AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರಕ್ಕೆ ಹೋಗಲು ಪ್ಲಾನ್ ಮಾಡುತ್ತಿರುವವರಿಗೆ ಸಿಹಿ ಸುದ್ದಿ; IRCTC ವತಿಯಿಂದ 6 ದಿನದ ಜನ್ನತ್-ಎ-ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಣೆ

ಕಾಶ್ಮೀರಕ್ಕೆ ಹೋಗಬೇಕು ಎಂದುಕೊಂಡವರಿಗೆ IRCTC ಸಿಹಿ ಸುದ್ದಿ ನೀಡಿದ್ದು 6 ದಿನಗಳ ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಿಸಿದೆ. ಈ ಪ್ಯಾಕೇಜ್​ನಲ್ಲಿ ಊಟ, ವಸತಿ ಸೇರಿದಂತೆ ಎಲ್ಲಾ ರೀತಿಯ ವೆಚ್ಚ ಒಳಗೊಂಡಿದೆ.

ಕಾಶ್ಮೀರಕ್ಕೆ ಹೋಗಲು ಪ್ಲಾನ್ ಮಾಡುತ್ತಿರುವವರಿಗೆ ಸಿಹಿ ಸುದ್ದಿ; IRCTC ವತಿಯಿಂದ 6 ದಿನದ ಜನ್ನತ್-ಎ-ಕಾಶ್ಮೀರ ಟೂರ್ ಪ್ಯಾಕೇಜ್ ಘೋಷಣೆ
ಕಾಶ್ಮೀರ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 17, 2023 | 8:00 AM

Share

ಭೂಮಿ ಮೇಲಿನ ಸ್ವರ್ಗ ಎಂದೆ ಕರೆಸಿಕೊಳ್ಳುವ ಜಮ್ಮು ಕಾಶ್ಮೀರ(Jammu Kashmir) ನೋಡಬೇಕೆಂಬುವುದು ಅನೇಕ ಜನರ ಆಸೆ. ಸದ್ಯ ಕಾಶ್ಮೀರದಲ್ಲಿ ಬೇಸಿಗೆಯ ರಜೆಯನ್ನು ಕಳೆಯಲು ಇಷ್ಟ ಪಡುವವರಿಗೆ ಐಆರ್​ಸಿಟಿಸಿ(IRCTC )ಶುಭ ಸುದ್ದಿ ನೀಡಿದೆ. ಭಾರತೀಯ ರೈಲ್ವೆ ಕಾಶ್ಮೀರ ಟೂರ್ ಪ್ಯಾಕೇಜ್(Jannat-e-Kashmir Tour Package) ಅನ್ನು ಘೋಷಿಸಿದೆ. 6-ದಿನಗಳ ಈ ಕಾಶ್ಮೀರ ಪ್ರವಾಸದ ಪ್ಯಾಕೇಜ್‌ನಲ್ಲಿ ಊಟ, ವಸತಿ ಮತ್ತು ವಿಮಾನ ದರ ಸೇರಿದಂತೆ ಎಲ್ಲಾ ಪ್ರಯಾಣ ವೆಚ್ಚಗಳು ಒಳಗೊಂಡಿವೆ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಭಾರತೀಯ ರೈಲ್ವೆಯ ಒಂದು ವಿಭಾಗವಾಗಿದ್ದು, ಈ ಕಾಶ್ಮೀರ ಪ್ರವಾಸದ ಪ್ಯಾಕೇಜ್​ಗೆ ಜನ್ನತ್-ಎ-ಕಾಶ್ಮೀರ್ ಎಂಬ ಹೆಸರು ನೀಡಲಾಗಿದೆ. ಈ ಪ್ಯಾಕೇಜ್ ಏಪ್ರಿಲ್ 9 ರಿಂದ ಪ್ರಾರಂಭವಾಗುತ್ತೆ.

ಕಾಶ್ಮೀರ ಟೂರ್ ಪ್ಯಾಕೇಜ್​ನಲ್ಲಿ ಏನೇನು ಸವಲತ್ತುಗಳಿವೆ?

ಈ ಪ್ಯಾಕೇಜ್​ನಲ್ಲಿ ನಿಮ್ಮ ರೌಂಡ್-ಟ್ರಿಪ್ ಎಕಾನಮಿ ಫ್ಲೈಟ್ ಟಿಕೆಟ್‌ಗಳನ್ನು ಕವರ್ ಮಾಡಲಾಗುವುದು. ಮತ್ತು ಶ್ರೀನಗರದಲ್ಲಿ ಬೋಟ್‌ ಹೌಸ್​ನಲ್ಲಿ ಒಂದು ರಾತ್ರಿ ಕಳೆಯಲು ಜೊತೆಗೆ ಹೋಟೆಲ್‌ನಲ್ಲಿ ನಾಲ್ಕು ರಾತ್ರಿ ತಂಗುವ ವೆಚ್ಚ ಭರಿಸಲಾಗುತ್ತೆ. ಅಲ್ಲದೆ, ಎಲ್ಲಾ ಪ್ರೇಕ್ಷಣೀಯ ಸ್ಥಳಗಳನ್ನು ನಾನ್-ಎಸಿ ವಾಹನದಲ್ಲಿ ಕರೆದುಕೊಂಡು ಹೋಗಿ ತೋರಿಸಲಾಗುತ್ತೆ. ಸೋನ್ಮಾರ್ಗ್, ಗುಲ್ಮಾರ್ಗ್, ಪಹಲ್ಗಾಮ್, ದಾಲ್ ಸರೋವರ ಮತ್ತು ಹಲವಾರು ಇತರ ರಮಣೀಯ ಸ್ಥಳಗಳನ್ನು ಈ ಪ್ಯಾಕೇಜ್ ಒಳಗೊಂಡಿದೆ.

ಇದನ್ನೂ ಓದಿ: Bharat Nepal Ashtha Yatra: ಮಾರ್ಚ್​ 31 ರಿಂದ ಭಾರತ ನೇಪಾಳ ಆಸ್ತಾ ಯಾತ್ರೆ ಆರಂಭಿಸಲಿದೆ ಭಾರತೀಯ ರೈಲ್ವೆ, ವಿವರಗಳು ಇಲ್ಲಿವೆ

IRCTC ಕಾಶ್ಮೀರ ಪ್ರವಾಸ ಪ್ಯಾಕೇಜ್ ದರ ಎಷ್ಟು?

ಕಾಶ್ಮೀರ ಪ್ರವಾಸದ ಪ್ಯಾಕೇಜ್‌ನ ವೆಚ್ಚವು 41,300 ರೂ ರಿಂದ ಪ್ರಾರಂಭವಾಗಿ 61,000 ವರೆಗೆ ಇರುತ್ತದೆ. ಒಬ್ಬ ವ್ಯಕ್ತಿಯ ಟಿಕೆಟ್‌ ದರ ಸುಮಾರು 60,100ರೂ ವರೆಗೂ ಹೋಗಬಹುದು. ಆದರೆ ಇಬ್ಬರು ಒಟ್ಟಿಗೆ ಪ್ರಯಾಣಿಸಿದರೆ ವೆಚ್ಚವು ಪ್ರತಿ ವ್ಯಕ್ತಿಗೆ 44,900ರೂಗೆ ಇಳಿಯುತ್ತದೆ. ಮೂರು ಜನರು ಒಟ್ಟಿಗೆ ಪ್ರಯಾಣಿಸುತ್ತಿದ್ದರೆ, ಪ್ರತಿ ವ್ಯಕ್ತಿಗೆ 44,000 ಗೆ ಇಳಿಯುತ್ತದೆ. ಹಾಸಿಗೆ ಇಲ್ಲದ ಮಕ್ಕಳ ಟಿಕೆಟ್ ದರ 41,300ರೂ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ