AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಮಡಿಕೆಯಲ್ಲಿಟ್ಟ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ಗೊತ್ತಾ?

ಮಣ್ಣಿನ ಮಡಕೆ ಅಥವಾ ಮಟ್ಕಾ ಬೇಸಿಗೆಯಲ್ಲಿ ಬಹಳ ಉಪಯುಕ್ತವಾಗಿದೆ. ಇದು ನೈಸರ್ಗಿಕವಾಗಿ ನೀರನ್ನು ತಂಪಾಗಿರಿಸುವುದು ಮಾತ್ರವಲ್ಲದೆ, ಜೀರ್ಣಕ್ರಿಯೆಗೆ ಸಹಾಯ ಮಾಡುದರಿಂದ ಹಿಡಿದು ಅಪಾರ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಬೇಸಿಗೆಯಲ್ಲಿ ಮಡಿಕೆಯಲ್ಲಿಟ್ಟ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳ ಬಗ್ಗೆ ಗೊತ್ತಾ?
ಮಡಿಕೆಯಲ್ಲಿಟ್ಟ ನೀರಿನ ಪ್ರಯೋಜನಗಳುImage Credit source: Stylecraze
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on:Apr 25, 2023 | 2:37 PM

ಈ ಬಾರಿಯ ಬೇಸಿಗೆ ಹಿಂದೆಂದಿಗಿಂತಲೂ ಪ್ರಕರವಾಗಿದೆ. ನಿರಂತರ ಬಾಯಾರಿಕೆ ತಣಿಸಲು ತಣ್ಣೀರು ಕುಡಿಯುವ ಹಂಬಲವೂ ಇದೆ. ಆರೋಗ್ಯ ತಜ್ಞರ ಪ್ರಕಾರ, ನಿರ್ಜಲೀಕರಣವನ್ನು ತಡೆಗಟ್ಟಲು ಸುಡುವ ಶಾಖದ ಸಮಯದಲ್ಲಿ ಹೈಡ್ರೇಟ್ ಮಾಡುವುದು ಹೆಚ್ಚು ಮುಖ್ಯ, ಇದನ್ನು ನಿರ್ಲಕ್ಷಿಸಬಾರದು. ಆದ್ದರಿಂದ, ರೆಫ್ರಿಜರೇಟರ್ ಅನ್ನು ಆಗಾಗ್ಗೆ ತೆರೆಯುವುದು, ಪ್ರತಿದಿನ ಬಾಟಲಿಗಳನ್ನು ತುಂಬುವುದು ಈ ಎಲ್ಲ ಕೆಲಸಕ್ಕಿಂತ, ವಿಭಿನ್ನವಾದದ್ದನ್ನು ಪ್ರಯತ್ನಿಸಿ. ಮಣ್ಣಿನ ಮಡಕೆ ಅಥವಾ ಮಟ್ಕಾವನ್ನು ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಕುಡಿಯುವ ನೀರನ್ನು ಸಂಗ್ರಹಿಸಲು ಬಳಸಲಾಗುತ್ತದೆ. ಇಲ್ಲಿಯವರೆಗೆ, ಅನೇಕ ಕುಟುಂಬಗಳು ಇದನ್ನು ಪ್ರಧಾನವಾಗಿ ಬಳಸುತ್ತಾರೆ. ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚು ಬಳಸುತ್ತಾರೆ. ನಾವು ಎಷ್ಟೇ ತಂಪು ನೀರು ಕುಡಿಯುತ್ತೇವೆ ಎಂದರು ನಮಗೆ ಬೇಸಿಗೆಯ ಶಾಖಕ್ಕೆ ಬಿಸಿನೀರನ್ನೇ ಕುಡಿದ ಹಾಗಾಗುತ್ತದೆ. ಹಾಗಾಗಿ ಮಡಿಕೆಯ ನೀರಷ್ಟು ತಂಪು ಯಾವುದು ಇಲ್ಲ. ಅದಲ್ಲದೆ ಮಟ್ಕಾದಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ.

ಮಣ್ಣಿನ ಮಡಕೆಯಿಂದ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳೇನು?

ಸ್ಟೀಲ್ ಮತ್ತು ಪ್ಲಾಸ್ಟಿಕ್ ಮತ್ತು ಗಾಜಿನ ಪಾತ್ರೆಗಳು ಅಥವಾ ಬಾಟಲಿಗಳಿಗೆ ಬದಲಿಯಾಗಿ ಕಾರ್ಯನಿರ್ವಹಿಸುವುದರ ಹೊರತಾಗಿ, ಮಟ್ಕಾ ನೀರನ್ನು ಕುಡಿಯುವುದರಿಂದ ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಖನಿಜಗಳು ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಅಲ್ಲದೆ, ಹೆಚ್ಚಿನ ತಾಪಮಾನದಲ್ಲಿ, ನೀವು ರೆಫ್ರಿಜರೇಟರ್ನಿಂದ ನೇರವಾಗಿ ನೀರನ್ನು ಕುಡಿದಾಗ, ದೇಹಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ನಂಬುತ್ತಾರೆ. ಅದಕ್ಕಾಗಿಯೇ ಮಣ್ಣಿನ ಮಡಕೆಗಳಿಂದ ನೀರನ್ನು ಕುಡಿಯಲು ಸೂಚಿಸುತ್ತಾರೆ. ಏಕೆಂದರೆ ಅವು ನೀರನ್ನು ನೈಸರ್ಗಿಕ ತಂಪಾಗಿಸುವ ಗುಣವನ್ನು ಹೊಂದಿವೆ.

ಇತರ ಕೆಲವು ಪ್ರಯೋಜನಗಳು ಹೀಗಿವೆ:

ನೀರಿನ ಕ್ಷಾರೀಯತೆಯನ್ನು ಹೆಚ್ಚಿಸುತ್ತದೆ:

ರೋಗಗಳು ಮತ್ತು ಸೋಂಕುಗಳು ಆಮ್ಲೀಯ ವಾತಾವರಣದಲ್ಲಿ ಬೆಳೆಯುತ್ತವೆ ಮತ್ತು ನಾವು ತಿನ್ನುವ ಹೆಚ್ಚಿನ ಆಹಾರವು ಆಮ್ಲೀಯವಾಗಿರುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಜೇಡಿಮಣ್ಣು ನೈಸರ್ಗಿಕವಾಗಿ ಕ್ಷಾರೀಯವಾಗಿರುವುದರಿಂದ, ಅದರಲ್ಲಿ ಸಂಗ್ರಹಿಸಿದ ನೀರು ಸೂಕ್ತವಾದ pH ಸಮತೋಲನವನ್ನು ಕಾಪಾಡುತ್ತದೆ ಮತ್ತು ಕುಡಿಯುವುದರಿಂದ ಕ್ಷಾರೀಯ ಗುಣಲಕ್ಷಣಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: ಕೋಪಗೊಂಡ ಸಂಗಾತಿಯೊಂದಿಗೆ ಹೇಗೆ ವ್ಯವಹರಿಸಬೇಕು? ಏನು ಮಾಡಬೇಕು? ಏನು ಮಾಡಬಾರದು? ಸಲಹೆಗಳು ಇಲ್ಲಿವೆ

ಶಾಖದ ಪ್ರಕರತೆಯನ್ನು ತಡೆಯುತ್ತದೆ:

ಮಣ್ಣಿನ ಮಡಕೆಯಿಂದ ಬರುವ ನೀರು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಅಲ್ಲದೆ ಮುಖ್ಯವಾಗಿ ದೇಹದ ಗ್ಲೂಕೋಸ್ ಅನ್ನು ಸರಿಯಾದ ಪ್ರಮಾಣದಲ್ಲಿ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ದೇಹವನ್ನು ಶಾಖದ ಆಘಾತದಿಂದ ತಡೆಯುತ್ತದೆ. ಪ್ರತಿದಿನ ಮಡಕೆಯಲ್ಲಿ ತಾಜಾ ನೀರನ್ನು ಸಂಗ್ರಹಿಸಿ ಕುಡಿಯುವುದು ಅತೀ ಉತ್ತಮ. ಆರೋಗ್ಯ ತಜ್ಞರು ಕೂಡ ಇದನ್ನೇ ಸೂಚಿಸುತ್ತಾರೆ.

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ:

ರೆಫ್ರಿಜರೇಟರ್ ಗಳಲ್ಲಿ ಇರಿಸಲಾದ ನೀರು ಅಪಾಯಕಾರಿಯಾಗಿದ್ದು. ಮಣ್ಣಿನ ಮಡಕೆಯಿಂದ ಕುಡಿಯುವ ನೀರು ಜೀರ್ಣಾಂಗವ್ಯೂಹವನ್ನು ರಕ್ಷಿಸುವುದಲ್ಲದೆ ಟೆಸ್ಟೋಸ್ಟೆರಾನ್ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಮಣ್ಣಿನ ಮಡಕೆಗಳಲ್ಲಿ ಇರುವ ಖನಿಜಗಳು ನೀರನ್ನು ಪರಿಣಾಮಕಾರಿ ಜೀರ್ಣಕ್ರಿಯೆಗೆ ಸೂಕ್ತವಾಗಿಸುತ್ತದೆ. ಮಣ್ಣಿನ ಮಡಕೆಯ ನೀರು ಯಾವುದೇ ರಾಸಾಯನಿಕಗಳನ್ನು ಹೊಂದಿರುವುದಿಲ್ಲ, ಆದ್ದರಿಂದ ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಅಲ್ಲದೆ, ಇದು ಜೀರ್ಣಾಂಗವ್ಯೂಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಅತಿಸಾರಕ್ಕೆ ಮದ್ದಾಗಿದೆ.

ಉರಿಯೂತವನ್ನು ಕಡಿಮೆ ಮಾಡುತ್ತದೆ:

ಮಣ್ಣಿನ ಮಡಕೆಯಲ್ಲಿನ ನೀರು ಆರೋಗ್ಯಕರ ಮತ್ತು ಪೌಷ್ಠಿಕಾಂಶದ ಖನಿಜಗಳಿಂದ ತುಂಬಿರುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಚರ್ಮದ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಮಣ್ಣಿನ ಮಡಕೆಯಲ್ಲಿ ನೀರು ತಂಪಾಗಿ ಉಳಿಯುವುದು ಹೇಗೆ?

ಮಟ್ಕಾದಲ್ಲಿ, ತಂಪಾಗಿಸುವಿಕೆಯು ಬಾಷ್ಪೀಕರಣದ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. ಅಲ್ಲಿ ಲೋಮನಾಳದ ಕ್ರಿಯೆಯು ಮಡಕೆಯಲ್ಲಿನ ನೀರು ದ್ರವದಿಂದ ಆವಿಯಾಗಿ ಬದಲಾಗಲು ಕಾರಣವಾಗುತ್ತದೆ, ಇದು ಒಳಗಿನ ನೀರಿನಿಂದ ಶಾಖವನ್ನು ತೆಗೆದುಕೊಳ್ಳುತ್ತದೆ, ಇದು ಹೊರಗಿನ ತಾಪಮಾನಕ್ಕಿಂತ ತಂಪಾಗಿರುತ್ತದೆ. ಅಲ್ಲದೆ, ಮಡಕೆಗಳನ್ನು ತಯಾರಿಸಲು ಬಳಸುವ ಜೇಡಿಮಣ್ಣು ಸಾಮಾನ್ಯವಾಗಿ ಖನಿಜ ಮತ್ತು ವಿದ್ಯುತ್ಕಾಂತೀಯ ಶಕ್ತಿಯಿಂದ ತುಂಬಿರುತ್ತದೆ. ಮತ್ತು ಮಡಕೆಯಲ್ಲಿ ನೀರನ್ನು ಸಂಗ್ರಹಿಸಿದಾಗ, ಜೇಡಿಮಣ್ಣು ಅದನ್ನು ಖನಿಜಗಳು ಮತ್ತು ವಿದ್ಯುತ್ಕಾಂತೀಯ ಶಕ್ತಿಯಿಂದ ಚಾರ್ಜ್ ಮಾಡುತ್ತದೆ, ಇದು ನಿಮಗೆ ಮತ್ತು ನಿಮ್ಮ ದೇಹಕ್ಕೆ ಪ್ರಯೋಜನವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:36 pm, Tue, 25 April 23

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ