AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Solstice 2024: ಜೂ.21 ಅತೀ ದೀರ್ಘ ದಿನ ಏಕೆ? ಹಗಲು ದೀರ್ಘವಾಗಿ, ರಾತ್ರಿ ಕಡಿಮೆಯಾಗಲು ಕಾರಣವೇನು?

ಜೂನ್ 21 ರಂದು ಅತಿ ದೀರ್ಘವಾದ ದಿನ. ಈ ದಿನ ಹಗಲು ದೀರ್ಘವಾಗಿದ್ದು, ರಾತ್ರಿ ಕಡಿಮೆಯಾಗಲು ಶುರುವಾಗುತ್ತದೆ. ಇದನ್ನೇ ಅಯನ ಸಂಕ್ರಾಂತಿ ಎನ್ನಲಾಗುತ್ತದೆ. ಹಾಗಾದ್ರೆ ಈ ದಿನದ ವಿಶೇಷತೆಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Summer Solstice 2024: ಜೂ.21 ಅತೀ ದೀರ್ಘ ದಿನ ಏಕೆ? ಹಗಲು ದೀರ್ಘವಾಗಿ, ರಾತ್ರಿ ಕಡಿಮೆಯಾಗಲು ಕಾರಣವೇನು?
Summer Solstice 2024
ಸಾಯಿನಂದಾ
| Edited By: |

Updated on: Jun 20, 2024 | 6:49 PM

Share

ಜೂನ್ ಹಾಗೂ ಡಿಸೆಂಬರ್ ವರ್ಷದಲ್ಲಿ ಎರಡು ಬಾರಿ ಅಯನ ಸಂಕ್ರಾಂತಿ ಸಂಭವಿಸುತ್ತದೆ. ಹೌದು, ಜೂನ್ 21 ರಂದು ಹಗಲು ದೀರ್ಘವಾಗಿದ್ದು, ರಾತ್ರಿ ಸಣ್ಣದಿರುತ್ತದೆ. ಈ ದಿನವನ್ನು ಬೇಸಿಗೆ ಅಯನ ಸಂಕ್ರಾಂತಿ ಎನ್ನುತ್ತೇವೆ. ಭೂಮಿಯ ಜ್ಯಾಮಿತಿ ಮತ್ತು ಸೂರ್ಯನ ಸುತ್ತ ಅದರ ಚಲನೆಯಿಂದ, ದಕ್ಷಿಣ ಗೋಳಾರ್ಧದಲ್ಲಿ ಬೇಸಿಗೆಯ ಅಯನ ಸಂಕ್ರಾಂತಿ ಹಾಗೂ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿ ಸಂಭವಿಸುತ್ತದೆ. ಉತ್ತರ ಗೋಳಾರ್ಧದಲ್ಲಿ ಬೇಸಿಗೆ ಅಯನ ಸಂಕ್ರಾಂತಿಯು ಜೂನ್ 21 ರಿಂದ 23 ರವರೆಗೆ ಸಂಭವಿಸಿದರೆ, ಇಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯು ಡಿಸೆಂಬರ್ 21 ರಿಂದ 23 ರವರೆಗೆ ನಡೆಯುತ್ತದೆ.

ಏನಿದು ಅತೀ ದೀರ್ಘ ಹಗಲುಳ್ಳ ದಿನ?

ಬೇಸಿಗೆಯ ಅಯನ ಸಂಕ್ರಾಂತಿಯ ದಿನದಂದು ಸೂರ್ಯೋದಯವು ಬೇಗ ಸಂಭವಿಸಿ, ಸೂರ್ಯನು ತಡವಾಗಿ ಅಸ್ತನಾಗುತ್ತಾನೆ. ಸೂರ್ಯನು ತನ್ನ ಕಾಲ್ಪನಿಕ ಉಷ್ಣವಲಯದ ಕರ್ಕಾಟಕ ವೃತ್ತ ಅಥವಾ 23.5 N ಅಕ್ಷಾಂಶದ ಮೇಲೆ ನೇರವಾಗಿ ಚಲಿಸುವಾಗ ಈ ಸಂಕ್ರಾಂತಿ ಸಂಭವಿಸುವುದು. ಇದಕ್ಕೆ ವಿರುದ್ದವಾಗಿ ಉತ್ತರ ಗೋಳಾರ್ಧದಲ್ಲಿ ಅತ್ಯಂತ ಚಿಕ್ಕ ಹಗಲಿದ್ದು ರಾತ್ರಿ ದೊಡ್ಡದಿರುತ್ತದೆ. ಅದಲ್ಲದೇ, ಅತಿ ಚಿಕ್ಕ ಹಗಲು, ಅತಿದೊಡ್ಡ ರಾತ್ರಿಯೂ ಡಿಸೆಂಬರ್ 21 ಮತ್ತೆ ಸಂಭವಿಸುತ್ತದೆ. ಆ ದಿನವನ್ನು ಕೂಡ ಅತಿದೊಡ್ಡ ರಾತ್ರಿಯನ್ನು ಹೊಂದಿರುವ ದಿನ ಎನ್ನಲಾಗುತ್ತದೆ.

ಯಾವೆಲ್ಲಾ ದೇಶಗಳಿಗೆ ದೀರ್ಘ ಹಗಲು?

ಜೂನ್ ಅಯನ ಸಂಕ್ರಾಂತಿ ಅಥವಾ ಬೇಸಿಗೆ ಅಯನ ಸಂಕ್ರಾಂತಿಯಂದು ಯುಕೆ, ಯುಎಸ್ಎ, ಕೆನಡಾ, ರಷ್ಯಾ, ಭಾರತ ಮತ್ತು ಚೀನಾ ದೇಶಗಳಿಗೆ ದೀರ್ಘ ಹಗಲುಳ್ಳ ದಿನವಾಗಿದೆ. ಆದರೆ ಚಳಿಗಾಲ ಸಮಯವಾಗಿರುವ ಆಸ್ಟ್ರೇಲಿಯಾ, ಅರ್ಜೆಂಟೀನಾ, ಚಿಲಿ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ದೇಶಗಳಿಗೆ ಕಡಿಮೆ ಹಗಲುಳ್ಳ, ದೀರ್ಘ ರಾತ್ರಿಯುಳ್ಳ ದಿನವಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು