Summer Health Tips: ತಾಪಮಾನವು 45 ಡಿಗ್ರಿಗಳನ್ನು ದಾಟಿದಾಗ ದೇಹದಲ್ಲಿ ಸಂಭವಿಸಬಹುದಾದ ಬದಲಾವಣೆಗಳು

ಈ ಸುಡುವ ಬೇಸಿಗೆಯ ದಿನಗಳಲ್ಲಿ, ಶಾಖದ ತೀವ್ರತೆಯು ಭಾರತದ ವಿವಿಧ ಭಾಗಗಳಲ್ಲಿನ ಜನರನ್ನು ತತ್ತರಿಸುವಂತೆ ಮಾಡಿದೆ. ಶಾಖವು 45 ಡಿಗ್ರಿಗಳಿಗಿಂತ ಹೆಚ್ಚಾದಾಗ ದೇಹವು ಅದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಮತ್ತು ದೇಹದಲ್ಲಿ ಆಗಬಹುದಾದ ಬದಲಾವಣೆಗಳ ಕುರಿತ ಮಾಹಿತಿ ಇಲ್ಲಿದೆ.

Summer Health Tips: ತಾಪಮಾನವು 45 ಡಿಗ್ರಿಗಳನ್ನು ದಾಟಿದಾಗ ದೇಹದಲ್ಲಿ ಸಂಭವಿಸಬಹುದಾದ ಬದಲಾವಣೆಗಳು
Summer Health Tips
Follow us
| Updated By: ಅಕ್ಷತಾ ವರ್ಕಾಡಿ

Updated on: May 24, 2023 | 3:33 PM

ಭಾರತದ ಹಲವು ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಶಾಖದ ಅಲೆಗಳು ಕಾಣಿಸಿಕೊಳ್ಳುತ್ತಿದೆ. ಜನರು ಈ ಸುಡುವ ತಾಪಮಾನಕ್ಕೆ ತತ್ತರಿಸಿ ಹೋಗಿದ್ದಾರೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ದೆಹಲಿಯ ನಜಾಫ್ ಗಢದಲ್ಲಿ 46.2 ಡಿಗ್ರಿ ಸೆಲ್ಸಿಯಸ್ ಗರಿಷ್ಟ ತಾಪಮಾನ ದಾಖಲಾಗಿದೆ. ಇಂತಹ ಏರುತ್ತಿರುವ ತಾಪಮಾನದೊಂದಿಗೆ, ನಮ್ಮ ದೇಹವು ನಿಸ್ಸಂಶಯವಾಗಿ ಅನಾನುಕೂಲತೆಯನ್ನು ಅನುಭವಿಸುತ್ತದೆ ಮತ್ತು ದೇಹವು ಹೆಚ್ಚಿದ ಶಾಖ ಮತ್ತು ಆರ್ದ್ರತೆಗೆ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತದೆ. ದೇಹದ ಸಾಮಾನ್ಯ ತಾಪಮಾನವು 37 ರಿಂದ 38 ಡಿಗ್ರಿಗಳವರೆಗೆ ಇರುತ್ತದೆ. ತಾಪಮಾನವು ಹೆಚ್ಚಾದಂತೆ ಮೆದುಳು ಸ್ನಾಯುಗಳನ್ನು ನಿಧಾನಗೊಳಿಸಲು ಸೂಚನೆ ನೀಡುತ್ತದೆ. ಬೆವರು ಗ್ರಂಥಿಗಳು ಹೆಚ್ಚು ಬೆವರು ಬಿಡುಗಡೆ ಮಾಡುತ್ತದೆ ಮತ್ತು ರಕ್ತದ ಹರಿವು ವೇಗವಾಗಿ ಹೆಚ್ಚುತ್ತದೆ, ಇದು ದೇಹದಲ್ಲಿ ಹೆಚ್ಚಿನ ಶಾಖವನ್ನು ಉತ್ಪಾದಿಸಲು ಕಾರಣವಾಗುತ್ತದೆ. ತಾಪಮಾನವು 45 ಡಿಗ್ರಿ ಅಥವಾ ಅದಕ್ಕಿಂತ ಹೆಚ್ಚಿದಾಗ ಮಾನವನ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಇಲ್ಲಿದೆ.

ವಿಪರೀತ ಶಾಖಕ್ಕೆ ನಿಮ್ಮ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ:

ಅತಿಯಾದ ಬೆವರು:

ಹೆಚ್ಚಿದ ತಾಪಮಾನಕ್ಕೆ ದೇಹದ ಸಾಮಾನ್ಯ ಮತ್ತು ತಕ್ಷಣದ ಪ್ರತಿಕ್ರಿಯೆಯೆಂದರೆ ಬೆವರುವಿಕೆ. ಬೆವರುವಿಕೆಯು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆವರುವಿಕೆಯು ನಮ್ಮ ದೇಹದ ನೈಸರ್ಗಿಕ ತಂಪಾಗಿಸುವ ಕಾರ್ಯವಿಧಾನವಾಗಿದೆ. ತಾಪಮಾನವು 45 ಡಿಗ್ರಿಗಳಿಗಿಂತ ಹೆಚ್ಚಾದಾಗ ಬೆವರು ಗ್ರಂಥಿಗಳು ಬೆವರು ಬಿಡುಗಡೆ ಮಾಡಲು ಹೆಚ್ಚು ಶ್ರಮಿಸುತ್ತದೆ. ಬೆವರುವಿಕೆಯು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಅಧಿಕ ಬಿಸಿಯಾಗುವಿಕೆಯನ್ನು ತಡೆಯುತ್ತದೆ. ಇದು ಎಲೆಕ್ಟ್ರೋಲೈಟ್ ಮತ್ತು ನೀರಿನ ನಷ್ಟವನ್ನು ಉಂಟುಮಾಡುತ್ತದೆ. ಇದರಿಂದ ಈ ಕಠಿಣ ಸಮಯದಲ್ಲಿ ನಿರ್ಜಲೀಕರಣ ಮತ್ತು ಅದರ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಾಕಷ್ಟು ಪ್ರಮಾಣದಲ್ಲಿ ದ್ರವಾಂಶವನ್ನು ಸೇವನೆ ಮಾಡುವ ಮೂಲಕ ಪುನರ್ಜಲೀಕರಣ ಮಾಡುವುದು ಅತ್ಯಗತ್ಯ.

ರಕ್ತನಾಳಗಳ ವಿಸ್ತರಣೆ:

ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಒಡ್ಡಿಕೊಂಡಾಗ, ದೇಹದಲ್ಲಿನ ರಕ್ತನಾಳಗಳು ವಾಸೋಡಿಲೇಷನ್ ಎಂದು ಕರೆಯಲ್ಪಡುವ ಪ್ರಕ್ರಿಯೆಯನ್ನು ವಿಸ್ತರಿಸಲು ಪ್ರಾರಂಭಿಸುತ್ತವೆ. ವಾಸೋಡಿಲೇಷನ್ ಎನ್ನುವುದು ಹೆಚ್ಚಿದ ಶಾಖಕ್ಕೆ ಪ್ರತಿಕ್ರಿಯೆಯಾಗಿ ರಕ್ತನಾಳಗಳು ವಿಸ್ತರಿಸುವ ಪ್ರಕ್ರಿಯೆಯಾಗಿದೆ. ರಕ್ತನಾಳಗಳ ಈ ವಿಸ್ತರಣೆಯು ಶಾಖದ ಹರಡುವಿಕೆಗೆ ಕಾರಣವಾಗುತ್ತದೆ. ಮತ್ತು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಕೆಲವೊಮ್ಮೆ ಈ ರಕ್ತನಾಳಗಳ ವಿಸ್ತರಣೆಯು ಕಡಿಮೆ ರಕ್ತದೊತ್ತಡದ ಮಟ್ಟಗಳಿಗೆ ಕಾರಣವಾಗಬಹುದು. ಇದು ಮತ್ತಷ್ಟು ತಲೆತಿರುಗುವಿಕೆ ಅಥವಾ ಮೂರ್ಛೆ ಹೋಗುವಿಕೆಗೆ ಕಾರಣವಾಗುತ್ತದೆ.

ಇದನ್ನೂ ಓದಿ:

ತ್ವರಿತ ಹೃದಯ ಬಡಿತ:

ಮಾನವನ ದೇಹವು ಸುಡುವ ಶಾಖವನ್ನು ಅನುಭವಿಸಿದಾಗ, ಹೃದಯ ಬಡಿತವು ಹೆಚ್ಚಾಗುತ್ತದೆ. ಮಾನವನ ದೇಹವು ಹೆಚ್ಚಿದ ತಾಪಮಾನವನ್ನು ಒತ್ತಡವಾಗಿ ತೆಗೆದುಕೊಳ್ಳುತ್ತದೆ ಮತ್ತು ದೇಹದ ವಿವಿಧ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಸಾಗಿಸಲು ಹೃದಯದ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಅದಕ್ಕೆ ಪ್ರತಿಕ್ರಿಯಿಸುತ್ತದೆ. ಈಗಾಗಲೇ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಜನರು ಹೆಚ್ಚಿನ ಶಾಖದ ಸಮಯದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಚರ್ಮದ ಬದಲಾವಣೆ:

ಹೆಚ್ಚಿನ ತಾಪಮಾನಕ್ಕೆ ಒಡ್ಡಿಕೊಳ್ಳುವುದರಿಂದ ಸನ್ ಬರ್ನ್, ಶುಷ್ಕ ತ್ವಚೆಯಂತಹ ವಿವಿಧ ಚರ್ಮ ಸಂಬಂಧಿತ ಸಮಸ್ಯೆಗಳು ಉಂಟಾಗಬಹುದು. ತೀವ್ರವಾದ ಶಾಖವು ಚರ್ಮವನ್ನು ಒಣಗಿಸಬಹುದು ಮತ್ತು ಉರಿಯೂತ ಹಾಗೂ ಚರ್ಮವು ಕೆಂಪು ಬಣ್ಣಕ್ಕೆ ತಿರುಗಲು ಕಾರಣವಾಗಬಹುದು. ಸೂರ್ಯನ ನೇರಳಾತೀತ ಕಿರಣವು ದೀರ್ಘಾವಧಿಯ ಚರ್ಮದ ಹಾನಿಯ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಸೂರ್ಯನ ಹಾನಿಕಾರಕ ನೇರಳಾತೀತ ಕಿರಣಗಳಿಂದ ಚರ್ಮವನ್ನು ರಕ್ಷಿಸಲು ಪ್ರತಿನಿತ್ಯ ತ್ವಚೆಗೆ ಸನ್ಸ್ಕ್ರೀನ್ ಅನ್ವಯಿಸಬೇಕು.

ಶಾಖದ ಬಳಲಿಕೆ ಮತ್ತು ಶಾಖದ ಹೊಡೆದ:

ತೀವ್ರವಾದ ಬಿಸಿಲಿನ ಶಾಖವು, ಶಾಖದ ಬಳಲಿಕೆ ಮತ್ತು ಶಾಖದ ಹೊಡೆತದಂತಹ ಶಾಖಸಂಬಂಧಿತ ಕಾಯಿಲೆಗಳಿಗೆ ಕಾರಣವಾಗುತ್ತದೆ. ಅತಿಯಾದ ಬೆವರುವಿಕಯಿಂದ ದೇಹವು ಗಮನಾರ್ಹ ಪ್ರಮಾಣದ ನೀರು ಮತ್ತು ಎಲೆಕ್ಟ್ರೋಲೈಟ್ ಅಂಶಗಳನ್ನು ಕಳೆದುಕೊಳ್ಳುತ್ತದೆ. ಇದರಿಂದಾಗಿ ಶಾಖದ ಬಳಲಿಕೆ ಉಂಟಾಗುತ್ತದೆ. ಪರಿಣಾಮವಾಗಿ ತಲೆ ತಿರುಗುವಿಕೆ, ಆಯಾಸ, ವಾಕರಿಕೆ ಮತ್ತು ಸ್ನಾಯುಗಳ ಸೆಳೆತಗಳಂತ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಜೀವನಶೈಲಿಗೆ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್