AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ

ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಈ ಉರಿ ಬಿಸಿಲಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಮನೆಯಿಂದ ಹೊರಗೆ ಹೋಗುವಂತಹ ಸಂದರ್ಭದಲ್ಲಿ ಕೆಲವೊಂದು ಅಗತ್ಯ ವಸ್ತುಗಳನ್ನು ತಪ್ಪದೇ ಕೊಂಡೊಯ್ಯಬೇಕಾಗುತ್ತದೆ. ಹಾಗಿದ್ರೆ ಉರಿ ಬಿಸಿಲಿನಿಂದ ರಕ್ಷಣೆ ಪಡೆಯಲು ಮನೆಯಿಂದ ಹೊರಗೆ ಹೋಗುವಾಗ ನಿಮ್ಮ ಬಳಿ ಯಾವೆಲ್ಲಾ ವಸ್ತುಗಳು ಇರ್ಲೇಬೇಕು ಎಂಬುದನ್ನು ತಿಳಿದುಕೊಳ್ಳಿ.

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on: Apr 19, 2026 | 5:05 PM

Share

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ, ನಿರ್ಜಲೀಕರಣ ಮತ್ತು ಬಿಸಿಲಿನ ಬೇಗೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತವೆ. ಹಾಗಿದ್ರೆ ಈ ಉರಿ ಬಿಸಿಲಲ್ಲಿ ಮನೆಯಿಂದ ಹೊರಗೆ ಹೋಗುವಾಗ ಯಾವೆಲ್ಲಾ ವಸ್ತುಗಳನ್ನು ಕೊಂಡೊಯ್ಯಬೇಕು ಎಂಬುದನ್ನು ನೋಡೋಣ ಬನ್ನಿ.

ಬೇಸಿಗೆಯಲ್ಲಿ ಮನೆಯಿಂದ ಹೊರಗೆ ಹೋಗುವಾಗ ನಿಮ್ಮ ಬಳಿ ಈ ವಸ್ತುಗಳು ಇರಲಿ:

ನೀರಿನ ಬಾಟಲ್: ಈ ಸುಡುವ ಬಿಸಿಲಿನಲ್ಲಿ, ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಇಲ್ಲದಿದ್ದರೆ ನೀವು ಹಲವಾರು ಕಾಯಿಲೆಗಳಿಗೆ ಗುರಿಯಾಗಬಹುದು. ಈ ಸಮಯದಲ್ಲಿ ನಿರ್ಜಲೀಕರಣ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ  ಹೊರಗೆ ಹೋಗುವಾಗ ಅಗತ್ಯವಾಗಿ ನೀರಿನ ಬಾಟಲ್‌ ನಿಮ್ಮ ಜೊತೆ ಇಟ್ಟುಕೊಳ್ಳಿ. ಮತ್ತು ಆಗಾಗ್ಗೆ ನೀರನ್ನು ಸೇವನೆ ಮಾಡುತ್ತಲೇ ಇರಿ.

ಸನ್‌ಗ್ಲಾಸ್: ಬೇಸಿಗೆಯಲ್ಲಿ ಹೊರಗೆ ಹೋಗುವಾಗ ಯಾವಾಗಲೂ ನಿಮ್ಮ ಬ್ಯಾಗ್‌ನಲ್ಲಿ ಸನ್ಗ್ಲಾಸ್ ಅನ್ನು ಇಟ್ಟುಕೊಳ್ಳಬೇಕು. ಇವು ನಿಮ್ಮ ಕಣ್ಣುಗಳನ್ನು ಸೂರ್ಯನ ಪ್ರಕರ ಶಾಖದಿಂದ ರಕ್ಷಿಸಲು ಅತ್ಯಗತ್ಯ. ಅಲ್ಲದೆ ಸನ್‌ಗ್ಲಾಸ್ ಕಣ್ಣಿನ ಸೋಂಕನ್ನು ತಡೆಗಟ್ಟಲು ಸಹ ಸಹಾಯ ಮಾಡುತ್ತವೆ. ಅವು ಯಾವಾಗಲೂ ನಿಮ್ಮ ಬ್ಯಾಗ್‌ನಲ್ಲಿ ಇರಲೇಬೇಕು.

ಸನ್‌ಸ್ಕ್ರೀನ್:  ಸೂರ್ಯನ ಹಾನಿಕಾರಕ ಕಿರಣಗಳಿಂದ ನಿಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಲು ನೀವು ನಿಮ್ಮ ಬ್ಯಾಗ್‌ನಲ್ಲಿ ಯಾವಾಗಲೂ ಸನ್‌ಸ್ಕ್ರೀನ್‌ ಇಟ್ಟುಕೊಳ್ಳಿ.  ನಿಮ್ಮ ಚರ್ಮವು ಒಣಗಲು ಅಥವಾ ಒರಟಾಗಲು ಪ್ರಾರಂಭಿಸಿದರೆ, ನೀವು ತಕ್ಷಣ ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಿ.

ಇದನ್ನೂ ಓದಿ: ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಸುಲಭ ಸಲಹೆಗಳನ್ನು ಪ್ರಯತ್ನಿಸಿ

ಛತ್ರಿ: ಈ ಉರಿ ಬಿಸಿಲಿನಲ್ಲಿ ಹೊರಗೆ ಹೋಗುವ ಸಂದರ್ಭದಲ್ಲಿ ನೀವು ಖಂಡಿತವಾಗಿಯೂ ಒಂದು ಛತ್ರಿಯನ್ನು ಇಟ್ಟುಕೊಳ್ಳಬೇಕು. ಇದು ಸೂರ್ಯನ ಪ್ರಕರ ಶಾಖದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸ್ಕಾರ್ಫ್ : ಹೆಂಗಳೆಯರು ಹೊರಗೆ ಹೋಗುವ ಮೊದಲು ಖಂಡಿತವಾಗಿಯೂ ತಮ್ಮ ಬ್ಯಾಗಿನಲ್ಲಿ ಸ್ಕಾರ್ಫ್ ಇಟ್ಟುಕೊಳ್ಳಬೇಕು. ಇದು ನಿಮ್ಮನ್ನು  ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಬಿಸಿಲು ಮತ್ತು ಟ್ಯಾನಿಂಗ್ ಅನ್ನು ತಡೆಯುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ನೆಹರು ದಾಖಲೆ ಮುರಿದ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಭೇಟಿಯಾದ ಡಿಕೆ ಶಿವಕುಮಾರ್
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
36 ಸಾವಿರ ಕೋಟಿ ರೂ. ಲೂಟಿ ಆರೋಪ:ಲೋಕಾಯುಕ್ತಕ್ಕೂ ಬಿಜೆಪಿ ದೂರು
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಜೂನ್​​ 12ರಂದು ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್​​ ಭೇಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ಬಿಸಿಎಂ ಹಾಸ್ಟೆಲ್​​​​​ನಲ್ಲಿ ಹುಡುಗ-ಹುಡುಗಿಯರಿಂದ ಬಿಂದಾಸ್ ಎಣ್ಣೆ ಪಾರ್ಟಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಏನಿದು ಕಸದಿಂದ ಕಾಸು? ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ?
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಸಕಲೇಶಪುರದಲ್ಲಿ ಕರುಗಳನ್ನು ಬೆನ್ನಟ್ಟಿದ ಆನೆ ಮರಿ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ
ಅಪ್ರಾಪ್ತನಿಗೆ ಸಿಗರೇಟ್ ಸೇದಿಸಿ,ಬ್ಲಾಕ್‌ಮೇಲ್ ಮಾಡಿ 120 ಗ್ರಾಂ ಚಿನ್ನ ದರೋಡ