AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Precautions: ಬೇಸಿಗೆ ಕಾಲದಲ್ಲಿ ಸುಡುವ ಬಿಸಿಲಿನಿಂದ ಹೀಗಿರಲಿ ನಿಮ್ಮ ರಕ್ಷಣೆ

ಸೂರ್ಯನಿಗೆ ಒಡ್ಡಿಕೊಳ್ಳುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕಾಗಿ ನೀವು ಪೂರ್ವಭಾವಿಯಾಗಿ ಸಿದ್ಧತೆ ಹೀಗಿರಲಿ.

Summer Precautions: ಬೇಸಿಗೆ ಕಾಲದಲ್ಲಿ ಸುಡುವ ಬಿಸಿಲಿನಿಂದ ಹೀಗಿರಲಿ ನಿಮ್ಮ ರಕ್ಷಣೆ
ಪ್ರಾತಿನಿಧಿಕ ಚಿತ್ರImage Credit source: publictv.in
ಗಂಗಾಧರ​ ಬ. ಸಾಬೋಜಿ
|

Updated on: Mar 06, 2023 | 7:00 AM

Share

ಮಾರ್ಚ್​​ ತಿಂಗಳಿನಿಂದಲೇ ಉರಿ ಬಿಸಿಲು (Summer) ಶುರುವಾಗಿದೆ. ಈಗಲೇ ಇಷ್ಟೊಂದು ಬಿಸಿಲಿರುವಾಗಿ ಇನ್ನು ಏಪ್ರಿಲ್, ಮೇ ತಿಂಗಳಲ್ಲಿ ಹೇಗಿರುತ್ತೆ ಎಂಬ ಆತಂಕ ಹಲವರದ್ದು. ಕಳೆದ 100 ವರ್ಷಗಳಲ್ಲಿ ಕಾಣದ ಬಿಸಿಲನ್ನು ನಾವು 2022ರಲ್ಲಿ ನೋಡಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನರು ತಂಪು ಪಾನೀಯ, ಛತ್ರಿಗಳ ಮೊರೆ ಹೋಗುತ್ತಿದ್ದಾರೆ. ಬಿಸಿಲು ಮತ್ತು ಬೆವರು ಇವೆರಡು ತ್ವಚೆಯನ್ನು ಹಾಳು ಮಾಡುತ್ತದೆ. ಇದರ ಜೊತೆಗೆ ತ್ವಚೆಯನ್ನು ಸೂರ್ಯನ ಬೆಳಕಿನಿಂದ ಕಾಪಾಡಿಕೊಳ್ಳುವುದು ಸಹ ತುಂಬಾ ಮುಖ್ಯವಾಗಿದೆ. ಸೂರ್ಯನಿಗೆ ಒಡ್ಡಿಕೊಳ್ಳುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕಾಗಿ ನೀವು ಪೂರ್ವಭಾವಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: International Women’s Day 2023: ಮಹಿಳೆಯರೇ…! ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

ಬಿಸಿಲಿನಿಂದ ರಕ್ಷಿಸಿಕೊಳ್ಳುವ ಮಾರ್ಗಗಳು

  1. ನಿರ್ಜಲೀಕರಣವನ್ನು ತಪ್ಪಿಸಲು ಬಾಯಾರಿಕೆಯಿಲ್ಲದಿದ್ದರೂ ಆಗಾಗ ನೀರು ಕುಡಿಯಿರಿ.
  2. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ನಿಂಬೆ ರಸ, ಮಜ್ಜಿಗೆ/ಲಸ್ಸಿ, ಹಣ್ಣಿನ ರಸಗಳನ್ನು ಸ್ವಲ್ಪ ಉಪ್ಪು ಸೇರಿಸಿ ಸೇವಿಸಿ.
  3. ತೆಳುವಾದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ. ಹಾಗೆಯೇ ಹೊರಗೆ ಹೋಗುವಾಗ ಛತ್ರಿ, ಟೋಪಿ, ಟವೆಲ್ ಬಳಸಿ. ಮತ್ತು ಬಿಸಿಲು ನೇರವಾಗಿ ತಾಗದಂತೆ ನೋಡಿಕೊಳ್ಳಿ.
  4. ಬಿಸಿಲಿನ ಅವಧಿಯಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿ ಮಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆದಿಡಿ.
  5. ಆಲ್ಕೋಹಾಲ್, ಚಹಾ, ಕಾಫಿ, ಕಾರ್ಬೊನೇಟೆಡ್ ತಂಪು ಪಾನೀಯಗಳು ಮತ್ತು ಹೆಚ್ಚಿನ ಪ್ರಮಾಣದ ಸಕ್ಕರೆಯೊಂದಿಗೆ ಪಾನೀಯಗಳನ್ನು ಕುಡಿಯುವುದನ್ನು ತಪ್ಪಿಸಿ. ಇವುಗಳು ಹೆಚ್ಚು ದೇಹದ ದ್ರವವನ್ನು ಕಳೆದುಕೊಳ್ಳಲು ಕಾರಣವಾಗಬಹುದು.
  6. ನಿಲ್ಲಿಸಿದ ವಾಹನದಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ. ಏಕೆಂದರೆ ವಾಹನದೊಳಗಿನ ತಾಪಮಾನವು ಅವರ ಜೀವಕ್ಕೆ ಅಪಾಯಕಾರಿ.
  7. ವಾಕರಿಕೆ ಅಥವಾ ವಾಂತಿ, ತಲೆನೋವು, ವಿಪರೀತ ಬಾಯಾರಿಕೆ, ಕಡು ಹಳದಿ ಮೂತ್ರದ ಜೊತೆಗೆ ಮೂತ್ರ ವಿಸರ್ಜನೆ ಕಡಿಮೆಯಾಗುವುದು, ತ್ವರಿತ ಉಸಿರಾಟ, ತ್ವರಿತ ಹೃದಯ ಬಡಿತದಂತಹ ಲಕ್ಷಣಗಳು ಕಂಡುಬಂದರೆ, ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ.

ಮತ್ತಷ್ಟು ಜಿವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!