲಿಸಿದರೆ ಬೇಸಿಗೆಯ ತಿಂಗಳುಗಳಲ್ಲಿ ತೂಕವನ್ನು ಕಳೆದುಕೊಳ್ಳುವುದು ಸುಲಭ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಬೇಸಿಗೆ ಕಾಲವು ಹಣ್ಣುಗಳನ್ನು ಹೆಚ್ಚಾಗಿ ಹೊಂದಿರುವ ಸೀಸನ್ ಆಗಿದೆ. ಈ ಸೀಸನ್​ನಲ್ಲಿ ಸಿಗುವ ಹಣ್ಣುಗಳು ಪೌಷ್ಟಿಕಾಂಶಭರಿತವಾಗಿರುತ್ತವೆ. ಇವು ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳನ್ನು ನೀಡುವುದರ ಜೊತೆಗೆ, ಈ ಹಣ್ಣುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ತೂಕ ಇಳಿಸಲು ಸಹಾಯ ಮಾಡುತ್ತವೆ.

ಆದ್ದರಿಂದ, ಬೇಸಿಗೆ ಕಾಲವು ಪ್ರಾರಂಭವಾಗುತ್ತಿದ್ದಂತೆ, ಹೊಟ್ಟೆಯ ಕೊಬ್ಬನ್ನು ಹೊರಹಾಕುವುದಕ್ಕೆ ನೀವು ಯೋಚಿಸಿದ್ದರೆ ಕೆಲವು ಹಣ್ಣುಗಳು ಅದಕ್ಕೆ ಸಹಾಯ ಮಾಡುತ್ತವೆ. ನಿಯಮಿತ ವ್ಯಾಯಾಮ ಮತ್ತು ಸಮತೋಲಿತ ಆಹಾರದ ಜೊತೆಗೆ, ನಿಮ್ಮ ಊಟದಲ್ಲಿ ಕಡಿಮೆ ಕ್ಯಾಲೋರಿ ಇರುವ ಹಣ್ಣುಗಳನ್ನು ಸೇರಿಸಿಕೊಳ್ಳುವುದು ತೂಕ ಇಳಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡಲು ಮತ್ತು ದೇಹದ ತೂಕ ಇಳಿಸಿಕೊಳ್ಳಲು ನಿಮಗೆ ಸಹಾಯ ಮಾಡುವ 5 ಕಡಿಮೆ ಕ್ಯಾಲೋರಿಯ ಹಣ್ಣುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Weight Loss: ಋತುಬಂಧದ ಬಳಿಕ ಮಹಿಳೆಯರ ತೂಕ ಇಳಿಸುವುದು ಹೇಗೆ?

ಕಲ್ಲಂಗಡಿ:

ಕಲ್ಲಂಗಡಿ ಹಣ್ಣು ಹೆಚ್ಚಿನ ನೀರಿನ ಅಂಶ ಮತ್ತು ಕಡಿಮೆ ಕ್ಯಾಲೋರಿ ಇರುವ ಒಂದು ಸರ್ವೋತ್ಕೃಷ್ಟ ಬೇಸಿಗೆಯ ಹಣ್ಣು. ಪ್ರತಿ ಕಪ್‌ಗೆ ಕೇವಲ 46 ಕ್ಯಾಲೊರಿಗಳೊಂದಿಗೆ ಇದು ನಿಮ್ಮ ಸಿಹಿ ಕಡುಬಯಕೆಗಳನ್ನು ಪೂರೈಸುವುದಲ್ಲದೆ ನಿಮ್ಮನ್ನು ಹೈಡ್ರೀಕರಿಸಲು ಸಹಾಯ ಮಾಡುತ್ತದೆ. ಇದು ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಅಮೈನೋ ಆಮ್ಲವಾದ ಸಿಟ್ರುಲಿನ್ ಅನ್ನು ಸಹ ಒಳಗೊಂಡಿದೆ.

ಬೆರಿ ಹಣ್ಣುಗಳು:

ಸ್ಟ್ರಾಬೆರಿಗಳು, ಬೆರಿ ಹಣ್ಣುಗಳು, ರಾಸ್​ಬೆರಿ ಮತ್ತು ಬ್ಲ್ಯಾಕ್​ಬೆರಿ ಹಣ್ಣುಗಳು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತವೆ. ಇದು ತೂಕ ಇಳಿಸಲು ಅತ್ಯುತ್ತಮವಾದ ಆಯ್ಕೆಯಾಗಿದೆ. ಇವುಗಳು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ, ಇವುಗಳಲ್ಲಿ ಅಗತ್ಯ ಪೋಷಕಾಂಶಗಳು ಹೆಚ್ಚಾಗಿರುತ್ತವೆ. ಇವು ಹೆಚ್ಚುವರಿ ಕ್ಯಾಲೊರಿಗಳನ್ನು ಸೇವಿಸದೆಯೇ ನೀವು ತೃಪ್ತಿಯನ್ನು ಅನುಭವಿಸಲು ಸಹಾಯ ಮಾಡುತ್ತದೆ.

ದ್ರಾಕ್ಷಿ ಹಣ್ಣು:

ಹೆಚ್ಚಿನ ನೀರಿನ ಅಂಶ ಮತ್ತು ಕಡಿಮೆ ಕ್ಯಾಲೋರಿ ಸಾಂದ್ರತೆಯಿಂದಾಗಿ ದ್ರಾಕ್ಷಿ ಹಣ್ಣು ಸಾಮಾನ್ಯವಾಗಿ ತೂಕ ಇಳಿಸಲು ಸಹಾಯ ಮಾಡುವ ಹಣ್ಣಾಗಿದೆ. ಇದು ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಕೊಬ್ಬನ್ನು ಕರಗಿಸಲು ಸಹಾಯ ಮಾಡುವ ಸಂಯುಕ್ತಗಳನ್ನು ಸಹ ಒಳಗೊಂಡಿದೆ. ಊಟಕ್ಕೆ ಮುಂಚೆ ದ್ರಾಕ್ಷಿ ಹಣ್ಣು ತಿನ್ನುವುದು ಹಸಿವು ಮತ್ತು ಕ್ಯಾಲೋರಿ ಸೇವನೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Weight Gain: ಇದ್ದಕ್ಕಿದ್ದಂತೆ ನಿಮ್ಮ ತೂಕ ಹೆಚ್ಚಾಗಲು ಇದೂ ಕಾರಣವಿರಬಹುದು!

ಕಿವಿ ಹಣ್ಣು:

ಕಿವಿ ಹಣ್ಣು ಪೋಷಕಾಂಶಭರಿತವಾದ ಹಣ್ಣಾಗಿದೆ. ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ. ಇದು ಆಕ್ಟಿನಿಡಿನ್ ಎಂಬ ಕಿಣ್ವವನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಉಬ್ಬುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿವಿ ಹಣ್ಣು ಒಟ್ಟಾರೆ ಆರೋಗ್ಯವನ್ನು ಬೆಂಬಲಿಸಲು ಉತ್ತಮ ಪ್ರಮಾಣದ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ.

ಪಪ್ಪಾಯಿ:

USDA ಪ್ರಕಾರ, 100 ಗ್ರಾಂ ಪಪ್ಪಾಯಿಯ ಸೇವೆಯು ಕೇವಲ 43 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಮತ್ತು ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪಪ್ಪಾಯಿಯನ್ನು ಕರುಳಿನ ಸ್ನೇಹಿ ಹಣ್ಣು ಎಂದೂ ಕರೆಯುತ್ತಾರೆ. ಏಕೆಂದರೆ ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ